Prajwal Revanna: 35 ದಿನಗಳ ಅಜ್ಞಾತವಾಸಕ್ಕೆ ತೆರೆ: ಪ್ರಜ್ವಲ್ ರೇವಣ್ಣ ಎಸ್ಐಟಿ ವಶಕ್ಕೆ
ಬರೋಬ್ಬರಿ 35 ದಿನಗಳ ಕಾಲ ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಜೆಡಿಎಸ್ ಸಂಸದ, ಅಶ್ಲೀಯ ವಿಡಿಯೋ ಪ್ರಕರಣ ಆರೋಪಿ ಪ್ರಜ್ವಲ್ ರೇವಣ್ಣ ಅಂತಿಮವಾಗಿ ಬೆಂಗಳೂರಿಗೆ ವಾಪಸಾಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಲುಫ್ತಾನ್ಸ್ ಏರ್ ಲೈನ್ಸ್ ವಿಮಾನದಲ್ಲಿ ಜರ್ಮನಿಯ ಮೂನಿಕ್ ನಗರದಿಂದ ಬೆಂಗಳೂರಿಗೆ ಆಗಮಿಸಿದ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು ಎಸ್ಐಟಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿತ್ತು.

ಪ್ರಜ್ವಲ್ ರೇವಣ್ಣ ಆಗಮನ ಹಿನ್ನಲೆಯಲ್ಲಿ ಟರ್ಮಿನಲ್ -2 ಗೇಟ್ ಬಳಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿತ್ತು.
ಬಿಗಿ ಬಂದೋಬಸ್ತ್
ಅಹಿತಕರ ಘಟನೆ ನಡೆಯದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಸಿಐಡಿ ಕಚೇರಿ ಬಳಿ ಕೂಡ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಿಐಡಿ ಕಚೇರಿ ಮುಂದೆ ಬ್ಯಾರಿಕೇಡ್ ಹಾಕಲಾಗಿದ್ದು, 50 ಹೆಚ್ಚು ಪೊಲೀಸರು ಕಾವಲಿದ್ದಾರೆ.
#BreakingNews#Karnataka Sex Crimes Case:
— Mr. Shaz (@Wh_So_Serious) May 30, 2024
Accused #PrajwalRevanna has been arrested at Bengaluru's international airport. #Bengaluru#India pic.twitter.com/UCbexacg9q
ಇಮಿಗ್ರೇಷನ್ ಅಧಿಕಾರಿಗಳ ವಶಕ್ಕೆ
ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದ ನಂತರ ಅವರ ಬಂಧನಕ್ಕೆ ಲುಕ್ಔಟ್ ನೋಟಿಸ್ ಹೊರಡಿಸಲಾಗಿದ್ದರಿಂದ ಇಮಿಗ್ರೇಷನ್ ಅಧಿಕಾರಿಗಳು ಮೊದಲು ಅವರನ್ನು ವಶಕ್ಕೆ ಪಡೆದರು. ಬಳಿಕ ಎಸ್ಐಟಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು.
ಇಂದು ಬೆಳಗ್ಗೆ ಪ್ರಜ್ವಲ್ ರೇವಣ್ಣ ಆರೋಗ್ಯ ತಪಾಸಣೆ ನಡೆಸಲಿದ್ದು ಬಳಿಕ ನ್ಯಾಯಾಧೀಶರ ಮುಂದದೆ ಹಾಜರುಪಡಿಸಲಿದೆ. ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಿದೆ.
ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ಮತದಾನದ ಬಳಿಕ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಅದಾದ ಬಳಿಕ ಕಣ್ಮರೆಯಾಗಿದ್ದ ಅವರು, ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ತಾವು ಮೇ 30ರಂದು ಬೆಂಗಳೂರಿಗೆ ಬರುತ್ತಿರುವುದಾಗಿ ಮಾಹಿತಿ ನೀಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications