ಬೇಲೇಕೇರಿ ಬಂದರು ಎಸ್ ಐಟಿಯಿಂದ ಮರು ತನಿಖೆ
ಬೆಂಗಳೂರು, ನವೆಂಬರ್ 04: ಉತ್ತರಕನ್ನಡದ ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರನ್ನು ವಿದೇಶಕ್ಕೆ ಸಾಗಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ಒಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಬಿಜೆಪಿಯ ನಾಯಕರಿಗೆ ಸರಿಯಾದ ಆಘಾತ ಉಂಟು ಮಾಡಲು ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ.
ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಣೆ ಪ್ರಕರಣದ ತನಿಖೆಯ ಮೇಲುಸ್ತುವಾರಿಗಾಗಿ ರಚಿಸಿರುವ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷ, ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಈ ಸುಳಿವು ನೀಡಿದರು. ಶನಿವಾರ ಸಂಜೆ ವೇಳೆಗೆ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.
ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಕರ್ನಾಟಕದಲ್ಲಿ ನಡೆದ ಅದಿರು ಲೂಟಿಯ ಬ್ರಹ್ಮಾಂಡವನ್ನು ಬಯಲಿಗೆ ಎಳೆದಿದ್ದರು. ಅವರ ವರದಿ ಆಧರಿಸಿ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು. 15 ಪ್ರಕರಣಗಳ ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಈಗ ಎರಡು ಪ್ರಕರಣಗಳ ತನಿಖೆಯನ್ನು ಮುಕ್ತಾಯಗೊಳಿಸಿದೆ. ಇದರ ಬಗ್ಗೆ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಎಸ್ಐಟಿ ತನಿಖೆ ನಡೆಸುವ ಬಗ್ಗೆ ಸಚಿವ ಸಂಪುಟಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್.ಕೆ. ಪಾಟೀಲ ತಿಳಿಸಿದರು.

ಗಾಲಿ ಜನಾರ್ದನ ರೆಡ್ಡಿ ಆರೋಪಿ ನಂ.1
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಥಮ ಆರೋಪಿ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್ಬಾಬು, ಆನಂದ್ಸಿಂಗ್ ವಿರುದ್ಧವೂ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸೇರಿದಂತೆ 18 ಮಂದಿಯನ್ನು ಇದರಲ್ಲಿ ಉಲ್ಲೇಖಿಸಲಾಗಿತ್ತು. ನಂತರ ಎಲ್ಲರಿಗೂ ಜಾಮೀನು ಸಿಕ್ಕಿದ್ದು, ಸಿಬಿಐ ಕೂಡಾ ಈ ಪ್ರಕರಣದ ತನಿಖೆ ಕೈಬಿಟ್ಟಿದೆ.

ಆಸ್ತಿ ಮುಟ್ಟುಗೋಲು ಹಾಕುವ ಸಾಧ್ಯತೆ
‘ಅಕ್ರಮವಾಗಿ ಅದಿರು ಸಾಗಿಸಿದ ಆರೋಪ ಹೊತ್ತಿರುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆಯೂ ಉಪ ಸಮಿತಿ ಚರ್ಚಿಸಿದೆ. ಮುಟ್ಟುಗೋಲು ಹಾಕಿಕೊಳ್ಳಲು ತಾಂತ್ರಿಕ ಹಾಗೂ ಕಾನೂನಾತ್ಮಕ ಅಡಚಣೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ, ಕಾನೂನು ಇಲಾಖೆಯಿಂದ ಅಭಿಪ್ರಾಯ ಕೇಳಲಾಗಿದ್ದು, ಕಾನೂನು ಇಲಾಖೆಯ ಅಭಿಪ್ರಾಯ ಆಧರಿಸಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ನಿರ್ಧರಿಸಲಾಗುತ್ತದೆ.

ಅಪಾರ ಪ್ರಮಾಣದ ಅಕ್ರಮ ಪತ್ತೆ
ನವ ಮಂಗಳೂರಿನ ಬಂದರಿನಿಂದ 54, ಬೇಲೇಕೇರಿ ಬಂದರಿನಿಂದ 76 ಒಟ್ಟು 130 ಕಂಪನಿಗಳು ಈ ಅಕ್ರಮದಲ್ಲಿ ಭಾಗಿಯಾಗಿದ್ದು, ಸುಮಾರು 5,000 ಕೋಟಿ ರು ಮೌಲ್ಯದ 3.65 ಲಕ್ಷ ಟನ್ ಗಳಷ್ಟು ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗಿದೆ. ಇದಕ್ಕೆ ಯಾವುದೇ ಲೈಸನ್ಸ್, ಪರ್ಮಿಟ್ ಇಲ್ಲ. ಸರಕು ಸಾಗಣೆ ಕಂಪನಿಗಳು ಕೂಡಾ ಬೇನಾಮಿ ಹೆಸರಿನಲ್ಲಿವೆ.

ವಿಜಯನಗರ ಶಾಸಕ ಆನಂದ್ಸಿಂಗ್
ವಿಜಯನಗರ ಶಾಸಕ ಆನಂದ್ಸಿಂಗ್ ಒಡೆತನದ ವೈಷ್ಣವಿ ಮಿನರಲ್ಸ್ ಅಕ್ರಮವಾಗಿ ಬೇಲೇಕೇರಿ ಬಂದರಿನಿಂದ ಅದಿರು ಸಾಗಣೆ ಮಾಡಿದ ಆರೋಪವಿದೆ. ಜನವರಿ 2009 ರಿಂದ ಮೇ 2010ರ ಅವಧಿಯಲ್ಲಿ ಬೆಲೇಕೇರಿ ಬಂದರಿನಿಂದ ಮುಖ್ಯವಾಗಿ ಚೀನಾ, ಸಿಂಗಪುರ ಸೇರಿದಂತೆ ವಿದೇಶಕ್ಕೆ ಕಬ್ಬಿಣದ ಅದಿರನ್ನು ಸಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎನ್ನಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications