ಮೊಬೈಲ್ ಕದ್ದು ಐಎಂಇಐ ಬದಲಾಯಿಸುತ್ತಿದ್ದ ಚೋರರ ಸೆರೆ
ಬೆಂಗಳೂರು, ಜೂ.17: ಮೊಬೈಲ್ ಫೋನ್ಗಳನ್ನು ಕದ್ದು ಅವುಗಳ ಐಎಂಇಐ ನಂಬರ್ಗಳನ್ನು ಬದಲಾಯಿಸಿ ಮಾರಾಟ ಮಾಡುತ್ತಿದ್ದ ಆರು ಜನರನ್ನು ಉಪ್ಪಾರಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತನ್ನುಪಾಷ ಬಿನ್ ಸಮೀವುಲ್ಲಾ(32), ಹನೀಫ್ ಸೇಠ್ ಬಿನ್ ಮಹಮದ್ ಉಸ್ಮಾನ್ ಸೇಠ್(28), ಶಾಬಾಜ್ ಬಿನ್ ನವೀದ್ ಪಾಷ, (24), ರವಿ ಪ್ರಸಾದ್ ಪೂಂಜಾ (47), ಮಹಮದ್ ಹಸೀಬ್ ಬಿನ್ ಯೂನಿಸ್ಖಾನ್(24) ಬಂಧಿತ ಆರೋಪಿಗಳು.
ಆರೋಪಿಗಳಿಂದ 5 ಲಕ್ಷ ಬೆಲೆ ಬಾಳುವ 66 ಮೊಬೈಲ್ ಫೋನ್ಗಳು, 4 ಕಂಪ್ಯೂಟರ್ಗಳು, ಹಾಗೂ ಐಎಂಇಐ ನಂಬರ್ ಪರಿವರ್ತನೆ ಮಾಡುವ ಸಾಫ್ಟ್ವೇರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರು ಉಪ್ಪಾರಪೇಟೆ ಪೊಲೀಸ್ ಠಾಣೆ ಸರಹದ್ದಿನ ಗಾಂಧಿನಗರದ ನ್ಯಾಷನಲ್ ಮಾರ್ಕೆಟ್, ಬರ್ಮಾ ಬಜಾರ್ ಮತ್ತು ಎಸ್.ಪಿ.ರಸ್ತೆ ಹಾಗೂ ಜೆ.ಸಿ.ರಸ್ತೆಗಳಲ್ಲಿರುವ ಮೊಬೈಲ್ ಅಂಗಡಿಗಳಿಂದ ಮೊಬೈಲ್ನ್ನು ಕದ್ದು ಬಳಿಕ ಸಾಫ್ಟ್ವೇರ್ ಬಳಸಿ ಮೂಲ ಐಎಂಇಐ ನಂಬರ್ ಬದಲಾಯಿಸಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

2.50 ಲಕ್ಷ ಮೌಲ್ಯದ ರಕ್ತ ಚಂದನ ವಶ:
ಅಕ್ರಮವಾಗಿ ರಕ್ತ ಚಂದನ ಮರಗಳ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ಉಪ್ಪಾರಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2.50 ಲಕ್ಷ ಮೌಲ್ಯದ 250 ಕೆ.ಜಿ. ರಕ್ತ ಚಂದನ ಮರವನ್ನು ವಶಪಡಿಸಿಕೊಂಡಿದ್ದಾರೆ.
ಕಪಾಲಿ ಚಿತ್ರ ಮಂದಿರದ ಎದುರು ಅಕ್ರಮವಾಗಿ ರಕ್ತ ಚಂದನ ಮರಗಳನ್ನು ಮಾರಾಟ ಮಾಡುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿ ಪಾದರಾಯನಪುರದ ಸೈಯ್ಯದ್ ಖಾಸಿಂ(28) ಮತ್ತು ಬೀಡಿ ಕಾಲೋನಿ, ಕೆಂಗೇರಿ ಉಪನಗರ ನಿವಾಸಿಗಳಾದ ಎಂ.ವಸೀಂ(23), ರಸೂಲ್ ಖಾನ್(28)ರನ್ನು ಬಂಧಿಸಿದ್ದಾರೆ.
ಆರೋಪಿ ಅಲ್ತಾಫ್ ತಂಡದ ನಾಯಕನಾಗಿದ್ದು, ಈತ ಇತರೆ 4 ಜನರೊಂದಿಗೆ ತುಮಕೂರು ಟೋಲ್ ಬಳಿ ಕ್ಯಾಂಟರ್ ವಾಹನವನ್ನು ತಡೆದು ಚಾಲಕನಿಗೆ ಬೆದರಿಕೆ ಹಾಕಿ, ಅದರಲ್ಲಿದ್ದ ರಕ್ತ ಚಂದನ ಮರಗಳನ್ನು ಕಳುವು ಮಾಡಿ, ನಂತರ ಕ್ಯಾಂಟರ್ನ್ನು ಚನ್ನಪಟ್ಟಣದ ಬಳಿ ಬಿಟ್ಟು ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಲೆ ಮರೆಸಿಕೊಂಡ ಆರೋಪಿಗಳ ಶೋಧ ಕಾರ್ಯ ಆರಂಭವಾಗಿದೆ.
ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಸಬ್ಇನ್ಸ್ಪೆಕ್ಟರ್ ಪಿ.ಬಿ.ಕಿರಣ್ ನೇತೃತ್ವದಲ್ಲಿ ಸಿಬ್ಬಂದಿಯವರಾದ ಗವಿಸಿದ್ದಯ್ಯ. ಹೆಚ್ಸಿ , ಅಕ್ರಂ, ಆನಂದ್, ಗೋಪಾಲಯ್ಯ, ವಿಜಯ್, ಹರೀಶ್ ಅವರುಗಳು ಈ ಎರಡು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications