ಬೆಂಗಳೂರಿನ ಆರು ರಸ್ತೆಗಳಿಗೆ ವಿಸ್ತರಣೆ ಭಾಗ್ಯ
ಬೆಂಗಳೂರು, ಸೆ. 19 : ಉದ್ಯಾನ ನಗರಿ ಬೆಂಗಳೂರಿನ ಆರು ರಸ್ತೆಗಳನ್ನು ವಿಸ್ತರಣೆ ಮಾಡಲು ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಸೂಚನೆ ನೀಡಿದ್ದಾರೆ. ಹಲವು ವರ್ಷಗಳಿಂದ ವಿಳಂಬವಾಗುತ್ತಿರುವ ರಸ್ತೆಗಳ ಅಗಲೀಕರಣ ಕಾಮಗಾರಿಗಳಿಗೆ ಚಾಲನೆ ನೀಡಲು ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮೇಯರ್ ಬಿ.ಎನ್. ಮಂಜುನಾಥ ರೆಡ್ಡಿ ಅವರು, ನಗರದ 6 ರಸ್ತೆಗಳ ಅಗಲೀಕರಣಕ್ಕೆ ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ. ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಮಾಡಲು ರಸ್ತೆ ಅಗಲೀಕರಣ ಅಗತ್ಯ. ಇದಕ್ಕಾಗಿ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಎಂದು ಮೇಯರ್ ಹೇಳಿದ್ದಾರೆ.[ಮಂಜುನಾಥ ರೆಡ್ಡಿ ಸಂಕ್ಷಿಪ್ತ ಪರಿಚಯ]

ಯಾವ ರಸ್ತೆಗಳ ಅಗಲೀಕರಣ : ಮೊದಲ ಹಂತದಲ್ಲಿ ಬನ್ನೇರುಘಟ್ಟ ರಸ್ತೆ, ಸರ್ಜಾಪುರ ರಸ್ತೆ, ಟ್ಯಾನರಿ ರಸ್ತೆ, ದಿನ್ನೂರು ರಸ್ತೆ, ಜಯಮಹಲ್ ರಸ್ತೆ ಮತ್ತು ಬಳ್ಳಾರಿ ರಸ್ತೆಗಳ ಅಗಲೀಕರಣ ಕಾಮಗಾರಿಗಳಿಗೆ ಯೋಜನೆ ರೂಪಿಸಬೇಕು ಎಂದು ಮೇಯರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. [ಸಂಚಾರಿ ನಿಯಮ ಉಲ್ಲಂಘನೆ ಪತ್ತೆಗೆ ಹೊಸ ಆಪ್]
ಮೂರು ವರ್ಷಗಳ ಹಿಂದೆ ನಗರದ 230 ರಸ್ತೆಗಳನ್ನು ಅಗಲೀಕರಣ ಮಾಡಲು ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ 20 ರಸ್ತೆಗಳ ಅಗಲೀಕರಣಕ್ಕೆ ಯೋಜನೆ ರೂಪಿಸಿ, ಅಗಲೀಕರಣಕ್ಕೆ ಸ್ವಾಧೀನಪಡಿಸಿ ಕೊಳ್ಳಬೇಕಾದ ಮನೆಗಳನ್ನು ಗುರುತು ಹಾಕಲಾಗಿದೆ ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. [ಟೆಂಡರ್ ಶ್ಯೂರ್ ರಸ್ತೆಯ ವಿಶೇಷತೆಗಳೇನು?]
ಗುರುತು ಮಾಡಿರುವ ಆಸ್ತಿಗಳನ್ನು ಸ್ವಾಧೀನಪಡಿಸಿಕೊಂಡು ಪರಿಹಾರವನ್ನೂ ನೀಡಿಲ್ಲ. ಆದ್ದರಿಂದ, ಮಾಲೀಕರು ಆಸ್ತಿ ಮಾರಾಟ ಮಾಡಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿಡಿಆರ್ ಮೂಲಕ ಪರಿಹಾರ ನೀಡಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮೇಯರ್ ಸೂಚಿಸಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications