Skydeck: ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಾಣ ಯೋಜನೆಗೆ ಅಂದಾಜು ವೆಚ್ಚ ಎಷ್ಟು ಕೋಟಿ? ಇಲ್ಲಿದೆ ಮಾಹಿತಿ
ಬೆಂಗಳೂರು, ಫೆಬ್ರವರಿ, 26: ಬೈಯಪ್ಪನಹಳ್ಳಿಯ ಎನ್ಜಿಇಎಫ್ನಲ್ಲಿ 10 ಹೆಕ್ಟೇರ್ ಜಾಗದಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣವಾಗುವ ಸಾಧ್ಯತೆಯಿದೆ. ಹಾಗಾದರೆ ಇದಕ್ಕೆ ತಗಲುವ ವೆಚ್ಚ ಎಷ್ಟು ಕೋಟಿ ಹಾಗೂ ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಹೇಳಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸ್ಕೈಡೆಕ್ ನಿರ್ಮಾಣಕ್ಕೆ ಅಂದಾಜು ವೆಚ್ಚ 850 ಕೋಟಿ ರೂಪಾಯಿ ಆಗಬಹುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಇತ್ತೀಚಿನ ಬಜೆಟ್ನಲ್ಲಿ ಬೆಂಗಳೂರಿನಲ್ಲಿ ಪ್ರಮುಖ ಪ್ರವಾಸಿ ತಾಣವಾಗಲಿರುವ ಸ್ಕೈಡೆಕ್ಗೆ ಆಧುನೀಕರಣ ವಿನ್ಯಾಸವನ್ನು ಸಿದ್ಧಪಡಿಸಲು ಅಂತಾರಾಷ್ಟ್ರೀಯ ಖ್ಯಾತಿಯ ವಾಸ್ತುಶಿಲ್ಪಿಗಳನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಏಜೆನ್ಸಿಗಳನ್ನು ನೇಮಿಸಿಕೊಳ್ಳಲು ಬಿಬಿಎಂಪಿ ಟೆಂಡರ್ ಕರೆದಿದ್ದು, ಇದಕ್ಕಾಗಿ 3 ಕೋಟಿ ರೂಪಾಯಿ ರಾಜ್ಯ ಸರ್ಕಾರದ ಹಣವನ್ನು ಬಳಸಿಕೊಂಡು ಸ್ಕೈಡೆಕ್ ಅನ್ನು ನಿರ್ಮಿಸಲಾಗುವುದು ಮತ್ತು ಬಿಬಿಎಂಪಿಯ ಯೋಜನಾ ವಿಭಾಗವು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಗೆ ಹೋಗದೆ ಯೋಜನೆಯನ್ನು ಕಾರ್ಯಗತಗೊಳಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಜಿಇಎಫ್ ಭೂಮಿ ಮತ್ತು ಯಶವಂತಾಪುರದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಜಮೀನು ಯೋಜನೆಗಾಗಿ ಹಿರಿಯ ಅಧಿಕಾರಿಯೊಬ್ಬರು ಆರಂಭದಲ್ಲಿ ಎರಡು ಜಾಗಗಳನ್ನು ಗುರುತಿಸಿದ್ದಾರೆ. ಆದರೆ, ಈಗ ಯೋಜನೆಯನ್ನು ಕಾರ್ಯಗತಗೊಳಿಸಲು ಎನ್ಜಿಇಎಫ್ ಭೂಮಿಯನ್ನು ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿಬಿಎಂಪಿಯ ಆರಂಭಿಕ ಅಂದಾಜಿನ ಪ್ರಕಾರ, ಯೋಜನೆಯ ವೆಚ್ಚ 850 ಕೋಟಿ ರೂಪಾಯಿಗಳು, ಸ್ಕೈಡೆಸ್ಕ್ ನಿರ್ಮಿಸಲು ಸುಮಾರು 350 ಕೋಟಿ ಮತ್ತು ಅದರ ವಾಣಿಜ್ಯ ಭಾಗಗಳನ್ನು ನಿರ್ಮಿಸಲು 500 ಕೋಟಿ ರೂಪಾಯಿ ಆಗಲಿದೆ ಎಂದು ತಿಳಿಸಿದ್ದಾರೆ.
"ನಾವು ಸ್ಕೈಡೆಕ್ ಯೋಜನೆಯನ್ನು ಎರಡು ವಿಭಾಗಗಳಲ್ಲಿ ಅನುಷ್ಠಾನಗೊಳಿಸುತ್ತೇವೆ. ನಾವು ಸ್ಕೈಡೆಕ್ ಅನ್ನು ಎ ಭಾಗದಲ್ಲಿ ನಿರ್ಮಿಸುತ್ತೇವೆ. ಹೋಟೆಲ್ಗಳು ಮತ್ತು ಥಿಯೇಟರ್ ಸೇರಿದಂತೆ ಅದರ ವಾಣಿಜ್ಯ ಭಾಗಗಳನ್ನು ಸ್ಥಾಪಿಸುತ್ತೇವೆ," ಎಂದು ಅಧಿಕಾರಿ ವಿವರಿಸಿದರು. ಡಿಪಿಆರ್ ಸಿದ್ಧಪಡಿಸಿದ ನಂತರ ಯೋಜನೆಗೆ ನಿಖರವಾದ ವೆಚ್ಚವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು. ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಸ್ಕೈಡೆಕ್ ದೇಶದ ಅತಿ ಎತ್ತರದ ವ್ಯೂ ಟವರ್ ಆಗಲಿದೆ.
ಮೂಲ ಭಾಗವು ಶಾಪಿಂಗ್ ಪ್ರದೇಶ, ರೆಸ್ಟೋರೆಂಟ್ಗಳು ಮತ್ತು ಥಿಯೇಟರ್ನಂತಹ ಸೌಲಭ್ಯಗಳನ್ನು ಹೊಂದಿರುತ್ತದೆ. ಮೇಲಿನ ಭಾಗವು ರೋಲರ್-ಕೋಸ್ಟರ್ ಸ್ಟೇಷನ್, ಎಕ್ಸಿಬಿಷನ್ ಹಾಲ್, ವಿಹಂಗಮ ನೋಟಕ್ಕಾಗಿ ಸ್ಕೈಡೆಕ್, ರೆಸ್ಟೋರೆಂಟ್ ಮತ್ತು ಬಾರ್ ಮತ್ತು ವಿಐಪಿ ಪ್ರದೇಶವನ್ನು ಹೊಂದಿರುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications