ಮೈಸೂರು ಹೆಚ್ಚು ಜೀತದಾರರಿರುವ ಎರಡನೇ ಜಿಲ್ಲೆ
ಬೆಂಗಳೂರು, ಸೆಪ್ಟೆಂಬರ್, 25 : ಜೀತಪದ್ಧತಿ ರದ್ಧತಿ ಕಾಯ್ದೆ ಸುಮಾರು ವರ್ಷಗಳಿಂದ ಜಾರಿಯಲ್ಲಿದೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರಾದ ಮೈಸೂರಲ್ಲಿ ಜೀತದಾರರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಒಟ್ಟಿನಲ್ಲಿ ಅತಿಹೆಚ್ಚು ಜೀತದಾರರ ಪಟ್ಟಿಯಲ್ಲಿ ಬೀದರ್ ಮೊದಲ ಸ್ಥಾನ ಪಡೆದುಕೊಂಡರೆ, ಮೈಸೂರು ಎರಡನೇ ಸ್ಥಾನದಲ್ಲಿದೆ.
ಜೀತಪದ್ಧತಿ ಪರಿಶೀಲನೆ ಮತ್ತು ಪುನರ್ ವಸತಿ ಸಂಬಂಧ ಪತ್ರಕರ್ತ ಶಿವಾಜಿ ಗಣೇಶನ್ ಅಧ್ಯಕ್ಷತೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ ಗುರುವಾರ ಪಂಚಾಯತ್ ರಾಜ್ ಸಚಿವ ಎಚ್.ಕೆ ಪಾಟೀಲ್ ಅವರಿಗೆ ತನ್ನ ವರದಿ ಸಲ್ಲಿಸಿದ್ದು, ಬೀದರ್ ನಲ್ಲಿ 1,319, ಮೈಸೂರಿನಲ್ಲಿ 830 ಜೀತಗಾರರು ಇರುವುದು ತಿಳಿದು ಬಂದಿದೆ.[ರಾಮನಗರದಲ್ಲಿ ಜೀತ ಕಾರ್ಮಿಕರಿಗೆ ಸ್ವಾತಂತ್ರ್ಯ ಸಿಕ್ಕಿತು]

ಜೀತಮುಕ್ತ ವಿಮುಕ್ತಿ ಕರ್ನಾಟಕ ಸಂಘಟನೆಯು 2013ರಲ್ಲಿ ಎರಡು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದಾಗಿ ಈ ಸತ್ಯಾಂಶ ತಿಳಿದು ಬಂದಿದೆ. ಇದರ ಪ್ರಕಾರ ಕರ್ನಾಟಕದಲ್ಲಿ ಸುಮಾರು 7,646 ಜೀತದಾರರು ಇರಬಹುದೆಂದು ಅಂದಾಜು ಮಾಡಲಾಗಿದೆ.
ಕಳೆದ ಬಾರಿ ಪತ್ತೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ 119, ಪಾವಗಡದಲ್ಲಿ 383 ಹಾಗೂ ಮೈಸೂರಿನ ಹೆಚ್ ಡಿ ಕೋಟೆಯಲ್ಲಿ 253 ಜೀತದಾರರನ್ನು ಪತ್ತೆ ಹಚ್ಚಲಾಗಿತ್ತು. ಈ ಬಾರಿ ಮೈಸೂರು ಹಾಗೂ ಬೀದರ್ ನಲ್ಲಿ ಜೀತದಾರರನ್ನು ಕಂಡು ಹಿಡಿಯಲಾಗಿದೆ. ಇವರಿಗೆಲ್ಲಾ ಪುನರ್ವಸತಿ ಕಲ್ಪಿಸಿಕೊಟ್ಟು, ಆದಷ್ಟು ಶೀಘ್ರದಲ್ಲಿ ಉದ್ಯೋಗ ಒದಗಿಸಲಾಗುವುದು ಎಂದು ಪಂಚಾಯತ್ ರಾಜ್ ಸಚಿವ ಎಚ್ ಕೆ ಪಾಟೀಲ್ ಹೇಳಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications