ಮಾಗಡಿಯಲ್ಲಿ ಶಾಸಕ ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆತ
ಮಾಗಡಿ, ಜನವರಿ 06: ದಲಿತ ಮಹಿಳೆಗೆ ಪುರಸಭೆ ಅಧ್ಯಕ್ಷ ಸ್ಥಾನ ತಪ್ಪಿಸಿದ್ದಕ್ಕೆ ಕುಪಿತಗೊಂಡ ಮಾಗಡಿಯ ದಲಿತ ಸಂಘಟನೆ ಸದಸ್ಯರು ಮಾಗಡಿ ಶಾಸಕ ಬಾಲಕೃಷ್ಣ ಅವರ ವಿರುದ್ಧ ಪ್ರತಿಭಟನೆ ಮಾಡಿ ಶಾಸಕರು ತೆರಳುತ್ತಿದ್ದ ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾರೆ.
ಇಂದು ಮಾಗಡಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು, ದಲಿತ ಮಹಿಳೆ ಸುಶೀಲ ಅವರಿಗೆ ಅಧ್ಯಕ್ಷ ಗಾದಿ ದೊರಕಲಿದೆ ಎಂದು ಉತ್ಸಾಹದಿಂದ ವಿಜಯೋತ್ಸವ ಆಚರಿಸಲು ತಯಾರಿ ಮಾಡಿಕೊಂಡು ಸುಶೀಲ ಅವರ ಪತಿ ರಂಗ ಹನುಮಯ್ಯ ಪರ ಬೆಂಬಲಿಗರು ಹಾಗೂ ದಲಿತ ಸಂಘಟನೆಗಳ ಸದಸ್ಯರು ಪುರಸಭೆ ಮುಂದೆ ಜಮಾಯಿಸಿದ್ದರು, ಆದರೆ ಶಾಸಕ ಬಾಲಕೃಷ್ಣ ಅವರು ತಮ್ಮ ಪ್ರಭಾವ ಬೀರಿ ಪಕ್ಷೇತರವಾಗಿ ಪುರಸಭೆಗೆ ಆಯ್ಕೆಯಾಗಿದ್ದ ಮಂಜುನಾಥ ಅವರಿಗೆ ಪುರಸಭೆ ಅಧ್ಯಕ್ಷ ಸ್ಥಾನ ಸಿಗುವಂತೆ ಮಾಡಿದ್ದಾರೆ ಇದರಿಂದ ಕುಪಿತಗೊಂಡ ದಲಿತರು ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು.
ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಬಾಲಕೃಷ್ಣ, ಸಂಸದ ಡಿ.ಕೆ.ಸುರೇಶ್ ಅವರು ಕೂಡ ಭಾಗವಹಿಸಿದ್ದರು, ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ದಲಿತ ಸಂಘಟನೆ ಸದಸ್ಯರು ಸ್ಥಳದಲ್ಲಿಯೇ ಅರೆಬೆತ್ತಲೆ ಮೆರವಣಿಗೆ ಮಾಡಿದರು.

ದಲಿತ ಮಹಿಳೆ ಸುಶೀಲಾ ಅವರಿಗೆ ಮಾಗಡಿ ಪುರಸಭೆ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಶಾಸಕ ಬಾಲಕೃಷ್ಣ ಭರವಸೆ ನೀಡಿದ್ದರು, ಪುರಸಭೆಯ ಇತರೆ ಚುನಾಯಿತ ಸದಸ್ಯರು ಇದಕ್ಕೆ ಒಪ್ಪಿಗೆ ಸೂಚಿಸಿದ್ದರು ಆದರೆ ಈಗ ಯಾವುದೋ ಆಮಿಷಕ್ಕೆ ಒಳಗಾಗಿ ಎಚ್.ಎಮ್.ರೇವಣ್ಣ ಅವರ ಬೆಂಬಲಿಗ ಎಂಬ ಕಾರಣಕ್ಕೆ ಪಕ್ಷೇತರರಾಗಿ ಆಯ್ಕೆ ಆಗಿದ್ದ ಮಂಜುನಾಥ್ ಗೆ ಅಧ್ಯಕ್ಷ ಸ್ಥಾನ ಸಿಗುವಂತೆ ಶಾಸಕ ಬಾಲಕೃಷ್ಣ ಮಾಡಿದ್ದಾರೆ ಎಂದು ದಲಿತ ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications