ಮಾಗಡಿಯಲ್ಲಿ ಶಾಸಕ ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆತ
ಮಾಗಡಿ, ಜನವರಿ 06: ದಲಿತ ಮಹಿಳೆಗೆ ಪುರಸಭೆ ಅಧ್ಯಕ್ಷ ಸ್ಥಾನ ತಪ್ಪಿಸಿದ್ದಕ್ಕೆ ಕುಪಿತಗೊಂಡ ಮಾಗಡಿಯ ದಲಿತ ಸಂಘಟನೆ ಸದಸ್ಯರು ಮಾಗಡಿ ಶಾಸಕ ಬಾಲಕೃಷ್ಣ ಅವರ ವಿರುದ್ಧ ಪ್ರತಿಭಟನೆ ಮಾಡಿ ಶಾಸಕರು ತೆರಳುತ್ತಿದ್ದ ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾರೆ.
ಇಂದು ಮಾಗಡಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು, ದಲಿತ ಮಹಿಳೆ ಸುಶೀಲ ಅವರಿಗೆ ಅಧ್ಯಕ್ಷ ಗಾದಿ ದೊರಕಲಿದೆ ಎಂದು ಉತ್ಸಾಹದಿಂದ ವಿಜಯೋತ್ಸವ ಆಚರಿಸಲು ತಯಾರಿ ಮಾಡಿಕೊಂಡು ಸುಶೀಲ ಅವರ ಪತಿ ರಂಗ ಹನುಮಯ್ಯ ಪರ ಬೆಂಬಲಿಗರು ಹಾಗೂ ದಲಿತ ಸಂಘಟನೆಗಳ ಸದಸ್ಯರು ಪುರಸಭೆ ಮುಂದೆ ಜಮಾಯಿಸಿದ್ದರು, ಆದರೆ ಶಾಸಕ ಬಾಲಕೃಷ್ಣ ಅವರು ತಮ್ಮ ಪ್ರಭಾವ ಬೀರಿ ಪಕ್ಷೇತರವಾಗಿ ಪುರಸಭೆಗೆ ಆಯ್ಕೆಯಾಗಿದ್ದ ಮಂಜುನಾಥ ಅವರಿಗೆ ಪುರಸಭೆ ಅಧ್ಯಕ್ಷ ಸ್ಥಾನ ಸಿಗುವಂತೆ ಮಾಡಿದ್ದಾರೆ ಇದರಿಂದ ಕುಪಿತಗೊಂಡ ದಲಿತರು ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು.
ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಬಾಲಕೃಷ್ಣ, ಸಂಸದ ಡಿ.ಕೆ.ಸುರೇಶ್ ಅವರು ಕೂಡ ಭಾಗವಹಿಸಿದ್ದರು, ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ದಲಿತ ಸಂಘಟನೆ ಸದಸ್ಯರು ಸ್ಥಳದಲ್ಲಿಯೇ ಅರೆಬೆತ್ತಲೆ ಮೆರವಣಿಗೆ ಮಾಡಿದರು.

ದಲಿತ ಮಹಿಳೆ ಸುಶೀಲಾ ಅವರಿಗೆ ಮಾಗಡಿ ಪುರಸಭೆ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಶಾಸಕ ಬಾಲಕೃಷ್ಣ ಭರವಸೆ ನೀಡಿದ್ದರು, ಪುರಸಭೆಯ ಇತರೆ ಚುನಾಯಿತ ಸದಸ್ಯರು ಇದಕ್ಕೆ ಒಪ್ಪಿಗೆ ಸೂಚಿಸಿದ್ದರು ಆದರೆ ಈಗ ಯಾವುದೋ ಆಮಿಷಕ್ಕೆ ಒಳಗಾಗಿ ಎಚ್.ಎಮ್.ರೇವಣ್ಣ ಅವರ ಬೆಂಬಲಿಗ ಎಂಬ ಕಾರಣಕ್ಕೆ ಪಕ್ಷೇತರರಾಗಿ ಆಯ್ಕೆ ಆಗಿದ್ದ ಮಂಜುನಾಥ್ ಗೆ ಅಧ್ಯಕ್ಷ ಸ್ಥಾನ ಸಿಗುವಂತೆ ಶಾಸಕ ಬಾಲಕೃಷ್ಣ ಮಾಡಿದ್ದಾರೆ ಎಂದು ದಲಿತ ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications