Get Updates
Get notified of breaking news, exclusive insights, and must-see stories!

ಸಿದ್ಧಾರ್ಥ ನಾಪತ್ತೆ: ಎಸ್‌.ಎಂ.ಕೃಷ್ಣ ಮನೆಗೆ ಗಣ್ಯರ ಭೇಟಿ

ಬೆಂಗಳೂರು, ಜುಲೈ 30: ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ಹಠಾತ್ ನಾಪತ್ತೆ ಆಗಿದ್ದು. ವಿಷಯ ತಿಳಿಯುತ್ತಿದ್ದಂತೆ ಕೃಷ್ಣ ಅವರ ನಿವಾಸಕ್ಕೆ ರಾಜಕಾರಣಿಗಳ ದಂಡೇ ಆಗಮಿಸಿದೆ.

ಸಿಎಂ ಯಡಿಯೂರಪ್ಪ ಅವರು ಬೆಳಿಗ್ಗೆ 7 ಗಂಟೆಗೆ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಕೃಷ್ಣ ಅವರಿಗೆ ಶೋಧ ಕಾರ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ ಅವರುಗಳು ಸೇರಿ ಬಿಜೆಪಿಯ ಹಲವು ನಾಯಕರು ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

SM Krishnas son in law Siddhartha missing: politicians met SM Krishna

ಡಿಜಿಪಿ ನೀಲಮಣಿರಾಜು ಅವರು ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಶೋಧ ಕಾರ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಗತ್ಯಬಿದ್ದರೆ ನೌಕಾಪಡೆಯ ಸಿಬ್ಬಂದಿಯ ನೆರವು ಪಡೆಯಿರಿ ಎಂದು ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

ಕೇಂದ್ರದಿಂದ ಎಲ್ಲಾ ಅಗತ್ಯ ನೆರವುಗಳನ್ನು ಪಡೆದುಕೊಳ್ಳಿರೆಂದು ಈಗಾಗಲೇ ಯಡಿಯೂರಪ್ಪ ಅವರು ತಿಳಿಸಿದ್ದು, ಹೆಲಿಕಾಪ್ಟರ್ ಮತ್ತು ಸುಸಜ್ಜಿತ ಹಡಗು ಬಳಸಿ ಶೋಧ ಕಾರ್ಯವನ್ನು ಮುಂದುವರೆಸಲಾಗುವುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+