ದೇವೇಗೌಡರ ಮನೆ ಮುಂದೆ ಎಸ್.ಎಂ.ಕೃಷ್ಣ ನಿಂತಿದ್ದರು: ರಮೇಶ್ ಬಾಬು
ಬೆಂಗಳೂರು, ಡಿಸೆಂಬರ್ 26: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು 2004 ರಲ್ಲಿ ಸೋತಾಗ, ಜೆಡಿಎಸ್ ಬೆಂಬಲದೊಂದಿಗೆ ಮತ್ತೆ ಮುಖ್ಯಮಂತ್ರಿಯಾಗಲು ಬಯಸಿದ್ದರು. ಅದಕ್ಕಾಗಿ ಎಚ್.ಡಿ.ದೇವೇಗೌಡರ ಮನೆ ಮುಂದೆ ನಿಂತಿದ್ದರು ಎಂದು ಜೆಡಿಎಸ್ ಮುಖಂಡ ರಮೇಶ್ ಬಾಬು ಹೇಳಿದ್ದಾರೆ.
ಎಸ್.ಎಂ.ಕೃಷ್ಣ ಅವರ ಅವರ ಪುಸ್ತಕದಲ್ಲಿ ಬರೆದಿರುವ ಸಂಗತಿಗಳ ಬಗ್ಗೆ ಟ್ವಿಟ್ ಮಾಡಿರುವ ರಮೇಶ್ ಬಾಬು, "ಆತ್ಮಚರಿತ್ರೆಗಳು ನಮಗೆ ಮಾಹಿತಿ ಕೊಡುವುದರ ಜೊತೆಗೆ ದಾರಿದೀಪವಾಗಬೇಕು, ಯಾವುದೇ ಕಾರಣಕ್ಕೂ ಸತ್ಯವನ್ನು ಮರೆಮಾಚಬಾರದು" ಎಂದು ತಿಳಿಸಿದ್ದಾರೆ.
"ಎಚ್.ಡಿ.ದೇವೇಗೌಡರು ಕಾಂಗ್ರೆಸ್ ಸೇರಲು ಮುಂದಾಗಿದ್ದರು ಎಂದು ಕೃಷ್ಣ ಅವರು ತಮ್ಮ ಪುಸ್ತಕದಲ್ಲಿ ಹೇಳಿದ್ದರು. ಇದನ್ನು ಒಂದು ಚಾರಿತ್ರಿಕ ಹಿನ್ನೆಲೆಯಲ್ಲಿ ನೋಡಬೇಕಿದೆ" ಎಂದಿದ್ದಾರೆ.

"ದೇಶದಲ್ಲಿ ಸ್ವಾತಂತ್ರ್ಯ ಚಳುವಳಿ ರೂಪಿಸಿದ ಕಾಂಗ್ರೆಸ್, ಇಂದಿನ ಬಹುತೇಕ ಪಕ್ಷಗಳಿಗೆ ಮೂಲ ಪಕ್ಷವಾಗಿದೆ. ಎಸ್.ಎಂ.ಕೃಷ್ಣ ಅವರು ಪಿಎಸ್ಪಿ ಪಕ್ಷದವರು, ಅವರೂ ಕೂಡಾ ಮೂಲ ಕಾಂಗ್ರೆಸ್ಸಿಗರಲ್ಲ" ಎಂದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಅಧಿಕಾರ ಮತ್ತು ಕುರ್ಚಿಗಾಗಿ ಎಲ್ಲ ಪಕ್ಷಗಳ ಬಾಗಿಲು ತಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ರವಿಕುಮಾರ್ ನೀಡಿರುವ ಹೇಳಿಕೆಗೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮತನಾಡಿದ ರವಿಕುಮಾರ್ ಅವರು "ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಸಿದ್ದಾಂತ, ಆದರ್ಶವೆಂಬುದೇ ಇಲ್ಲ. ಇವರು ಬಿಜೆಪಿ, ಕಾಂಗ್ರೆಸ್ ಕಮ್ಯುನಿಸ್ಟ್ ಪಕ್ಷ ಹೀಗೆ ಕಲಕ್ಕೆ ತಕ್ಕಂತೆ ವಿವಿಧ ಪಕ್ಷಗಳ ಬಾಗಿಲು ತಟ್ಟುತ್ತಾರೆ, ಅದು ಕೇವಲ ಅಧಿಕಾರ ದಾಹಕ್ಕಾಗಿ" ಎಂದು ಟೀಕಿಸಿದ್ದರು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವ ಉದ್ದೇಶದಿಂದ ತಮ್ಮ ಮನೆಯ ಅಡ್ರೆಸ್ ಹುಡುಕಿಕೊಂಡು ಬಂದಿದ್ದರು ಎಂದು ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯನ್ನು ಬಲವಾಗಿ ಖಂಡಿಸಿದ ರವಿಕುಮಾರ್, ಅದಕ್ಕಾಗಿಯೇ ದೇವೇಗೌಡರನ್ನು ತುಮಕೂರಿನಲ್ಲಿ, ಮಗ ನಿಖಿಲ್ ರನ್ನು ಮಂಡ್ಯದಲ್ಲಿ ಸೋಲಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಮುಖಂಡರು, ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ರವಿಕುಮಾರ್ ಗೆ ಇಲ್ಲ. ಅವರ ಬಗ್ಗೆ ಮಾತನಾಡುವ ಯೋಗ್ಯತೆ ದೇಶದ ಕೆಲವೇ ಕಲೆವು ರಾಜಕಾರಣಿಗಳಿಗೆ ಇದೆ ಎಂದು ಜೆಡಿಎಸ್ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ತಿರುಗೇಟು ನೀಡಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications