ಬೆಂಗಳೂರಿನ 41 ಜಂಕ್ಷನ್ಗಳಲ್ಲಿ ಸ್ಮಾರ್ಟ್ ಸಿಗ್ನಲಿಂಗ್ ವ್ಯವಸ್ಥೆ- ಇದರಿಂದ ಏನೆಲ್ಲಾ ಉಪಯೋಗ?
ಬೆಂಗಳೂರು, ಸೆಪ್ಟೆಂಬರ್, 12: ಸ್ಮಾರ್ಟ್ ಟೆಕ್ನಾಲಜಿ ವಿಚಾರದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ನಗರ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಲೇ ಇದೆ. ಇನ್ನು ಇದೀಗ ನಗರದ ಟ್ರಾಫಿಕ್ ಸಿಗ್ನಲಿಂಗ್ಗಳಲ್ಲಿ ಬದಲಾವಣೆ ಆಗಿದೆ. ಹಾಗಾದರೆ ಏನೆಲ್ಲಾ ಬದಲಾವಣೆಯಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ನಗರದ ಟ್ರಾಫಿಕ್ ಸಿಗ್ನಲ್ಗಳಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ತರಲು 41 ಜಂಕ್ಷನ್ಗಳಲ್ಲಿ AI-ಸಕ್ರಿಯಗೊಳಿಸಲಾದ ಅಡಾಪ್ಟಿವ್ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ (ATCS) ಅಳವಡಿಕೆ ಮಾಡಲಾಗುತ್ತಿದೆ.

ಈ ಕ್ರಮವು ಟ್ರಾಫಿಕ್ ಸಿಗ್ನಲ್ಗಳನ್ನು ಸಂಪೂರ್ಣ ಸ್ವಯಂಚಾಲಿತಗೊಳಿಸುವ ಯೋಜನೆಯ ಭಾಗವಾಗಿದೆ. ಟ್ರಾಫಿಕ್ ಕಂಟ್ರೋಲ್ ಮಾಡಲು ಇದು ಸಹಕಾರಿ ಆಗಿರಲಿದೆ. 41 ಜಂಕ್ಷನ್ಗಳಲ್ಲಿ, 7 ಹೊಸದಾಗಿ ಸಿಗ್ನಲ್ಗಳನ್ನು ಹೊಂದಿದ್ದು, 34 ಹಳೆಯ ಕ್ಯಾಮೆರಾ ಆಧಾರಿತ ಅಡಾಪ್ಟಿವ್ ಸಿಸ್ಟಮ್ಗಳಿಂದ ಅಪ್ಗ್ರೇಡ್ ಮಾಡಲಾಗಿದೆ.
ಡಿಸೆಂಬರ್ ಅಂತ್ಯದ ವೇಳೆಗೆ, ಬೆಂಗಳೂರಿನಲ್ಲಿ ಸಂಪೂರ್ಣ ಸ್ವಯಂಚಾಲಿತ AI-ಚಾಲಿತ ಸಿಗ್ನಲ್ಗಳು ಇರಲಿವೆ. ಬೆಂಗಳೂರಿನಲ್ಲಿ 165 AI ಜಂಕ್ಷನ್ಗಳನ್ನು ಮಾಡಲಾಗುತ್ತಿದೆ. ನಗರದಲ್ಲಿ 165 AI ಜಂಕ್ಷನ್ಗಳನ್ನು ಮಾಡಲಾಗುತ್ತಿದ್ದು, AI ಸಿಗ್ನಲ್ಗಳಿಂದಾಗಿ ವಾಹನ ಸವಾರರು ಹೆಚ್ಚು ಸಮಯ ಸಿಗ್ನಲ್ನಲ್ಲಿ ಕಾಯುವ ಪರಿಸ್ಥಿತಿ ಬರುವುದಿಲ್ಲ ಮತ್ತು ಟ್ರಾಫಿಕ್ ಸಮಸ್ಯೆ ಕೂಡ ಕಡಿಮೆ ಆಗಲಿದೆ.
ಇದರಲ್ಲಿ 136 ಜಂಕ್ಷನ್ಗಳನ್ನು ನವೀಕರಿಸಲಾಗುವುದು ಮತ್ತು 29 ಹೊಸ ಜಂಕ್ಷನ್ಗಳನ್ನು ನಿರ್ಮಾಣ ಮಾಡಲಾಗುವುದು. ಇದರಿಂದ ಪ್ರಾಥಮಿಕವಾಗಿ ಬೆಂಗಳೂರು ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಯಾವುದೇ ಪ್ರಮುಖ ಮೆಟ್ರೋ ಅಥವಾ ರಸ್ತೆ ಮೂಲಸೌಕರ್ಯ ಯೋಜನೆಗಳು ಅನುಷ್ಠಾನಕ್ಕೆ ಅಡ್ಡಿ ಆಗುವುದಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಹೇಳಿದ್ದಾರೆ.
ಮೂರು ಮಾದರಿಯ ಸಿಗ್ನಲ್ಗಳು
* ಮ್ಯಾನುಯಲ್ ಮೋಡ್: ಆಂಬ್ಯುಲೆನ್ಸ್ಗಳು ಅಥವಾ ವಿಐಪಿಗಳ ವಾಹನಗಳು ಬಂದ ಸಮಯದಲ್ಲಿ ತುರ್ತು ಪರಿಸ್ಥಿತಿಗಳಿಗಾಗಿ ಟ್ರಾಫಿಕ್ ಪೊಲೀಸ್ ವ್ಯವಸ್ಥೆಯನ್ನು ಅತಿಕ್ರಮಿಸಲು ಅನುವು ಮಾಡಿಕೊಡುವುದು.
* ವೆಹಿಕಲ್ ಆಕ್ಚುಯೇಟೆಡ್ ಕಂಟ್ರೋಲ್: ಇದು ವಾಹನಗಳ ಸಂಖ್ಯೆ ಮತ್ತು ನೈಜ ಸಮಯದಲ್ಲಿ ಸಿಗ್ನಲ್ ಸಮಯವನ್ನು ಸರಿಹೊಂದಿಸಲು ಕಂಪ್ಯೂಟರ್ ಸಕ್ರಿಯಗೊಳಿಸಿದ ಕ್ಯಾಮೆರಾಗಳನ್ನು ಬಳಸಲಾಗುತ್ತದೆ.
* ATCS ಮೋಡ್: ಇದು ಬಹು ಜಂಕ್ಷನ್ಗಳಲ್ಲಿ ಸಿಗ್ನಲ್ಗಳನ್ನು ಸಿಂಕ್ರೊನೈಸ್ ಮಾಡುತ್ತದೆ.
ಈ ಸಿಂಕ್ರೊನೈಸೇಶನ್ ಅನ್ನು ಮೊದಲು ಕೆಆರ್ ರಸ್ತೆ ಮತ್ತು ರೋಸ್ ಗಾರ್ಡನ್ ರಸ್ತೆಯಲ್ಲಿ ಅಳವಡಿಕೆ ಮಾಡಲಾಯಿತು ಮತ್ತು ಈಗ VAC ಮೋಡ್ ಅನ್ನು ಹಡ್ಸನ್ ವೃತ್ತದಲ್ಲೂ ಅಳವಡಿಕೆ ಮಾಡಲಾಗುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications