ಆಫ್ ಬೀಟ್ : ಪ್ರತಿಭೆ ಅನಾವರಣ, ಹಲವರಿಗೆ ಆಶಾಕಿರಣ
ಬೆಂಗಳೂರು, ಮಾ.11: ಎಸ್ ಎಂಟಿಎ ಭಾರತ ವಿಭಾಗ 'ಆಫ್ ಬೀಟ್' ಹೆಸರಿನಲ್ಲಿ ಒಂದು ವಿಶಿಷ್ಟ ಸಂಗೀತ ಹಬ್ಬವನ್ನು ಮಾ.15, ಭಾನುವಾರ ಸಂಜೆ 6.15ರಿಂದ ಚೌಡಯ್ಯ ಸ್ಮಾರಕ ಭವನದಲ್ಲಿ ಆಚರಿಸುತ್ತಿದೆ.
ಹಿಂದಿ ಚಿತ್ರರಂಗದಲ್ಲಿ ಅಷ್ಟಾಗಿ ಬೆಳಕಿಗೆ ಬಾರದ ಪ್ರತಿಭಾವಂತ ಸಂಗೀತ ಸಂಯೋಜಕರ ಗೀತೆಗಳನ್ನು ಜಗತ್ತಿಗೆ ಪರಿಚಯಿಸುವ ಕಾರ್ಯವನ್ನು ಆಫ್ ಬೀಟ್ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಿಂದ ಸಂಗ್ರಹವಾಗುವ ನಿಧಿಯನ್ನು ವಿಕಲ ಚೇತನರಿಗೆ ನೀಡಲಾಗುತ್ತದೆ.
ಒಂದೇ ಕಾರ್ಯಕ್ರಮದ ಮೂಲಕ ಎರಡು ಮಹತ್ಕಾರ್ಯ ಸಾಧಿಸಲು ಯೋಜಿಸಲಾಗಿದೆ. ಬೆಳಕಿಗೆ ಬಾರದ ಪ್ರತಿಭೆಗಳ ಅನಾವರಣ ಹಾಗೂ ವಿಕಲಚೇತನರಿಗೆ ಆಶಾಕಿರಣವಾಗಲಿದೆ.

ಈ ವಿಶಿಷ್ಟ ಕಾರ್ಯಕ್ರಮದಲ್ಲಿ ರಿತಿಶಾ ಪದ್ಮನಾಭ, ಮನೋಜ್ ವಶಿಷ್ಠ, ಸಿಂಚನ್ ದೀಕ್ಷಿತ್, ಸಮನ್ವಿತಾ ಶರ್ಮ, ಗೋವಿಂದ್ ಕರ್ನೂಲ್ ಹಾಗೂ ಅನಿಕೇತ್ ಪ್ರಭು ಮುಂತಾದ ಗಾಯಕ, ಗಾಯಕಿಯರು ತಮ್ಮ ಗಾನಸುಧೆ ಹರಿಸಲಿದ್ದಾರೆ.
ಎಸ್ ಎಂಟಿಎ ಬಗ್ಗೆ: ಸರ್ಫೇಸ್ ಮೌಂಟ್ ಟೆಕ್ನಾಲಜಿ ಅಸೋಸಿಯೇಷನ್ (ಎಸ್ ಎಂಟಿಎ) ಒಂದು ಅಂತಾರಾಷ್ಟ್ರೀಯ ಸಂಸ್ಥೆಯಾಗಿದೆ. ಕೌಶಲ್ಯ ಅಭಿವೃದ್ಧಿ, ಪ್ರಾಯೋಗಿಕ ಚಟುವಟಿಕೆಗಳು, ಎಲೆಕ್ಟ್ರಾನಿಕ್ ಅಸೆಂಬ್ಲಿಂಗ್ ತಂತ್ರಜ್ಞಾನ ಕ್ಷೇತ್ರದ ಉತ್ತಮ ಸ್ಥಾನ ಹೊಂದಿದೆ. ಮೈಕ್ರೋಸಿಸ್ಟಮ್ಸ್, ಉನ್ನತ ತಂತ್ರಜ್ಞಾನ ಹಾಗೂ ಸಂಬಂಧಿತ ವ್ಯವಹಾರಿಕ ಚಟುವಟಿಕೆಗಳಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ. ಈ ಸಂಸ್ಥೆಯ ಭಾರತ ವಿಭಾಗ ಈ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದೆ.
ಟಿಕೆಟ್ ದರ 350 ರು, 550 ರು ಹಾಗೂ 950 ರು
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9845824725
ಟಿಕೆಟ್ ಬುಕ್ ಮಾಡಲು : www.bookurevent.com. ಗೆ ಭೇಟಿ ಕೊಡಿ
ಒನ್ ಇಂಡಿಯಾ ಸುದ್ದಿ
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications