ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಗೃಹ ಸಚಿವರಿಗೆ ದೂರು
ಬೆಂಗಳೂರು, ಜು. 20: ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮಂಗಳವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. ಜಾತಿಗಳ ಬಗ್ಗೆ ಉಲ್ಲೇಖಿಸಿ ಶತ್ರುತ್ವ ಬೆಳೆಯುವಂತಹ ಹೇಳಿಕೆ ನೀಡಿರುವ ಇಂದ್ರಜಿತ್ ಲಂಕೇಶ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ದೂರಿನಲ್ಲಿ ಕೋರಿದ್ದಾರೆ.
ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ನಡುವಿನ ಚೆಕ್ ಶ್ಯೂರಿಟಿ ವಿವಾದದ ವಿಚಾರವಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಧ್ಯ ಪ್ರವೇಶಿಸಿದ್ದರು. ನಟ ದರ್ಶನ್ ಹೋಟೆಲ್ನಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಹಲ್ಲೆ ಮಾಡಿದ್ದರು. ಸಿಸಿಟಿವಿ ನಿರ್ನಾಮ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಮೈಸೂರು ಪೋಲೀಸರು ನಿಷ್ಪ್ರಯೋಜಕರು, ಉಳ್ಳವರ ಪರ ಇದ್ದಾರೆ. ದಲಿತ ಯುವಕನ ಮೇಲೆ ಹಲ್ಲೆ ಮಾಡಿದರೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ತನಿಖೆ ಮಾಡಲಿಲ್ಲ ಎಂದು ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಇದರಿಂದ ಕೆರಳಿದ್ದ ನಟ ದರ್ಶನ್ ಇಂದ್ರಜಿತ್ ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಇದು ಅಡಿಯೋ- ವಿಡಿಯೋ ಬಿಡುಗಡೆಯ ಮಾತಿನ ಸಮರಕ್ಕೂ ನಾಂದಿ ಹಾಡಿತ್ತು.
ಇಂದ್ರಜಿತ್ ಲಂಕೇಶ್ಗೆ ನಟ ದರ್ಶನ್ ಹಿಂಬಾಲಕರು ಬೆದರಿಕೆ ಹಾಕಿದ್ದಾರೆ. ಅಶ್ಲೀಲ ಸಂದೇಶಗಳನ್ನು ರವಾನಿಸಿ ಚಿತ್ರಹಿಂಸೆ ಕೊಡುತ್ತಿದ್ದಾರೆ. ಇವರ ವಿರುದ್ದ ಕ್ರಮ ಜರುಗಿಸಿ ಎಂದು ಕೋರಿ ಇಂದ್ರಜಿತ್ ಲಂಕೇಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಇತ್ತೀಚೆಗೆ ದೂರು ನೀಡಿದ್ದರು. ಇಂದ್ರಜಿತ್ ದೂರು ಬೆನ್ನಲ್ಲೇ ಟ್ರೋಲ್ ಮಾಡಿ ಅಪಹಾಸ್ಯ ಮಾಡಲಾಗಿತ್ತು. ಈ ವಿವಾದಕ್ಕೆ ಇದೀಗ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಎಂಟ್ರಿ ಕೊಟ್ಟಿದ್ದಾರೆ. ದಲಿತ ಸಮುದಾಯವನ್ನು ಉಲ್ಲೇಖಿಸಿ ಎರಡು ಸಮುದಾಯದ ನಡುವೆ ಶತೃತ್ವ ಹಾಗೂ ಗಲಭೆ ಉಂಟು ಮಾಡುವಂತಹ ಪರಿಸ್ಥಿತಿಗೆ ಕಾರಣವಾಗಿದ್ದಾರೆ. ಸುಳ್ಳು ಹೇಳಿಕೆ ನೀಡುವ ಮೂಲಕ ಇಂದ್ರಜಿತ್ ಲಂಕೇಶ್ ಅಪರಾಧ ಎಸಗಿದ್ದಾರೆ ಇವರ ವಿರುದ್ಧ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸಬೇಕು ಎಂದ ಅಬ್ರಹಾಂ ಕೋರಿದ್ದಾರೆ.

ನಟ ದರ್ಶನ್ ನಿಂದ ಮೈಸೂರಿನ ಹೋಟೆಲ್ನಲ್ಲಿ ಹಲ್ಲೆಗೆ ಒಳಗಗಿದ್ದಾರೆ ಎನ್ನಲಾದ ಯುವಕ ದಲಿತ ಸಮದಾಯಕ್ಕೆ ಸೇರಿದವನು ಎಂದು ನಿರ್ದೇಶಕ ಇಂದ್ರಜಿತ್ ಹೇಳಿಕೆ ನೀಡಿದ್ದರು. ಇಂದ್ರಜಿತ್ ಹೇಳಿಕೆ ನಡುವೆ ಹಲ್ಲೆಗೆ ಒಳಗಾಗಿದ್ದ ಯುವಕ ನಾನು ದಲಿತ ಸಮುದಾಯಕ್ಕೆ ಸೇರಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಇದೇ ವಿಚಾರ ಮುಂದಿಟ್ಟುಕೊಂಡು ಸುಳ್ಳು ಹೇಳಿ ಸಮುದಾಯಗಳ ನಡುವೆ ಶತ್ರುತ್ವಕ್ಕೆ ಕಾರಣವಾದ ಆರೋಪ ಸಂಬಂಧ ಕೇಸು ದಾಖಲಿಸುವಂತೆ ಅಬ್ರಹಾಂ ಒತ್ತಾಯಿಸಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು











Click it and Unblock the Notifications