ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ: ನೇಮಕವಾದ ನೋಡಲ್ ಅಧಿಕಾರಿಗಳಿಗೆ ಅಗತ್ಯ ತರಬೇತಿ: GBA
ಬೆಂಗಳೂರು, ಅಕ್ಟೋಬರ್ 04: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಕ್ಟೋಬರ್-03 ರಿಂದ ಆರಂಭವಾಗಲಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ದ ಪಶ್ಚಿಮ ನಗರ ಪಾಲಿಕೆಯು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಿದೆ. ಈ ಸಿಬ್ಬಂದಿಗೆ ಎರಡು ಹಂತಗಳಲ್ಲಿ ಅಗತ್ಯ ತರಬೇತಿ ನೀಡಲಾಗುವುದು ಎಂದು ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ ತಿಳಿಸಿದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 2 ವಲಯಗಳಲ್ಲಿನ ವಿಧಾನಸಭಾ ಕ್ಷೇತ್ರಗಳ 64 ವಾರ್ಡ್ಗಳ ಒಟ್ಟು 14.65 ಲಕ್ಷ ಮನೆಗಳು ಈ ಸಮೀಕ್ಷೆಗೆ ಒಳಪಡಲಿವೆ. ಸಮೀಕ್ಷೆ ಸುಗಮವಾಗಿ ನಡೆಯಲು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ವಿಧಾನಸಭಾ ಕ್ಷೇತ್ರಗಳಾದ ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ (ಭಾಗಶಃ), ರಾಜರಾಜೇಶ್ವರಿ ನಗರ, ಯಶವಂತಪುರ ಹಾಗೂ ದಾಸರಹಳ್ಳಿ (ಭಾಗಶಃ) ಸೇರಿವೆ ಎಂದರು.
ಹಿಂದುಳಿದ ವರ್ಗಗಳ ಆಯೋಗ ಮತ್ತು ಸರ್ಕಾರದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ನಡೆಸಲು ಎಲ್ಲಾ ಪೂರ್ವ ತಯಾರಿಗಳನ್ನು ಮಾಡಲಾಗಿದೆ. ಸಮೀಕ್ಷೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು/ನೌಕರರನ್ನು ನಿಯೋಜಿಸಲಾಗಿದ್ದು, ಅವರಿಗೆ ಅಗತ್ಯ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು, ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಮೀಕ್ಷೆಯಲ್ಲಿ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.
6 ಜನ ನೋಡಲ್ ಅಧಿಕಾರಿಗಳ ನೇಮಕ
ಇನ್ನೂ ಕೇಂದ್ರ ನಗರ ಪಾಲಿಕೆ ವ್ಯಾಪ್ತಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದೆ. ಈ ಸಂಬಂಧ 6 ಜನ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಗತ್ಯ ಎರಡು ಹಂತದ ತರಬೇತಿ ನೀಡಿ ಸಮೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಹೇಳಿದರು.
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ 2 ವಲಯಗಳಲ್ಲಿ 42 ವಾರ್ಡ್ ಗಳ ಒಟ್ಟು 5.61 ಲಕ್ಷ ಮನೆಗಳು ಸಮೀಕ್ಷೆಗೆ ಒಳಪಡಲಿವೆ. ಆರು ವಿಧಾನಸಭಾ ಕ್ಷೇತ್ರಗಳಾದ ಸಿ.ವಿ. ರಾಮನ್ ನಗರ, ಶಾಂತಿನಗರ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮತ್ತು ಸರ್ಕಾರದ ನಿರ್ದೇಶನದಂತೆ ಮತ್ತು ಜಿಬಿಎ ಸೂಚನೆಯಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕೆ-2025ಕ್ಕೆ ಬೇಕಾದ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಯಿತು.
ವಿವಿಧ ಇಲಾಖೆಗಳ ಅಧಿಕಾರಿ/ನೌಕರರನ್ನು ಸಮೀಕ್ಷೆ ಕಾರ್ಯಕ್ಕೆ ನೇಮಿಸಿತು. ಸಮೀಕ್ಷೆದಾರರಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ ಎಂದ ಅವರು, ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರು ಗಣತಿದಾರರು ಸಮೀಕ್ಷೆಗೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಅಗತ್ಯ ಮಾಹಿತಿ ಒದಗಿಸುವುದರೊಂದಿಗೆ ಸಮೀಕ್ಷೆಗೆ ಸಹಕಾರ ನೀಡುವಂತೆ ಅವರು ನಾಗರಿಕರಲ್ಲಿ ವಿನಂತಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications