ಅಂಬೇಡ್ಕರ್ ಜಯಂತ್ಯುತ್ಸವ: ಸಾಮಾಜಿಕ ನ್ಯಾಯ ದಿನ
ಬೆಂಗಳೂರು, ಏಪ್ರಿಲ್ 13: ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ಡಾ.ಬಿ.ಆರ್.ಅಂಬೇಡ್ಕರ್ರವರ 127ನೇ ಜಯಂತ್ಯೋತ್ಸವದ ಅಂಗವಾಗಿ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಟೌನ್ಹಾಲ್ ನಲ್ಲಿ ಏ.14ರಂದು ಆಯೋಜಿಸಿದೆ.
ಎಸ್.ಸಿ/ಎಸ್.ಟಿ (ದೌರ್ಜನ್ಯ ತಡೆ) ಕಾಯಿದೆ ದುರ್ಬಲಗೊಳಿಸಿರುವ ಮತ್ತು ಬಡ್ತಿ-ಮೀಸಲಾತಿ ರದ್ಧತಿಯ ಸುಪ್ರೀಂ ಕೋರ್ಟಿನ ಈ ಎರಡು ತೀರ್ಪುಗಳನ್ನು ಮರುಪರಿಶೀಲಿಸಿ, ಸಂವಿಧಾನದ 9ನೇ ಶೆಡ್ಯೂಲಿನಲ್ಲಿ ಸೇರ್ಪಡಿಸಲು ಕೇಂದ್ರದ ಬಿಜೆಪಿ ಸರಕಾರಕ್ಕೆ ಆಗ್ರಹಿಸಲಾಗುತ್ತದೆ.
ನ್ಯಾಯಪೀಠವು 2017ರಲ್ಲಿ ವರದಕ್ಷಿಣೆ ತಡೆ ಕಾನೂನಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆ 498 ಎ ಪ್ರಕರಣದಲ್ಲಿ ವಿಚಾರಣೆಯಿಲ್ಲದೆ ಆರೋಪಿಗಳನ್ನು ವಶಕ್ಕೆ ಪಡೆಯಬಾರದು ಎನ್ನುವ ತೀರ್ಪು ನೀಡಿತ್ತು.

ದೌರ್ಜನ್ಯ ತಡೆ ಕಾಯ್ದೆ ಮಾರ್ಗಸೂಚಿ ಪ್ರಕಾರ ಆರೋಪಿಯ ಮೇಲೆ ಎಫ್ ಐಆರ್ ದಾಖಲಿಸುವ ಮೊದಲು ಸರ್ಕಾರಿ ನೌಕರರಾದರೆ ಸಂಬಂಧಿಸಿದ ಇಲಕೆಯ ಮುಖ್ಯಸ್ಥರಿಂದ ಪೂರ್ವಾನುಮತಿ ಪಡೆಯಬೇಕು ಮತ್ತು ಸಾರ್ವಜನಿಕರಾದರೆ ಸಂಬಂಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಅನುಮುತಿ ಪಡೆಯಬೇಕು. ಈ ವಿಚಾರ ಕುರಿತು ಚರ್ಚಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾ ಎಚ್.ಎನ್,ನಾಗಮೋಹನ್ ದಾಸ್, ಡಾ.ಕೆ.ಮರುಳಸಿದ್ದಪ್ಪ, ಜಿ.ಕೆ.ಗೋವಿಂದ ರಾವ್, ಇಂದಿರಮ್ಮ, ದೇವನೂರು ಮಹದೇವ, ಎಲ್.ಹನುಮಂತಯ್ಯ, ಸಿ.ಬಸವಲಿಂಗಯ್ಯ, ಪ್ರಕಾಶ್ ರೈ, ಎನ್.ವೆಂಕಟೇಶ, ಎಂ.ಜಯಣ್ಣ, ಶ್ರೀಧರಕಲಿವೀರ, ಇಂದೂವರ ಹೊನ್ನಾವರ, ಮಂಗಳೂರು ವಿಜಯ, ಪುರುಷೋತ್ತಮ ದಾಸ್, ಸಂಘನಕಾರರಾದ ಎನ್.ಮುನಿಸ್ವಾಮಿ, ಸಿ.ಎಂ.ಮನಿಯಪ್ಪ ಭಾಗವಹಿಸಲಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications