ಕಂಕಣ ಸೂರ್ಯ ಗ್ರಹಣ: ಮನೆಯಿಂದ ಹೊರ ಬರದ ಯಡಿಯೂರಪ್ಪ
ಬೆಂಗಳೂರು, ಡಿಸೆಂಬರ್ 26: ಸೂರ್ಯ ಗ್ರಹಣ ಮುಗಿಯುವವರೆಗೂ ಮನೆಯಿಂದ ಹೊರಬರದಿರಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದು, ನಾಯಕರ ಭೇಟಿಯನ್ನೂ ಕೂಡ ನಿರಾಕರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಮೊನ್ನೆಯಷ್ಟೇ ಗ್ರಹಣಕ್ಕೂ ಮುನ್ನ ಕೇರಳದ ದೇವಸ್ಥಾನಕ್ಕೆ ಹೋಗಿ ಬಿಎಸ್ವೈ ವಿಶೇಷ ಪೂಜೆ ಸಲ್ಲಿಸಿ ಬಂದಿದ್ದರು.ಗ್ರಹಣ ಸಂದರ್ಭದಲ್ಲಿ ಯಾವುದೇ ಕೆಲಸ ಕೈಗೆತ್ತಿಕೊಂಡರು ಶುಭವಾಗುವುದಿಲ್ಲ ಎಂಬುದು ವಾಡಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಗ್ರಹಣ ಗೋಚರಿಸುವ ವೇಳೆ ದೇವಸ್ಥಾನದ ಬಾಗಿಲುಗಳನ್ನು ತೆರೆಯುವುದಾಗಲಿ, ಪೂಜೆ ಸಲ್ಲಿಸುವುದಾಗಲಿ ಮಾಡುವುದಿಲ್ಲ. ದೇವರಲ್ಲಿ ಅಪಾರ ನಂಬಿಕೆಯನ್ನು ಹೊಂದಿರುವ ಸಿಎಂ ಬಿಎಸ್ವೈ ಅವರು ಗ್ರಹಣ ಮುಗಿಯೋವರೆಗೂ ಮನೆಯಿಂದ ಹೊರಬರದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಡಾಲರ್ಸ್ ಕಾಲೋನಿ ನಿವಾಸದಲ್ಲೇ ಉಳಿದುಕೊಂಡಿದ್ದಾರೆ.

ಕಂಕಣ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಗ್ರಹಣ ಮುಗಿಯೋವರೆಗೂ ಮನೆಯಿಂದ ಹೊರಬರದಿರಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ಧರಿಸಿದ್ದು, ದಿನನಿತ್ಯದ ವಾಕಿಂಗ್ಗೂ ತೆರಳದೇ ಮನೆಯಲ್ಲೇ ಉಳಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದಲ್ಲದೆ ಗ್ರಹಣ ಮುಗಿಯೋವರೆಗೂ ಯಾರ ಭೇಟಿಗೂ ಸಿಎಂ ಬಿಎಸ್ವೈ ಅವಕಾಶ ಮಾಡಿಕೊಟ್ಟಿಲ್ಲ. ಸಿಎಂ ಭೇಟಿಗೆ ಅವಕಾಶ ಇಲ್ಲದೆ ಇರುವುದರಿಂದದ ಸದ್ಯ ಸಿಎಂ ಮನೆಯ ಬಳಿ ಯಾವ ನಾಯಕರೂ ತೆರಳಿಲ್ಲ.
9 ವರ್ಷಗಳ ಬಳಿಕ ಸಂಭವಿಸುತ್ತಿರುವ ಕಂಕಣ ಸೂರ್ಯ ಗ್ರಹಣ ಇದಾಗಿದೆ. ಇದನ್ನು ವಿಜ್ಞಾನಿಗಳು ಹಾಗೂ ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ. ಬೆಂಗಳೂರು ನೆಹರು ಪ್ಲಾನಿಟೋರಿಯಂನಲ್ಲಿ ಸೂರ್ಯಗ್ರಹಣ ವೀಕ್ಷಣೆ ಮಾಡಲಾಗುತ್ತಿದೆ. 5 ಟೆಲಿಸ್ಕೋಪ್ ಇರಿಸಲಾಗಿದೆ. ಸಿಲೋಸ್ಟಾಟ್ ನ ಮೂಲಕ ಗ್ರಹಣ ವೀಕ್ಷಣೆ ಮಾಡಲಾಗುತ್ತದೆ.
ಸಿಲೋಸ್ಟಾಟ್ ಮೂಲಕ ಸೂರ್ಯನ ಚಲನೆ ನೋಡಬಹುದಾಗಿದೆ. ಸೋಲಾರ್ ಗಾಗಲ್ಸ್ ಗಳನ್ನು ನೀಡಲಾಗುತ್ತದೆ. ಸೋಲಾರ್ ಗಾಗಲ್ಸ್ ನಿಂದ ಸೂರ್ಯನನ್ನು ನೋಡಬಹುದು. ಯಾವುದೇ ಬೈನಾಕ್ಯುಲರ್, ಎಕ್ಸರೇ ಬಳಕೆ ಮಾಡುವಂತಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications