ಬಿಬಿಎಂಪಿಯಿಂದ ನೆರವು ಪಡೆವ ಮನೆಗಳಿಗೆ ಸೋಲಾರ್ ಕಡ್ಡಾಯ
ಬೆಂಗಳೂರು, ಫೆಬ್ರವರಿ 20: ಬಿಬಿಎಂಪಿಯಿಂದ ಮನೆಗಳ ನಿರ್ಮಾಣಕ್ಕಾಗಿ ಆರ್ಥಿಕ ಸಹಾಯ ಪಡೆಯುವವರು ತಮ್ಮ ಮನೆಗೆ ಕಡ್ಡಾಯವಾಗಿ ಸೋಲಾರ್ ಅಳವಡಿಸಿಕೊಳ್ಳಬೇಕೆಂದು ಬಿಬಿಎಂಪಿ ತಿಳಿಸಿದೆ. ಒಂದು ವೇಳೆ ಸೋಲಾರ್ ಅಳವಡಿಸದಿದ್ದರೆ ಬಿಬಿಎಂಪಿ ಕಠಿಣ ಕ್ರಮ ಜರುಗಿಸಲಿದೆ.
ವಿದ್ಯುತ್ ಉಳಿತಾಯಕ್ಕೆ ಮುಂದಾಗಿರುವ ಬಿಬಿಎಂಪಿ ಈಗಾಗಲೇ 4 ಲಕ್ಷ ಹೈ ಮಾಸ್ಟ್ ಬೀದಿದೀಪಗಳನ್ನು ಎಲ್ಇಡಿ ದೀಪಗಳನ್ನಾಗಿ ಪರಿವರ್ತಿಸಲು ಮುಂದಾಗಿದೆ. ಅದಕ್ಕಾಗಿ ಯೋಜನೆ ರೂಪಿಸಿ, ಟೆಂಡರ್ ಆಹ್ವಾನಿಸಲಾಗುತ್ತಿದೆ. ಅದರ ಜತೆಗೆ ಬಿಬಿಎಂಪಿ ಅನುದಾನದಲ್ಲಿ ಮನೆ ನಿರ್ಮಿಸುವರು ಕೂಡ ಸೋಲಾರ್ ಅಳವಡಿಕೆ ಮಾಡುವುದನ್ನು ಕಡ್ಡಾಗೊಳಿಸಲಾಗುತ್ತಿದೆ.
ಒಂಟಿ ಮನೆ ಯೋಜನೆ: ಪ್ರತಿ ವರ್ಷ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರು ಮನೆ ನಿರ್ಮಿಸಿಕೊಳ್ಳಲು ಬಿಬಿಎಂಪಿ 4 ಲಕ್ಷ ರೂ ಅನುದಾನ ನೀಡುತ್ತದೆ. ಆಯಾ ವಾರ್ಡ್ ನ ಸದಸ್ಯರು ಫಲಾನುಭವಿಗಳನ್ನು ಗುರುತಿಸಿ ಪಟ್ಟಿ ಸಲ್ಲಿಸಬೇಕು. ಈ ವರ್ಷದಿಂದ ಒಂಟಿ ಮನೆ ನಿರ್ಮಿಸುವವರು ಮನೆಯಲ್ಲಿ ವಿದ್ಯುತ್ ಸೌಲಭ್ಯಕ್ಕಾಗಿ ಅಓಲಾರ್ ಅಳವಡಿಕೆ ಮಾಡಿಕೊಳ್ಳಬೇಕಾಗುತ್ತದೆ.ಸೋಲಾರ್ ಅಳವಡಿಕೆಗಾಗಿ ಬಿಬಿಎಂಪಿಯಿಂದ ಹೆಚ್ಚುವರಿ 1 ಲಕ್ಷ ರೂ ಅನುದಾನ ನೀಡಲು ನಿರ್ಧರಿಸಿದೆ.

ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಪ್ರಸ್ತಾವನೆ ಸಲ್ಲಿಸಿದೆ. ಸೋಲಾರ್ ಶಕ್ತಿ ಬಳಕೆಗೆ ಉತ್ತೇಜನ ನೀಡುವ ಸಂಬಂಧ ಒಂಟಿ ಮನೆ ಅಡಿಯಲ್ಲಿ ನಿರ್ಮಾಣಗೊಳ್ಳುವ ಸೋಲಾರ್ ವ್ಯವಸ್ಥೆ ಅಳವಡಿಕೆಗೆ ಹೆಚ್ಚುವರಿ1 ಲಕ್ಷ ರೂ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications