ಬಿಬಿಎಂಪಿಯಿಂದ ನೆರವು ಪಡೆವ ಮನೆಗಳಿಗೆ ಸೋಲಾರ್ ಕಡ್ಡಾಯ
ಬೆಂಗಳೂರು, ಫೆಬ್ರವರಿ 20: ಬಿಬಿಎಂಪಿಯಿಂದ ಮನೆಗಳ ನಿರ್ಮಾಣಕ್ಕಾಗಿ ಆರ್ಥಿಕ ಸಹಾಯ ಪಡೆಯುವವರು ತಮ್ಮ ಮನೆಗೆ ಕಡ್ಡಾಯವಾಗಿ ಸೋಲಾರ್ ಅಳವಡಿಸಿಕೊಳ್ಳಬೇಕೆಂದು ಬಿಬಿಎಂಪಿ ತಿಳಿಸಿದೆ. ಒಂದು ವೇಳೆ ಸೋಲಾರ್ ಅಳವಡಿಸದಿದ್ದರೆ ಬಿಬಿಎಂಪಿ ಕಠಿಣ ಕ್ರಮ ಜರುಗಿಸಲಿದೆ.
ವಿದ್ಯುತ್ ಉಳಿತಾಯಕ್ಕೆ ಮುಂದಾಗಿರುವ ಬಿಬಿಎಂಪಿ ಈಗಾಗಲೇ 4 ಲಕ್ಷ ಹೈ ಮಾಸ್ಟ್ ಬೀದಿದೀಪಗಳನ್ನು ಎಲ್ಇಡಿ ದೀಪಗಳನ್ನಾಗಿ ಪರಿವರ್ತಿಸಲು ಮುಂದಾಗಿದೆ. ಅದಕ್ಕಾಗಿ ಯೋಜನೆ ರೂಪಿಸಿ, ಟೆಂಡರ್ ಆಹ್ವಾನಿಸಲಾಗುತ್ತಿದೆ. ಅದರ ಜತೆಗೆ ಬಿಬಿಎಂಪಿ ಅನುದಾನದಲ್ಲಿ ಮನೆ ನಿರ್ಮಿಸುವರು ಕೂಡ ಸೋಲಾರ್ ಅಳವಡಿಕೆ ಮಾಡುವುದನ್ನು ಕಡ್ಡಾಗೊಳಿಸಲಾಗುತ್ತಿದೆ.
ಒಂಟಿ ಮನೆ ಯೋಜನೆ: ಪ್ರತಿ ವರ್ಷ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರು ಮನೆ ನಿರ್ಮಿಸಿಕೊಳ್ಳಲು ಬಿಬಿಎಂಪಿ 4 ಲಕ್ಷ ರೂ ಅನುದಾನ ನೀಡುತ್ತದೆ. ಆಯಾ ವಾರ್ಡ್ ನ ಸದಸ್ಯರು ಫಲಾನುಭವಿಗಳನ್ನು ಗುರುತಿಸಿ ಪಟ್ಟಿ ಸಲ್ಲಿಸಬೇಕು. ಈ ವರ್ಷದಿಂದ ಒಂಟಿ ಮನೆ ನಿರ್ಮಿಸುವವರು ಮನೆಯಲ್ಲಿ ವಿದ್ಯುತ್ ಸೌಲಭ್ಯಕ್ಕಾಗಿ ಅಓಲಾರ್ ಅಳವಡಿಕೆ ಮಾಡಿಕೊಳ್ಳಬೇಕಾಗುತ್ತದೆ.ಸೋಲಾರ್ ಅಳವಡಿಕೆಗಾಗಿ ಬಿಬಿಎಂಪಿಯಿಂದ ಹೆಚ್ಚುವರಿ 1 ಲಕ್ಷ ರೂ ಅನುದಾನ ನೀಡಲು ನಿರ್ಧರಿಸಿದೆ.

ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಪ್ರಸ್ತಾವನೆ ಸಲ್ಲಿಸಿದೆ. ಸೋಲಾರ್ ಶಕ್ತಿ ಬಳಕೆಗೆ ಉತ್ತೇಜನ ನೀಡುವ ಸಂಬಂಧ ಒಂಟಿ ಮನೆ ಅಡಿಯಲ್ಲಿ ನಿರ್ಮಾಣಗೊಳ್ಳುವ ಸೋಲಾರ್ ವ್ಯವಸ್ಥೆ ಅಳವಡಿಕೆಗೆ ಹೆಚ್ಚುವರಿ1 ಲಕ್ಷ ರೂ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications