ಬೇಸಿಗೆ ನೀರಿನ ಸಮಸ್ಯೆ ನಿವಾರಣೆಗೆ ರು.622 ಕೋಟಿ ಕ್ರಿಯಾಯೋಜನೆ ರೆಡಿ
ಬೆಂಗಳೂರು, ಫೆಬ್ರವರಿ 8: ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 622 ಕೋಟಿ ರೂ.ಗಳ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಬುಧವಾರ ಸದನಕ್ಕೆ ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಗೋವಿಂದ ಕಾರಜೋಳ ಅವರು ಎತ್ತಿದ ಕುಡಿಯುವ ನೀರಿನ ಸಮಸ್ಯೆ ಪ್ರಶ್ನೆ ಸದನದಲ್ಲಿ ಮಾರ್ದನಿಸಿತು. ಅರವಿಂದ ಬೆಲ್ಲದ್, ಸಿ.ಟಿ.ರವಿ ಸೇರಿದಂತೆ ಹಲವಾರು ಶಾಸಕರು ಚರ್ಚೆಯಲ್ಲಿ ಪಾಲ್ಗೊಂಡರು. ಈ ವೇಳೆಯಲ್ಲಿ ಮಾತನಾಡಿದ ಎಚ್.ಕೆ. ಪಾಟೀಲ್. ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೊರಲಿದ್ದು, ತುರ್ತು ಕುಡಿಯು ನೀರನ್ನು ಒದಗಿಲಸು ಎಲ್ಲಾ ಜಲಮೂಲಗಳನ್ನು ಗುರುತಿಸಲಾಗಿದೆ ಎಂದರು.[ಜಲಾಶಯಗಳು ಖಾಲಿ ಖಾಲಿ ಎದುರಾಗಲಿದೆ ನೀರಿನ ಸಮಸ್ಯೆ]

ನದಿ, ಜಲಾಶಯ, ಕಾಲುವೆ. ಕೆರೆ ನೀರನ್ನು ಉಪಯೋಗಿಸಿಕೊಂಡು ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸಿದ್ದಪಡಿಸಲಾಗಿದೆ. ಕೆಲವೆಡೆ ಕೊಳವೆ ಬಾವಿ, ಕೈ ಪಂಪುಗಲು ಮತ್ತು ಟ್ಯಾಂಕರ್ ಗಳ ಮೂಲಕ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಹಾಸನ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ವಿಜಯಪುರ, ದಾವಣಗೆರೆ ತಾಲೂಕುಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಶಾಸಕರ ಮುಂದಾಳತ್ವದಲ್ಲಿ ಟಾಸ್ಕ್ ಫೋರ್ಸ್ ಗಳಿಗೆ ಅನುದಾನ ನೀಡಿ ಮೊದಲ ಹಂತದಲ್ಲಿ 6,930 ಗ್ರಾಮಗಳನ್ನು ಗುರುತಿನಿ ನೀರು ಒದಗಿಸುವುದು. ಎರಡನೇ ಹಂತದಲ್ಲಿ 7,390 ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.[ತುಂಗಭದ್ರಾ ಡ್ಯಾಂನಿಂದ ಪಾವಗಡ ತಾಲೂಕಿಗೆ ನೀರು]

ಇನ್ನು ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋದರೆ ದುರಸ್ತಿ ಮಾಡಿಸಲು ತಾಲೂಕಿಗೆ ಒಂದರಂತೆ ಸಂಚಾರಿ ದುರಸ್ತೆ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ. ಕೆಲವು ಕಡೆ ಶುದ್ಧ ಕುಡಿಯು ನಿಡಿನ ಘಟಕಗಳು ಕೆಟ್ಟು ಹೋಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಬೇಸಿಗೆಯಲ್ಲಿ ನೀರು ಪೂರೈಸಲು ಇವುಗಳ ಪಾತ್ರ ಮುಖ್ಯ ಎಂದು ಪಾಟೀಲ್ ತಿಳಿಸಿದರು.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications