ನನ್ನಿಂದ ಬೆಳೆದ ನಾಯಕರು ಸ್ವಾರ್ಥ ರಾಜಕೀಯ ಮಾಡುತ್ತಿದ್ದಾರೆ: ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 22: ನನ್ನಿಂದ ಬೆಳೆದ ನಾಯಕರು ಸ್ವಾರ್ಥ ರಾಜಕೀಯ ಮಾಡ್ತಾ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಗಿರೀಶ್ ನಾಶಿ ಅವರ ಪರವಾಗಿ ಮಹಾಲಕ್ಷ್ಮೀ ಲೇಔಟ್ನಲ್ಲಿ ಪ್ರಚಾರ ನಡೆಸಿದ್ ಕುಮಾರಸ್ವಾಮಿ ನಮ್ಮಿಂದ ಬೆಳೆದ ಹಲವು ನಾಯಕರು ಇದೀಗ ಸ್ವಾರ್ಥ ರಾಜಕೀಯ ಮಾಡುತ್ತಿದ್ದಾರೆ. ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತಿದ್ದಾರೆ.
ರಾಜಜಣ್ಣ ಮಹಾಲಕ್ಷ್ಮಿ ಲೇಔಟ್ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮೊದಲಿನಿಂದ ಮಾಡುತ್ತಿದ್ದರು. ಈ ಕ್ಷೇತ್ರದ ನಾಯಕ ರಾಜಣ್ಣ ನಂಗಿಂತಲೂ ಹಿರಿಯರು.ಅವರನ್ನೇ ಅಭ್ಯರ್ಥಿ ಮಾಡಬೇಕು ಎಂದು ಅಂದುಕೊಂಡಿದ್ದೆವು. ಪಕ್ಷದ ಎಲ್ಲಾ ನಾಯಕರ ಜತೆ ಚರ್ಚೆ ಮಾಡಿ ಗಿರೀಶ್ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದರು.

ಸದಾನಂದಗೌಡರು ಬೆವರು ಸುರಿಸಿ ರಾಜಕೀಯ ಮಾಡುತ್ತಿಲ್ಲ
ಸದಾನಂದಗೌಡರು ಬೆವರು ಸುರಿಸಿ ರಾಜಕೀಯ ಮಾಡುತ್ತಿಲ್ಲ, ಸದಾನಂದಗೌಡರು ಕಷ್ಟ ಪಟ್ಟು ಅಧಿಕಾರಕ್ಕೆ ಬಂದಿಲ್ಲ.. ಮೋದಿಯವರ ಹೆಸರು ಹೇಳಿ ಅಧಿಕಾರಕ್ಕೆ ಬಂದವರು ಇವರು, ಅವರ ತರಾ ಯಾರ್ದೊ ಹೇಸರ ಹೇಳಿ ರಾಜಕೀಯ ಮಾಡ್ತಾ ಇಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರಿಗೆ ಚುನಾವಣೆ ಬಗ್ಗೆ ಆತಂಕವಿದೆ
ಯಡಿಯೂರಪ್ಪ ಅವರಿಗೆ ಚುನಾವಣೆ ಬಗ್ಗೆ ಆತಂಕವಿದೆ, ಹಾಗಾಗಿ ಮೊನ್ನೆ ನಡೆದ ಕ್ಯಾಬಿನೆಟ್ ಇದು ನನ್ನ ಕೊನೆಯ ಕ್ಯಾಬಿನೆಟ್ ಎಂದು ಹೇಳಿದ್ದರು.ನಿಮಗೂ ಕೊನೆ ಕ್ಯಾಬಿನೆಟ್ ಆಗಬಹುದು ಅಂತ ಯಾಕೆ ಹೇಳಿದ್ರು? ಅವರಿಗೆ ಎಷ್ಟೊಂದು ಆತಂಕ ಇದೆ ಅಂತ ಗೊತ್ತಾಗುತ್ತೆ ಎಂದರು.ಲೋಕಸಭಾ ಚುನಾವಣಾ ಲೆಕ್ಕಾಚಾರದಲ್ಲಿ ಈ ಬಾರಿಯೂ 15 ಕ್ಷೇತ್ರದಲ್ಲಿ ಗೆಲ್ತೇವೆ ಅಂತ ಹೇಳಿದ್ದು ಏನಾಗುತ್ತೆ ಅಂತ 9ನೇ ತಾರೀಖಿನಂದು ಗೊತ್ತಾಗುತ್ತೆ ಎಂದು ಹೇಳಿದರು.

ಡಿಎಸ್ ಸ್ಟಾರ್ ಪ್ರಚಾರಕರ ಕುರಿತು ಹಾಸ್ಯ
ನಮ್ಮ ಕುಟುಂಬದಿಂದ 8 ಸ್ಟಾರ್ ಪ್ರಚಾರಕರು ಆಗಿದ್ದಕ್ಕೆ ಕೆಲವು ಟೀಕೆ ಮಾಡುತ್ತಿದ್ದಾರೆ. ಆದರೆ ನಿನ್ನೆ ನಾನು ಹುಣಸೂರಿಗೆ ಹೋದಾಗ ಜನರೇ ನಿಖಿಲ್ ಅವರನ್ನು ಕಳುಹಿಸಿ ಎಂದು ಹೇಳಿದ್ದಾರೆ. ಜನರು ಬಯಸಿದ್ದಾರೆ, ನಾವಾಗಿಯೇ ಸ್ಟಾರ್ ಪ್ರಚಾರಕರಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ನಾಮಪತ್ರ ವಾಪಸ್ ಪಡೆಯುವಂತೆ ಒತ್ತಡ
ಗೋಕಾಕ್ ಅಭ್ಯರ್ಥಿಗೆ ನಾಮಪತ್ರ ವಾಪಸ್ ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ. ಹಲವಾರು ಸಚಿವರು ಅಭ್ಯರ್ಥಿಯ ತಲೆ ಕೆಡಿಸಲು ಮುಂದಾಗಿದ್ದರು. ನಿನ್ನೆ ಸುಮಾರು ಮೂರು ಗಂಟೆಗಳ ಕಾಲಾಭ್ಯರ್ಥಿಯ ಮನೆಯಲ್ಲಿ ಮನವೊಲಿಸುವ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications