ಹಲಸೂರು ಕೆರೆ ಸಂರಕ್ಷಣೆ ಹೊಣೆ ಯಾರದ್ದು?
ಬೆಂಗಳೂರು, ಮಾರ್ಚ್ 09 : ಹಲಸೂರು ಕೆರೆಯಲ್ಲಿನ ಮೀನುಗಳ ಮಾರಣ ಹೋಮಕ್ಕೆ ಕಾರಣ ಯಾರು?. ಕಳೆದ ವರ್ಷದ ಘಟನೆಗಳ ಬಳಿಕವೂ ಬಿಬಿಎಂಪಿ ಮತ್ತು ಬಿಡಿಎ ಒಬ್ಬರ ವಿರುದ್ಧ ಮತ್ತೊಬ್ಬರು ಆರೋಪ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ. ಕೆರೆಯ ಒಡಲು ಸೇರುತ್ತಿರುವ ವಿಷಕಾರಿ ನೀರನ್ನು ತಡೆಗಟ್ಟಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.
2015ರಲ್ಲಿ ಗೌಡನಪಾಳ್ಯ ಮತ್ತು ದೊರೆಕೆರೆಯಲ್ಲಿ ಮೀನುಗಳ ಮಾರಣ ಹೋಮ ನಡೆದಿತ್ತು. ಎರಡೂ ಕೆರೆ ಸೇರಿ ಸುಮಾರು 20000 ಮೀನುಗಳು ಸಾವನ್ನಪ್ಪಿದ್ದವು. ಈ ಬಾರಿ ಹಲಸೂರು ಕೆರೆಯಲ್ಲಿ 1000ಕ್ಕೂ ಅಧಿಕ ಮೀನುಗಳು ಮೃತಪಟ್ಟಿವೆ. [ಹಲಸೂರು ಕೆರೆ ಮಾಲಿನ್ಯಕ್ಕೆ ಬಲಿಯಾದ ಸಾವಿರಾರು ಮೀನುಗಳು]

ಗೌಡನಪಾಳ್ಯ ಕೆರೆಯಲ್ಲಿ ಮೀನುಗಳ ಸಾವಿಗೆ ತ್ಯಾಜ್ಯ ನೀರು ಕೆರೆ ಸೇರಿರುವುದೇ ಕಾರಣ ಎಂದು ತಿಳಿದುಬಂದಿತ್ತು. ಭೂ ಮಾಫಿಯಾದವರ ಕೈವಾಡದಿಂದಾಗಿ ಕೆರೆ ಸುತ್ತಮುತ್ತಲಿನ ಜಾಗ ಒತ್ತುವರಿಯಾಗಿತ್ತು. ಇದರಿಂದಾಗಿ ತ್ಯಾಜ್ಯದ ನೀರು ಕೆರೆಗೆ ನೇರವಾಗಿ ಸೇರುತ್ತಿತ್ತು. [ಬೆಳ್ಳಂದೂರು ಕೆರೆ ಬಿಳಿನೊರೆಯ ರಹಸ್ಯ ಲೀಕ್]
ಹಲಸೂರು ಕೆರೆಯಲ್ಲಿನ ಮೀನುಗಳ ಸಾವಿಗೆ ಆಮ್ಲಜನಕದ ಕೊರತೆ ಕಾರಣ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಪರಿಸರವಾದಿಗಳು ಬಿಬಿಎಂಪಿಯ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ. ಮನೆಗಳ ತ್ಯಾಜ್ಯ ನೀರು ಕೆರೆಗೆ ಸೇರುತ್ತಿದೆ. ಆದ್ದರಿಂದ ಮೀನುಗಳು ಸಾವನ್ನಪ್ಪಿವೆ ಎಂದು ಅವರು ಹೇಳುತ್ತಿದ್ದಾರೆ. [ಗೂಗಲ್ ಮ್ಯಾಪ್ ನಲ್ಲಿ 'ಬೆಳ್ಳಂದೂರು ಲೇಕ್' ಹುಡುಕಬೇಡಿ!]
ಯಾರನ್ನು ದೂರುವುದು? : ಬಿಬಿಎಂಪಿ ಮತ್ತು ಬಿಡಿಎ ಕೆರೆಗಳಿಗೆ ತ್ಯಾಜ್ಯ ನೀರು ಸೇರಲು ನೀವು ಕಾರಣ ಎಂದು ಆರೋಪ ಮಾಡಿಕೊಳ್ಳುತ್ತಿವೆ. ಬಿಡಿಎ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಂಡಿಲ್ಲ ಎಂದು ದೂರುತ್ತಿದೆ.
ಬಿಬಿಎಂಪಿಗೆ ಕೆರೆಗಳ ನಿರ್ವಹಣೆಗೆ ವಾರ್ಷಿಕವಾಗಿ ಅನುದಾನ ನೀಡಲಾಗುತ್ತದೆ. ಅವರು ಅದನ್ನು ಸರಿಯಾಗಿ ಬಳಸುತ್ತಿಲ್ಲ ಎಂದು ಬಿಡಿಎ ದೂರಿದೆ. ಆದರೆ, ಹಲಸೂರು ಕೆರೆಗೆ ತ್ಯಾಜ್ಯ ನೀರು ಎಲ್ಲಿಂದ ಸೇರುತ್ತಿದೆ? ಎಂದು ಬಿಬಿಎಂಪಿ ಅಥವ ಬಿಡಿಎ ಇನ್ನೂ ಪರಿಶೀಲನೆ ನಡೆಸಿಲ್ಲ. [ಪಿಟಿಐ ಚಿತ್ರ]
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications