ರಾಕೇಶ್ ಅಸ್ವಸ್ಥ, ಕರ್ನಾಟಕ 'ಸಿಎಂ' ಟ್ವೀಟ್ ಬಗ್ಗೆ ಆಕ್ಷೇಪ
ಬೆಂಗಳೂರು, ಜುಲೈ 27: ಬೆಲ್ಜಿಯಂನಲ್ಲಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅಸ್ವಸ್ಥರಾಗಿರುವ ಸುದ್ದಿಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದು ಈಗ ಚರ್ಚೆಯ ವಿಷಯವಾಗಿದೆ.[ಕರಳು ಬೇನೆ ಕಾಯಿಲೆಗೆ ಬಲಿಯಾದ ರಾಕೇಶ್ ಸಿದ್ದರಾಮಯ್ಯ]
ಸಿಎಂ ಸಿದ್ದರಾಮಯ್ಯ ಅವರು ಈ ವಿಷಯದಲ್ಲಿ ನೆರವು ಕೋರಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕರೆ ಮಾಡಿದ್ದು, ಈ ಬಗ್ಗೆ ಸುಷ್ಮಾ ಅವರು ನೆರವು ನೀಡಿದ್ದರ ಬಗ್ಗೆ ಯಾವುದೇ ತಗಾದೆ ಇಲ್ಲ. [ಮಗನನ್ನು ನೋಡಲು ಬೆಲ್ಜಿಯಂಗೆ ಹೊರಟ ಸಿದ್ದರಾಮಯ್ಯ]

@CMofKarnataka ಸ್ವಾಮಿ, ವೈಯಕ್ತಿಕ ವಿಷಯವನ್ನು ಯಾಕೆ ಟ್ವೀಟ್ ಮಾಡುತ್ತೀರಿ?
— ಜೀಬಿ (@gansh83) July 27, 2016
ಬ್ರೆಲ್ಜಿಯಂನ ಬ್ರುಸೆಲ್ಸ್ ನ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ರಾಕೇಶ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥ ಮಗನನ್ನು ನೋಡಲು ಬ್ರುಸೆಲ್ಸ್ ಗೆ ಸಿದ್ದರಾಮಯ್ಯ ಪ್ರಯಾಣ ಬೆಳೆಸಿದ್ದಾರೆ.
@CMofKarnataka @OfficeOfRG What an important news to be shared by CM. Don't tweet such trivial things from official IDs
— Kumar Kollipara (@kumarkollipara1) July 27, 2016
ಸದ್ಯ ಬೆಲ್ಜಿಯಂನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅಮೆರಿಕ ಅಥವಾ ಸಿಂಗಾಪುರದಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಸಿಎಂ ಕುಟುಂಬ ಮುಂದಾಗಿದೆ. ಆದರೆ, ರಾಕೇಶ್ ಅವರ ಅನಾರೋಗ್ಯಕ್ಕೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Let him get well soon @CMofKarnataka BTW why personal news is part of official account?
— Suresha Posavalike (@sposavalike) July 27, 2016
ಆದರೆ, ವಿದೇಶಾಂಗ ಸಚಿವಾಲಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ರಾಕೇಶ್ ಹಾಗೂ ನಾಲ್ವರು ಗೆಳೆಯರು ಫ್ರಾನ್ಸ್ ಹಾಗೂ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದರು. ಮಂಗಳವಾರ ರಾತ್ರಿ ಅವರಿಗೆ ಪ್ಯಾಂಕ್ರಿಯಾಟೈಟಿಸ್ ತೊಂದರೆ ಹೆಚ್ಚಾಗಿ ಅಸ್ವಸ್ಥರಾಗಿದ್ದಾರೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.












Click it and Unblock the Notifications