ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಕೇಶ್ ಅಸ್ವಸ್ಥ, ಕರ್ನಾಟಕ 'ಸಿಎಂ' ಟ್ವೀಟ್ ಬಗ್ಗೆ ಆಕ್ಷೇಪ

By Mahesh
|
Google Oneindia Kannada News

ಬೆಂಗಳೂರು, ಜುಲೈ 27: ಬೆಲ್ಜಿಯಂನಲ್ಲಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅಸ್ವಸ್ಥರಾಗಿರುವ ಸುದ್ದಿಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದು ಈಗ ಚರ್ಚೆಯ ವಿಷಯವಾಗಿದೆ.[ಕರಳು ಬೇನೆ ಕಾಯಿಲೆಗೆ ಬಲಿಯಾದ ರಾಕೇಶ್ ಸಿದ್ದರಾಮಯ್ಯ]

ಸಿಎಂ ಸಿದ್ದರಾಮಯ್ಯ ಅವರು ಈ ವಿಷಯದಲ್ಲಿ ನೆರವು ಕೋರಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕರೆ ಮಾಡಿದ್ದು, ಈ ಬಗ್ಗೆ ಸುಷ್ಮಾ ಅವರು ನೆರವು ನೀಡಿದ್ದರ ಬಗ್ಗೆ ಯಾವುದೇ ತಗಾದೆ ಇಲ್ಲ. [ಮಗನನ್ನು ನೋಡಲು ಬೆಲ್ಜಿಯಂಗೆ ಹೊರಟ ಸಿದ್ದರಾಮಯ್ಯ]

Son unwell, but no sympathy for Karnataka CM on twitter
ಆದರೆ, ಸಿಎಂ ಅವರ ಮಗ ರಾಕೇಶ್ ಅವರು ಬೆಲ್ಜಿಯಂನಲ್ಲಿ ಅಸ್ವಸ್ಥರಾಗಿರುವ ಸುದ್ದಿಯನ್ನು ಅಧಿಕೃತ ಟ್ವಿಟ್ಟರ್ ಖಾತೆ(@CMofKarnataka) ಯಿಂದ ಟ್ವೀಟ್ ಮಾಡಿದ್ದಕ್ಕೆ ಸಾರ್ವಜನಿಕರಿಂದ ಆಕ್ಷೇಪ ಎದುರಾಗಿದೆ.

ಬ್ರೆಲ್ಜಿಯಂನ ಬ್ರುಸೆಲ್ಸ್ ನ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ರಾಕೇಶ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥ ಮಗನನ್ನು ನೋಡಲು ಬ್ರುಸೆಲ್ಸ್ ಗೆ ಸಿದ್ದರಾಮಯ್ಯ ಪ್ರಯಾಣ ಬೆಳೆಸಿದ್ದಾರೆ.

ಸದ್ಯ ಬೆಲ್ಜಿಯಂನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅಮೆರಿಕ ಅಥವಾ ಸಿಂಗಾಪುರದಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಸಿಎಂ ಕುಟುಂಬ ಮುಂದಾಗಿದೆ. ಆದರೆ, ರಾಕೇಶ್ ಅವರ ಅನಾರೋಗ್ಯಕ್ಕೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.


ಆದರೆ, ವಿದೇಶಾಂಗ ಸಚಿವಾಲಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ರಾಕೇಶ್ ಹಾಗೂ ನಾಲ್ವರು ಗೆಳೆಯರು ಫ್ರಾನ್ಸ್ ಹಾಗೂ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದರು. ಮಂಗಳವಾರ ರಾತ್ರಿ ಅವರಿಗೆ ಪ್ಯಾಂಕ್ರಿಯಾಟೈಟಿಸ್ ತೊಂದರೆ ಹೆಚ್ಚಾಗಿ ಅಸ್ವಸ್ಥರಾಗಿದ್ದಾರೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
Karnataka Chief Minister Siddaramaiah's son has fallen ill and is in hospital in Belgium, but the chief minister is getting no sympathy from his twitter followers.The reason: The CM used his official twitter handle, @CMofKarnataka, to make a announcement on a personal matter, the twitterati has complained.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X