ಡಿಕೆಶಿಯನ್ನು ಅಹ್ಮದ್ ಪಟೇಲ್ ಭೇಟಿಯಾದ ಹಿಂದೆ ಡ್ಯಾಮೇಜ್ ಕಂಟ್ರೋಲ್ ಯತ್ನ
ಬೆಂಗಳೂರು, ಸೆಪ್ಟೆಂಬರ್ 27: ತಿಹಾರ್ ಜೈಲಿನಲ್ಲಿ ಇರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಕಾಂಗ್ರೆಸ್ ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈಚೆಗೆ ಭೇಟಿ ಆಗಿದ್ದರು. ಆದರೆ ಅದೇ ತಿಹಾರ್ ಜೈಲಿನಲ್ಲಿ ಇರುವ ಕರ್ನಾಟಕದಲ್ಲಿನ ಕಾಂಗ್ರೆಸ್ ನ ಪ್ರಭಾವಿ ಮುಖಂಡ ಡಿ. ಕೆ. ಶಿವಕುಮಾರ್ ರನ್ನು ಭೇಟಿ ಆಗಿರಲಿಲ್ಲ. ಈ ವಿಚಾರ ಒಕ್ಕಲಿಗ ಸಮುದಾಯಕ್ಕೆ ಬೇರೆ ಸಂದೇಶ ರವಾನಿಸಿದೆ ಎಂಬುದು ಕಾಂಗ್ರೆಸ್ ತಲೆಗೆ ತಾಕಿದೆ.
ಡ್ಯಾಮೇಜ್ ಕಂಟ್ರೋಲ್ ಗಾಗಿ ಕಾಂಗ್ರೆಸ್ ನ ಹಿರಿತಲೆ ಅಹ್ಮದ್ ಪಟೇಲ್ ಅವರು ಗುರುವಾರ ಡಿ. ಕೆ. ಶಿವಕುಮಾರ್ ರನ್ನು ತಿಹಾರ್ ಜೈಲಿನಲ್ಲಿ ಭೇಟಿ ಆಗಿದ್ದಾರೆ. ಇಲ್ಲಿ ಇನ್ನೊಂದು ವಿಚಾರವನ್ನು ನೆನಪಿಟ್ಟುಕೊಳ್ಳಬೇಕು. ಸಂಸದ ಹಾಗೂ ಶಿವಕುಮಾರ್ ಸೋದರ ಡಿ. ಕೆ. ಸುರೇಶ್ ಅವರು ದೇವೇಗೌಡರನ್ನು ಭೇಟಿ ಆದ ಒಂದು ದಿನದ ನಂತರ ಈ ಬೆಳವಣಿಗೆ ಆಗಿದೆ.
ಸೋನಿಯಾ ಗಾಂಧಿ ಪರಮಾಪ್ತ ಅಹ್ಮದ್ ಪಟೇಲ್ ಹಾಗೂ ಆನಂದ್ ಶರ್ಮಾ ತಿಹಾರ್ ಜೈಲಿನಲ್ಲಿ ಶಿವಕುಮಾರ್ ರನ್ನು ಭೇಟಿ ಆಗಿದ್ದಾರೆ. ಆದರೆ ಇದಕ್ಕೂ ಮುನ್ನ್ ಸೋನಿಯಾ ಹಾಗೂ ಮನಮೋಹನ್ ಸಿಂಗ್ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದ ಕಾಂಗ್ರೆಸ್, ಜೈಲು ನಿಯಮಗಳ ಕಾರಣಕ್ಕೆ ಭೇಟಿ ಮಾಡಲಿಲ್ಲ ಎಂದು ಹೇಳಿತ್ತು.

ಅಂದ ಹಾಗೆ, ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರ ಮಾಡಿದ ಮೇಲೆ ಕಾಂಗ್ರೆಸ್ ನಿಂದ ಭೇಟಿ ಆಗುತ್ತಿರುವ ಮೊದಲ ನಾಯಕರು ಆಹ್ಮದ್ ಪಟೇಲ್ ಹಾಗೂ ಆನಂದ್ ಶರ್ಮಾ. ಆಸ್ಪತ್ರೆಯಲ್ಲಿ ದಾಖಲಿಸಿದ್ದ ವೇಳೆ ಕಾಂಗ್ರೆಸ್ ನ ಕೆಲ ನಾಯಕರು ಭೇಟಿ ಮಾಡಿದ್ದರು. ಆದರೆ ತಿಹಾರ್ ಜೈಲಿಗೆ ಯಾರೂ ಬಂದಿರಲಿಲ್ಲ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ. ಎರಡು ವರ್ಷಗಳ ಹಿಂದೆ ಗುಜರಾತ್ ನಿಂದ ರಾಜ್ಯಸಭೆಗೆ ಅಹ್ಮದ್ ಪಟೇಲ್ ಆಯ್ಕೆಯಾಗಬೇಕಾದ ಸಂದರ್ಭದಲ್ಲಿ ಗುಜರಾತ್ ನ ಕಾಂಗ್ರೆಸ್ ಶಾಸಕರನ್ನು ಕಾಯ್ದುಕೊಂಡಿದ್ದರು ಡಿ. ಕೆ. ಶಿವಕುಮಾರ್. ಆ ಸಂದರ್ಭದಲ್ಲೇ ಆದಾಯ ತೆರಿಗೆ ಇಲಾಖೆಯಿಂದ ಶಿವಕುಮಾರ್ ಮೇಲೆ ದಾಳಿ ಅಗಿತ್ತು.
ಡಿ. ಕೆ. ಶಿವಕುಮಾರ್ ಅವರಿಂದ ಕಾಂಗ್ರೆಸ್ ಪಕ್ಷವು ಅಂತರ ಕಾಯ್ದುಕೊಳ್ಳುತ್ತಿದೆ ಎಂಬ ಗುಮಾನಿ ಶುರುವಾಗಿರುವ ಸಂದರ್ಭದಲ್ಲಿ ಕೇಂದ್ರ ನಾಯಕತ್ವವು ಎಚ್ಚೆತ್ತುಕೊಂಡು, ಅಹ್ಮದ್ ಪಟೇಲ್ ಭೇಟಿ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications