ಬೆಂಗಳೂರಿನ ಬುಧವಾರದ ನಿಗೂಢ ಶಬ್ದದ ರಹಸ್ಯ ಬಯಲು
ಬೆಂಗಳೂರು, ಮೇ 20: ಬೆಂಗಳೂರಿನ ಅನೇಕ ಬಡಾವಣೆಗಳಲ್ಲಿ ಬುಧವಾರ ಮಧ್ಯಾಹ್ನ ಬೆಚ್ಚಿ ಬೀಳುವಂತೆ ಮಾಡಿದ ಶಬ್ದದ ರಹಸ್ಯ ಬಯಲಾಗಿದೆ. ಬೆಂಗಳೂರನ್ನು ನಡುಗುವಂತೆ ಮಾಡಿದ ಶಬ್ದವು ಭೂಕಂಪದಿಂದ ಉಂಟಾಗಿದ್ದಲ್ಲ, ಬೇರೆ ಯಾವುದೇ ಸ್ಫೋಟವಲ್ಲ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಕೇಂದ್ರ(kSNDMC)ದ ಅಧಿಕಾರಿಗಳು ಸ್ಪಷ್ಟಪಡಿಸಿದ್ದರು.
ಆದರೆ, ಇನ್ನು ಸ್ಪಷ್ಟವಾದ ಉತ್ತರ ಸಿಕ್ಕಿರಲಿಲ್ಲ. ಸಂಜೆ ವೇಳೆಗೆ ಈ ಎಲ್ಲಾ ಗೊಂದಲ, ಕುತೂಹಲ, ರಹಸ್ಯಕ್ಕೆ ಭಾರತೀಯ ವಾಯುಸೇನೆ ತೆರೆ ಎಳೆದಿದೆ. ರಕ್ಷಣಾ ಇಲಾಖೆಯ ಬೆಂಗಳೂರಿನ ವಕ್ತಾರರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
#Update
— PRO Bengaluru, Ministry of Defence (@Prodef_blr) May 20, 2020
It was a routine IAF Test Flight involving a supersonic profile which took off from Bluru Airport and flew in the allotted airspace well outside City limits. The aircraft was of Aircraft Systems and Testing Establishment (ASTE) @IAF_MCC @SpokespersonMoD
ಬೆಂಗಳೂರಿನ ವೈಟ್ ಫೀಲ್ಡ್, ಟಿನ್ ಫ್ಯಾಕ್ಟರಿ, ಕೋರಮಂಗಲ, ಜಯನಗರ, ಎಚ್ ಎಸ್ ಆರ್ ಲೇ ಔಟ್, ಕೆ. ಆರ್ ಪುರಂ, ಬನ್ನೇರುಘಟ್ಟ ರಸ್ತೆ, ಮುಂತಾದೆಡೆ ಈ ಶಬ್ದ ಕೇಳಿ ಬಂದ ಶಬ್ದಕ್ಕೆ ಕಾರಣವಾಗಿದ್ದು ಯುದ್ಧ ವಿಮಾನ.
ಕೊರೊನಾವೈರಸ್ ನಿಂದ ಲಾಕ್ಡೌನ್ ಆಗಿದ್ದ ವಾಯುನೆಲೆಗಳು ಕೆಲದಿನಗಳಿಂದ ಕಾರ್ಯನಿರ್ವಹಿಸಲು ಆರಂಭಿಸಿವೆ. ಇಂದು ಮಧ್ಯಾಹ್ನದ ವೇಳೆ ಸುಖೋಯ್ 30 ಯುದ್ಧ ವಿಮಾನವೊಂದು ಬೆಂಗಳೂರಿನ ಉತ್ತರ ಭಾಗದಲ್ಲಿ ಹಾರಾಟ ನಡೆಸಿದೆ. ತೀರಾ ಕೆಳ ಮಟ್ಟದಲ್ಲಿ ಹಾರಾಟ ನಡೆಸಿದ್ದರಿಂದ ಅಗತ್ಯಕ್ಕಿಂತ ದೊಡ್ಡ ಮಟ್ಟದಲ್ಲಿ ಶಬ್ದ ಕೇಳಿಸಿರಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಎಚ್ಎಎಲ್ ತರಬೇತಿ ಕೇಂದ್ರ ಆರಂಭವಾಗಿದ್ದರೂ ಯಾವುದೇ ವಿಮಾನ ಹಾರಾಟವಾಗಿಲ್ಲ ಎಂದು ಸಂಸ್ಥೆ ಹೇಳಿದ್ದರಿಂದ ಕುತೂಹಲ ಇನ್ನಷ್ಟು ಹೆಚ್ಚಾಗಿತ್ತು.
|
ಹಿರಿಯ ಸಂಪಾದಕ ಶಿವ್ ಅರೂರ್ ಟ್ವೀಟ್
ಬೆಂಗಳೂರಿನ ಪೂರ್ವ ಉತ್ತರ ಹಾಗೂ ದಕ್ಷಿಣ ಕೆಲ ಭಾಗದಲ್ಲಿ ಬುಧವಾರ ಮಧ್ಯಾಹ್ನ ಕೇಳಿ ಬಂದ ಭಾರಿ ಶಬ್ದಕ್ಕೆ ಕಾರಣವಾಗಿದ್ದು ಯುದ್ಧ ವಿಮಾನದ ಹಾರಾಟ ಎಂದು ಭಾರತೀಯ ವಾಯುಸೇನೆ ಸ್ಪಷ್ಟಪಡಿಸಿದೆ ಎಂದು ಇಂಡಿಯಾ ಟುಡೇ ಹಿರಿಯ ಸಂಪಾದಕ ಶಿವ್ ಅರೂರ್ ಟ್ವೀಟ್ ಮಾಡಿದ್ದಾರೆ.

ನಾಗರಿಕರ ಅಭಿಪ್ರಾಯ, ಅನುಭವ
ನಮಗೆ ಭೂಕಂಪದ ಅನುಭವವಾಗಿಲ್ಲ, ಟ್ರಾನ್ಸ್ ಫಾರ್ಮರ್ ಸ್ಫೋಟ ಎಂದು ಭಾವಿಸಿದೆವು ಆದರೆ, ನಂತರ ಇದು ಭೂಕಂಪವಲ್ಲ ಎಂದು ತಿಳಿದು ಬಂದಿದೆ. ತಕ್ಷಣವೇ ತಮ್ಮ ವಾಟ್ಸಾಪ್ ಗುಂಪಿನಲ್ಲಿ ಈ ಬಗ್ಗೆ ವಿಷಯ ಹಂಚಿಕೊಂಡೆವು ಎಂದು ಎಚ್ ಎಸ್ ಆರ್ ಲೇ ಔಟ್ ನ ಅಪಾರ್ಟ್ಮೆಂಟ್ ನಿವಾಸಿ ಸುಷ್ಮಾ ಅವರು ತಿಳಿಸಿದ್ದಾರೆ. ಇದೇ ರೀತಿ ಅನುಭವವನ್ನು ಹಲವು ಮಂದಿ ಹಂಚಿಕೊಂಡಿದ್ದಾರೆ. ಒಟ್ಟಾರೆ, ಇದು ಭೂಮಿಯಲ್ಲಲ್ಲ ಆಗಸದಲ್ಲಿ ಏನೋ ಆಗಿದೆ ಎಂಬುದು ಜನರ ಅಭಿಪ್ರಾಯವಾಗಿದೆ.

ಭೂಕಂಪವಂತೂ ಅಲ್ಲವೇ ಅಲ್ಲ: ಕೆಎಸ್ಎನ್ ಡಿಎಂಸಿ
''ಇದು ಭೂಕಂಪವಾಗಿರಲು ಸಾಧ್ಯವಿಲ್ಲ ನಮ್ಮ ಮಾಪಕಗಳಲ್ಲಿ ಯಾವುದೇ ದಾಖಲೆ ರೆಕಾರ್ಡ್ ಆಗಿಲ್ಲ. ಈ ಬಗ್ಗೆ ಕಂಟ್ರೋಲ್ ರೂಮಿಗೆ ಸಾಕಷ್ಟು ಕರೆಗಳು ಬಂದಿವೆ. ಕೆಲವು ಭೂ ಕಂಪನದ ಅನುಭವ ಹಂಚಿಕೊಂಡಿದ್ದಾರೆ. ಹಲವಾರು ಮಂದಿ ಭಾರಿ ಶಬ್ದ ಕೇಳಿಸಿದೆ ಎಂದಿದ್ದಾರೆ, ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ'' ಎಂದು ಕೆಎಸ್ ಎನ್ ಡಿಎಂಸಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
''ಅಂಫಾನ್ ಚಂಡಮಾರುತದ ದೆಸೆಯಿಂದ ತಂಪಾದ ವಾತವಾರಣವಿದೆ. ಈ ಸಂದರ್ಭದಲ್ಲಿ ಸೈಕ್ಲೋನ್ ಗಾಳಿ ರಭಸವಾಗಿ ನಿರ್ವಾತಕ್ಕೆ ನುಗ್ಗಿದಾಗ ಆಗಸದಲ್ಲಿ ಉಂಟಾದ ಶಬ್ದ ಇದು ಎಂದು ಹೇಳಬಹುದು. ಇದು ಭೂಕಂಪವಲ್ಲ. ಅತ್ಯಂತ ಸಣ್ಣ ಪ್ರಮಾಣದ ಕಂಪನವಾದರೂ ಅದನ್ನು ದಾಖಲಿಸುವ ಸಾಧನಗಳನ್ನು ನಮ್ಮ ಮೂರು ಕೇಂದ್ರಗಳು ಹೊಂದಿವೆ. ಬೆಂಗಳೂರು, ಗೌರಿಬಿದನೂರು ಕೇಂದ್ರಗಳಲ್ಲಿ ಯಾವುದೇ ಕಂಪನದ ದಾಖಲೆಗಳಾಗಿಲ್ಲ. ಇದು ಆಗಸದಲ್ಲಿ ಬಿಸಿ ಹಾಗೂ ತಂಪು ವಾಯುವಿನ ನಡುವಿನ ಸಂಘರ್ಷದಿಂದ ಉಂಟಾದ ಶಬ್ದ'' ಎಂದು ಮಾಜಿ ಮುಖ್ಯಸ್ಥ ಪ್ರಕಾಶ್ ಹೇಳಿದ್ದಾರೆ.

ಪೊಲೀಸ್ ಆಯುಕ್ತರ ಪ್ರತಿಕ್ರಿಯೆ
ಪೊಲೀಸ್ ಆಯುಕ್ತರ ಪ್ರತಿಕ್ರಿಯೆ: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯಿಸಿ, ಈ ಬಗ್ಗೆ ಪೊಲೀಸ್ ಕಂಟ್ರೋಲ್ ರೂಮ್ 100ಕ್ಕೆ ಯಾವುದೇ ಕರೆ ಬಂದಿಲ್ಲ. ಏರ್ ಫೋರ್ಸ್ ಕಂಟ್ರೋಮ್ ರೂಮ್ ಅಧಿಕಾರಿಗಳನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಎಲ್ಲಾದರೂ ವಿಮಾನ ಪತನವಾಗಿದೆಯೆ, ಯುದ್ಧ ವಿಮಾನ ಹಾರಾಟ ನಡೆಸಲಾಗಿದೆಯೆ ಎಂಬುದರ ಬಗ್ಗೆ ಚೆಕ್ ಮಾಡಲಾಗುತ್ತಿದೆ ಎಂದು ಹೇಳಿದ್ದರು.
|
ಸುಖೋಯ್ 30 ವಿಮಾನ ಹಾರಾಟ?
ಸುಖೋಯ್ 30 ವಿಮಾನ ಹಾರಾಟ ಎಂದು ನಂಬಲಾಗಿದೆ. ಆದರೆ, ಭಾರತದಲ್ಲೇ ನಿರ್ಮಾಣಗೊಂಡ ತೇಜಸ್ ಯುದ್ಧ ವಿಮಾನದ ಹಾರಾಟವೂ ಇದೇ ರೀತಿ ಶಬ್ದ ಉಂಟು ಮಾಡಬಹುದು.ವಿಮಾನವು ಮೋಡಗಳನ್ನು ಸೀಳಿ ಹಾರಾಟ ಮಾಡುವಾಗ ಸರಿ ಸುಮಾರು 300 ಡೆಸಿಬಲ್ ನಷ್ಟು ಶಬ್ದ ಉತ್ಪಾದಿಸುತ್ತದೆ. ಬಹುಶಃ ಹಲವು ದಿನಗಳ ಲಾಕ್ಡೌನ್ ನಿಂದ ವಾಯು ಮಾಲಿನ್ಯ ಕಡಿಮೆ ಆಗಿದ್ದರಿಂದ ಈ ಶಬ್ದ ಹೆಚ್ಚಿನ ವ್ಯಾಪ್ತಿಯನ್ನು ಪಡೆದುಕೊಂಡಿರಬಹುದು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್











Click it and Unblock the Notifications