ಮದ್ಯ ಸೇವನೆ ಪ್ರಮಾಣ ಪತ್ತೆಗೆ ಬಾರ್ ಗಳಲ್ಲೇ ಯಂತ್ರ
ಕುಡಿದು ವಾಹನ ಚಲಾಯಿಸಿ ಪೊಲೀಸರಿಗೆ ಕೈಗೆ ಸಿಲುಕಿ ದಂಡ ಕಟ್ಟುವ ಮೊದಲೇ, ನೀವು ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ದೀರಿ ಎಂಬುದನ್ನು ಪತ್ತೆ ಮಾಡಲು ಬಾರ್ ಗಳಲ್ಲೇ ಇನ್ನುಮುಂದೆ ಯಂತ್ರಗಳು ಬರಲಿವೆ.
ಬೆಂಗಳೂರು, ನವೆಂಬರ್, 18: ರಾಜ್ಯದ ಸಾವಿರಕ್ಕೂ ಹೆಚ್ಚು ಪಬ್ ಮತ್ತು ಬಾರ್ ಗಳು ಇನ್ನು ಮುಂದೆ ಮದ್ಯ ಸೇವನೆ ಪ್ರಮಾಣವನ್ನು ಪತ್ತೆ ಮಾಡುವ ಕಿಯೋಸ್ಕ್ ಯಂತ್ರಗಳುನ್ನು ಅಳವಡಿಸಿಕೊಳ್ಳಲಿವೆ.
ಈ ಮೂಲಕ ಗ್ರಾಹಕರು ತಾವು ಎಷ್ಟು ಪ್ರಮಾಣದ ಮದ್ಯ ಸೇವಿಸಿದ್ದೇವೆ. ವಾಹನ ಚಲಾಯಿಸಬಹುದೇ ಇಲ್ಲವೆ ಎಂಬ ಮಾಹಿತಿಯನ್ನು ಬಾರ್ ಮತ್ತು ಪಬ್ ದ್ವಾರಗಳಲ್ಲೇ ಪಡೆದುಕೊಳ್ಳಬಹುದಾಗಿದೆ.
ಈ ಕ್ರಮದಿಂದ ಹೆಚ್ಚು ಪ್ರಮಾಣದಲ್ಲಿ ಮದ್ಯ ಸೇವನೆ ಮಾಡಿರುವವರು ಮನೆಗೆ ಹೋಗಲು ಬೇರೆ ವ್ಯವಸ್ಥೆ ಮಾಡಿಕೊಳ್ಳಬಹುದು.

ರೋಡ್ ಸೇಫ್ಟಿ ಇನ್ಷಿಯೇಟೀವ್ ಫಾರ್ ಎ ಸೇಫ್ ಕರ್ನಾಟಕ (ರಿಸ್ಕ್, RISK) ಸಂಘಟನೆಯ ಸಹಯೋಗದೊಂದಿಗೆ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.
ಜತೆಗೆ ಓಲಾ ಕ್ಯಾಬ್ ಸರ್ವಿಸ್ ಸಂಸ್ಥೆಯೊಂದಿಗೂ ಸಹ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಹೆಚ್ಚಾಗಿ ಮದ್ಯ ಪ್ರಮಾಣ ಸೇವಿಸಿರುವ ವ್ಯಕ್ತಿಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಓಲಾ ಮುಂದಾಗಿದೆ.
ಬೆಂಗಳೂರಿನ ಚರ್ಚ್ ಸ್ಟ್ರೀಟ್ ನ ಪಬ್ ವೊಂದರಲ್ಲಿ ಅಳವಡಿಸಲಾಗಿರುವ ಕಿಯೋಸ್ಕ್ ಯಂತ್ರವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರು ಗುರುವಾರ ಉದ್ಘಾಟಿಸಿದರು.
ಈ ಕ್ರಮದಿಂದ ರಸ್ತೆ ಅಪಘಾತಗಳ ಪ್ರಮಾಣ ಸಾಕಷ್ಟು ತಪ್ಪುತ್ತದೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಮಾರುತಿ ಸಾಂಬ್ರಾಣಿ ಅವರು ಮಾಧ್ಯಮಗಳಿಗೆ ತಿಳಿಸಿದರು.
2014ರಲ್ಲಿ 55,138 ಜನ ಮತ್ತು 2015ರಲ್ಲಿ 62,576 ಮಂದಿ ಬೆಂಗಳೂರಿನಲ್ಲಿ ಕುಡಿದು ವಾಹನ ಚಾಲನೆ ಮಾಡಿದ ಪ್ರಕರಣಗಳನ್ನು ಎದುರಿಸಿದ್ದಾರೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
ಪಬ್-ವೈನ್ ಸೆಂಟರ್ಗಳಿಗೆ ಅಪ್ರಾಪ್ತರ ಪ್ರವೇಶ ನಿಷೇಧಕ್ಕೆ ಹೈಕೋರ್ಟ್ ಸೂಚನೆ; ಐಡಿ ಪರಿಶೀಲಿಸಲು ಸಲಹೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications