Get Updates
Get notified of breaking news, exclusive insights, and must-see stories!

ಶೀಘ್ರವೇ ಆದಿವಾಸಿ ಕುಟುಂಬಗಳ ಪ್ರದೇಶಕ್ಕೆ ಭೇಟಿ : ಎಚ್‌ಡಿಕೆ

ಬೆಂಗಳೂರು, ಜನವರಿ 11: ರಾಜ್ಯದಲ್ಲಿ ನೆಲೆಸಿರುವ ಆದಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದ್ದು, ಶೀಘ್ರ ದಲ್ಲಿಯೇ ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ತ್ರಿಪುರ ಸಂಸದರು ಹಾಗೂ ಆದಿವಾಸಿ ರಾಷ್ಟ್ರೀಯ ಮಂಚ್ ನ ರಾಷ್ಟ್ರೀಯ ಸಂಚಾಲಕರಾದ ಜಿತೇಂದ್ರ ಚೌಧರಿ ನೇತೃತ್ವದಲ್ಲಿ ಆದಿವಾಸಿ ಸಮನ್ವಯ ಸಮಿತಿಯು ಇಂದು ಆಯೋಜಿಸಿದ್ದ ಆದಿವಾಸಿಗಳ ಸಮಸ್ಯೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

Soon i will visit to tribal peoples places: Kumarasway

ಅರಣ್ಯ ಹಕ್ಕುಗಳ ಕಾಯ್ದೆ 2006 ಅಂಗೀಕಾರವಾಗಿ 12 ವರ್ಷಗಳು ಕಳೆದಿದ್ದರೂ, ಬಹುತೇಕ ಆದಿವಾಸಿಗಳಿಗೆ ಭೂಮಿಯ ಹಕ್ಕು ಪಡೆಯುವಲ್ಲಿ ಇರುವ ಗೊಂದಲಗಳ ನಿವಾರಣೆ, ಶಿಕ್ಷಣ, ಉದ್ಯೋಗ ಸೇರಿದಂತೆ ಇತರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಕಾರಾತ್ಮಕವಾಗಿ ತೀರ್ಮಾನ ಕೈಗೊಳ್ಳಲು ಕಂದಾಯ,ಅರಣ್ಯ,ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದರು.

Soon i will visit to tribal peoples places: Kumarasway

ಆದಿವಾಸಿ ಸಮನ್ವಯ ಸಮಿತಿಯ ಸಂಚಾಲಕ ವೈ.ಕೆ.ಗಣೇಶ್, ಸಹಸಂಚಾಲಕ ಯೆಸ್. ವೈ.ಗುರುಶಾಂತ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+