ನಮ್ಮ ಮೆಟ್ರೋ : ಶೀಘ್ರದಲ್ಲೇ ಮಹಿಳೆಯರಿಗಾಗಿ ಪ್ರತ್ಯೇಕ ಬೋಗಿ
ಬೆಂಗಳೂರು, ಜೂನ್ 7: ಉದ್ಯಾನ ನಗರಿ ಬೆಂಗಳೂರಿನ ಲಕ್ಷಾಂತರ ಜನರಿಗೆ ಟ್ರಾಫಿಕ್ ಸಮಸ್ಯೆಯಿಂದ ಮುಕ್ತಿ ನೀಡಿದ ನಮ್ಮ ಮೆಟ್ರೋ ಇನ್ನು ಕೆಲವೇ ತಿಂಗಳುಗಳಲ್ಲಿ ಮತ್ತಷ್ಟು ಜನರಿಗೆ ಉಪಕಾರಿಯಾಗಲಿದೆ.
ಈಗಾಗಲೇ ಇರುವ ಮೂರು ಮೆಟ್ರೋ ಬೋಗಿಗಳನ್ನು ಆರಕ್ಕೇರಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು, ಈ ವರ್ಷದ ಡಿಸೆಂಬರ್ ಹೊತ್ತಿಗೆ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಜೂನ್ 6 ರಂದು, ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡುತ್ತಿದ್ದ ಅವರು ಈ ವಿಷಯ ತಿಳಿಸಿದರು.

ಇದರೊಂದಿಗೆ ಮಹಿಳೆಯರಿಗಾಗಿಯೇ ಪ್ರತ್ಯೇಕ ಬೋಗಿಯನ್ನು ಮೀಸಲಿಡುವ ಬಗ್ಗೆಯೂ ಯೋಚಿಸಲಾಗುತ್ತಿದೆ. ಬೋಗಿಗಳ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆಯೇ ಮಹಿಳೆಯರಿಗಾಗಿಯೇ ಒಂದು ಬೊಗಿಯನ್ನು ಮೀಸಲಿಡಲಾಗುವುದು ಎಂದು ಜಾರ್ಜ್ ಹೇಳಿದರು.[ಬೆಂಗಳೂರು ಉತ್ತರ-ದಕ್ಷಿಣ: ನಮ್ಮ ಮೆಟ್ರೋ 45 ನಿಮಿಷದ ಪ್ರಯಾಣ]
ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರು ಉತ್ತರ-ದಕ್ಷಿಣವನ್ನು ಬೆಸೆಯುವ ನಾಗಸಂದ್ರದಿಂದ ಯಲಚೇನಹಳ್ಳಿ ವರೆಗಿನ ಗ್ರೀನ್ ಲೈನ್ ಮೆಟ್ರೋ ಕಾರ್ಯಾರಂಭವಾಗಲಿದ್ದು, ಈಗಾಗಲೇ ಪರ್ಪಲ್ ಲೈನ್(ಮೈಸೂರು ರಸ್ತೆಯಿಂದ-ಬೈಯಪ್ಪನಹಳ್ಳಿವರೆಗೆ) ಮೆಟ್ರೊ ಉಪಯೋಗ ಪಡೆಯುತ್ತಿರುವ ಮೂರು ಪಟ್ಟು ಹೆಚ್ಚು ಜನ ಗ್ರೀನ್ ಲೈನ್ ಉಪಯೋಗ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಈ ಕಾರಣದಿಂದಾಗಿ ಮೆಟ್ರೋ ಬೋಗಿಯನ್ನು ಹೆಚ್ಚಿಸುವುದು ಅಗತ್ಯವಾದ ಕಾರಣ, 150 ಹೆಚ್ಚುವರಿ ಬೋಗಿ ಖರೀದಿಗೆ ಈಗಾಗಲೇ ಬಿಇಎಂಎಲ್ (ಭಾರತ್ ಅರ್ಥ್ ಮೂವರ್ಸ್ ಲಿ.)ಗೆ ಆರ್ಡರ್ ನೀಡಲಾಗಿದ್ದು, ಡಿಸೆಂಬರ್ ಹೊತ್ತಿಗೆ ಈ ಬೋಗಿಗಳು ಸಿಗಲಿವೆ. ಹೊಸ ಸಬೋಗಿಗಳನ್ನು ಅಳವಡಿಸಿದ ನಂತರ ಇವುಗಳಲ್ಲಿ ಒಂದು ಬೋಗಿಯನ್ನು ಮಹಿಳೆಯರಿಗೇ ಮೀಸಲಿಡಲಾಗುತ್ತದೆ.
ಮೆಟ್ರೋ ರೈಲು ಸೇವೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ವಿಸ್ತರಿಸುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ಸಹ ಸಚಿವ ಜಾರ್ಜ್ ಇದೇ ಸಂದರ್ಭದಲ್ಲಿ ಹೇಳಿದರು.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications