ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಸೇವೆ
ಬೆಂಗಳೂರು, ಏಪ್ರಿಲ್ 25, ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ದುಬಾರಿ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಯೂನಿಟ್ ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವರು, ಇಂತಹ ಆರೋಗ್ಯ ಸೌಲಭ್ಯಗಳು ಕರ್ನಾಟಕದ ಆರೋಗ್ಯ ಕ್ಷೇತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಆರೋಗ್ಯ ಸೇವೆ ಸಾರ್ವಜನಿಕರಿಗೆ ಸಿಗುತ್ತಿದೆ. ದುಬಾರಿ ಚಿಕಿತ್ಸೆಗಳು ಸರ್ಕಾರಿ ಆರೋಗ್ಯ ಸೇವೆಗಳ ಮೂಲಕ ಬಡವರಿಗೂ ಸಿಗುವಂತಾಗಬೇಕು ಎಂದು ಹೇಳಿದರು.
ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮೊತ್ತ ಮೊದಲ ಬಾರಿಗೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಕೊರೊನಾ ನಂತರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳು ಆಗುತ್ತಿವೆ. ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ಮತ್ತು ಅಭಿವೃದ್ಧಿಯಾಗುತ್ತಿದೆ ಎಂದು ತಿಳಿಸಿದರು.

ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಅಥವಾ ಎಚ್ಬಿಓ2 ದುಬಾರಿ ಚಿಕಿತ್ಸೆಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಸೇವೆ ಲಭ್ಯವಾಗುತ್ತಿರುವುದರಿಂದ ಸಾಮಾನ್ಯ ಜನರಿಗೂ ಇದರ ಸೇವೆ ಸಿಗಲಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟನೆಯಾಗಿರುವ ಈ ಎಚ್ಬಿಓ2 ಯೂನಿಟ್ ಅನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. ಸುಮಾರು 3.5 ಕೋಟಿ ರೂಪಾಯಿ ವೆಚ್ಚದ ಆಧುನಿಕ ಯಂತ್ರೋಪಕರಣಗಳು ಇದಾಗಿದೆ ಎಂದು ವಿವರಿಸಿದರು.
ಎಚ್ಬಿಓ2 ಸುಟ್ಟಗಾಯಕ್ಕೆ ತುತ್ತಾದವರಿಗೆ, ಡಯಾಬಿಟಕ್ ರೋಗಿಗಳಿಗೆ, ವಾಸ್ಕ್ಯುಲರ್ ಸಮಸ್ಯೆ ಹೊಂದಿರುವವರಿಗೆ, ಕ್ರೀಡಾಪಟುಗಳ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳ ಚಿಕಿತ್ಸಾ ವೇಳೆಯಲ್ಲಿ ನೆರವಾಗುತ್ತದೆ. ಎಚ್ಬಿಓ2 ಚಿಕಿತ್ಸೆಯ ಅವಧಿ ಸಾಮಾನ್ಯವಾಗಿ ಒಂದೂವರೆ ಗಂಟೆಯಿಂದ 2 ಗಂಟೆಗಳ ಅವಧಿಯದ್ದಾಗಿರುತ್ತದೆ. ಕಠಿಣ ಸನ್ನಿವೇಶಗಳಲ್ಲಿ 5 ರಿಂದ 6 ಬಾರಿ ಈ ಚಿಕಿತ್ಸೆಯನ್ನು ನೀಡಬಹುದು.

ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಹೀಗಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರುವ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications