ಬೆಂಗಳೂರು ಪಾರ್ಕಿಂಗ್ ವ್ಯವಸ್ಥೆ ಸರಿಮಾಡಿ : ಲೋಕಾಯುಕ್ತ

ನಗರದ ಯಾವುದೇ ರಸ್ತೆಗಳಲ್ಲಿ ಅನಧಿಕೃತವಾಗಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಎಚ್ಚರಿಕೆ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ನಗರಾದ್ಯಂತ ಅಕ್ರಮ ಪಾರ್ಕಿಂಗ್ ಶುಲ್ಕ ವಸೂಲಿ ದಂಧೆ ನಡೆಯುತ್ತಿರುವುದರ ಬಗ್ಗೆ ಲೋಕಾಯುಕ್ತ ಕಚೇರಿಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಶುಕ್ರವಾರ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಬ್ರಿಗೇಡ್ ಮತ್ತು ಕಮರ್ಷಿಯಲ್ ರಸ್ತೆಗಳಲ್ಲಿ ಮಾತ್ರ ಅಧಿಕೃತವಾಗಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆದ್ದರಿಂದ ಈ ಎರಡು ರಸ್ತೆಗಳನ್ನು ಹೊರತುಪಡಿಸಿ ಬೇರೆ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಿದರೆ, ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಬಿಬಿಎಂಪಿ ಪ್ರತಿ ಬಡಾವಣೆಗಳಲ್ಲಿಯೂ 2 ರಿಂದ 3 ಅಂತಸ್ತಿನ ಪಾರ್ಕಿಂಗ್ ಸ್ಥಳಗಳನ್ನು ಮುಂದಿನ ಮೂರು ವರ್ಷಗಳಲ್ಲಿ ನಿರ್ಮಾಣ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಪಾರ್ಕಿಂಗ್ ಲಾಟ್ ಇರುವ ಸ್ಥಳ, ಪಾರ್ಕಿಂಗ್ ಶುಲ್ಕ ಮುಂತಾದ ಮಾಹಿತಿಗಳನ್ನು ಸ್ಥಳೀಯ ಪೊಲೀಸ್ ಠಾಣೆಗೆ ಬಿಬಿಎಂಪಿ ನೀಡಬೇಕು ಎಂದು ಲೋಕಾಯುಕ್ತರು ಆದೇಶ ನೀಡಿದ್ದಾರೆ. ಇದರಿಂದ ಪಾರ್ಕಿಂಗ್ ಹೆಸರಿನಲ್ಲಿ ಜನರಿಂದ ಹೆಚ್ಚು ಹಣ ಪಡೆಯುವುದು ತಪ್ಪಿಸಲು ಮುಂದಾಗಿದ್ದಾರೆ.
ಪಾರ್ಕಿಂಗ್ ಕುರಿತು ತೆಗೆದುಕೊಳ್ಳು ಕ್ರಮಗಳ ಕುರಿತು ಬಿಬಿಎಂಪಿ ಲೋಕಾಯುಕ್ತರಿಗೆ ಪ್ರತಿ 6 ತಿಂಗಳಿಗೊಮ್ಮೆ ವರದಿ ನೀಡುವಂತೆಯೂ ಭಾಸ್ಕರ್ ರಾವ್ ಸೂಚಿಸಿದ್ದಾರೆ. (ಪಾರ್ಕಿಂಗ್ ಶುಲ್ಕ ಜಾರಿಗೆ ಧೈರ್ಯತೋರದ ಮೇಯರ್)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications