ಉತ್ತರ-ದಕ್ಷಿಣ ಬೆಸೆಯುವ ಮೆಟ್ರೋ ಸುರಂಗ ಮಾರ್ಗದ ಟ್ರಯಲ್ ರನ್ ಶುರು!
ಬೆಂಗಳೂರು, ಮಾರ್ಚ್ 03: ಬಹುನಿರೀಕ್ಷಿತ ಬೆಂಗಳೂರು ಉತ್ತರ-ದಕ್ಷಿಣ ನಮ್ಮ ಮೆಟ್ರೋ ಸುರಂಗ ಮಾರ್ಗದ ಟ್ರಯಲ್ ರನ್ ಈ ಭಾನುವಾರ(ಮಾರ್ಚ್ 05)ದ ನಂತರ ಆರಂಭವಾಗಲಿದೆ. ಫೆಬ್ರವರಿ ಅಂತ್ಯದ ವೇಳೆಗಾಗಲೇ ಈ ಮಾರ್ಗದಲ್ಲಿ ಟ್ರಯಲ್ ರನ್ ಶುರುಮಾಡುವುದಾಗಿ ಬಿಎಂ ಆರ್ ಸಿಎಲ್ ಹೇಳಿತ್ತಾದರೂ ಕೆಲ ತಾಂತ್ರಿಕ ದೋಷದಿಂದಾಗಿ ಅದು ಸಾಧ್ಯವಾಗಿರಲಿಲ್ಲ.
ಸುರಂಗ ಮಾರ್ಗದಲ್ಲಿನ ತಾಂತ್ರಿಕ ದೋಷದಿಂದಾಗಿ ಈಗಾಗಲೇ ಈ ಭಾಗದಲ್ಲಿ ಮೆಟ್ರೋ ಸೇವೆ ವಿಳಂಬವಾಗಿದ್ದು, ಏಪ್ರಿಲ್ ಹೊತ್ತಿಗೆ ಮೆಟ್ರೋ ಓಡಾಟ ಆರಂಭವಾಗುವ ನಿರೀಕ್ಷೆ ಇದೆ. ಈ ಮೂಲಕ ನಮ್ಮ ಮೆಟ್ರೋ ಮೊದಲ ಹಂತ ಪೂರ್ಣಗೊಂಡಂತಾಗುತ್ತದೆ.[ಮೆಟ್ರೋ ಭದ್ರತಾ ಮುಖ್ಯಸ್ಥರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ?]

ಉತ್ತರ ಕಾರಿಡಾರ್ ನ ಸಂಪಿಗೆ ರಸ್ತೆಯಿಂದ ಮತ್ತು ದಕ್ಷಿಣ ಕಾರಿಡಾರ್ ನ ನ್ಯಾಶನಲ್ ಕಾಲೇಜಿನಿಂದ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸುವ ಗ್ರೀನ್ ಲೈನ್ ಸುರಂಗ ಮಾರ್ಗ ಇದಾಗಿದ್ದು, ಪರ್ಪಲ್ ಲೈನ್ ಮೆಟ್ರೋದ ಉಪಯೋಗ ಪಡೆಯುತ್ತಿರುವ ಜನರ ಮೂರು ಪಟ್ಟು ಹೆಚ್ಚು ಜನ ಗ್ರೀನ್ ಲೈನ್ ನ ಉಪಯೋಗ ಪಡೆಯಬಹುದೆಂದು ಅಂದಾಜಿಸಲಾಗಿದೆ.[ಮೆಟ್ರೋ ಪಾಲಿಟಿಕ್ಸ್: ಪಿಎಂ ಪೂಜೆ ನಡೆಸುವ ಮುನ್ನ ಕಾಂಗ್ರೆಸ್ ಪೂಜೆ]
ಕೇಂದ್ರ ರೈಲ್ವೆ ಸುರಕ್ಷತೆ ಆಯುಕ್ತರ ಬಳಿಯಿಂದ ಅನುಮತಿ ಪಡೆದ ನಂತರ ಬಿಎಂಆರ್ ಸಿಎಲ್ ಉದ್ದೇಶಿತ ನಾಗಸಂದ್ರದಿಂದ ಯಲಚೇನಹಳ್ಳಿಯವರೆಗೆ 24 ಕಿಲೋಮೀಟರ್ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ. ನ್ಯಾಷನಲ್ ಕಾಲೇಜು-ಯಲಚೇನಹಳ್ಳಿ ನಡುವಿನ 8 ಕಿಲೋಮೀಟರ್ ಸಂಚಾರಕ್ಕಾಗಿ ಪ್ರಯಾಣಿಕರು ಕಾದಿದ್ದಾರೆ. ಅದರಲ್ಲೂ ಮೆಜೆಸ್ಟಿಕ್, ಚಿಕ್ಕಪೇಟೆ ಹಾಗೂ ಕೆ.ಆರ್. ಮಾರ್ಕೆಟ್ ಸುರಂಗ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಮುಕ್ತಾಯ ಕಾಣಬೇಕಿದೆ.(ಒನ್ಇಂಡಿಯಾ ಸುದ್ದಿ)
-
Namma Metro: ಹಳದಿ ಮಾರ್ಗಕ್ಕೆ ಶೀಘ್ರವೇ ಮತ್ತೆರಡು ಹೊಸ ಮೆಟ್ರೋ ಸೇರ್ಪಡೆ: 5 ನಿಮಿಷಕ್ಕೊಮ್ಮೆ ಸಂಚಾರ -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ











Click it and Unblock the Notifications