ಉತ್ತರ-ದಕ್ಷಿಣ ಬೆಸೆಯುವ ಮೆಟ್ರೋ ಸುರಂಗ ಮಾರ್ಗದ ಟ್ರಯಲ್ ರನ್ ಶುರು!
ಬೆಂಗಳೂರು, ಮಾರ್ಚ್ 03: ಬಹುನಿರೀಕ್ಷಿತ ಬೆಂಗಳೂರು ಉತ್ತರ-ದಕ್ಷಿಣ ನಮ್ಮ ಮೆಟ್ರೋ ಸುರಂಗ ಮಾರ್ಗದ ಟ್ರಯಲ್ ರನ್ ಈ ಭಾನುವಾರ(ಮಾರ್ಚ್ 05)ದ ನಂತರ ಆರಂಭವಾಗಲಿದೆ. ಫೆಬ್ರವರಿ ಅಂತ್ಯದ ವೇಳೆಗಾಗಲೇ ಈ ಮಾರ್ಗದಲ್ಲಿ ಟ್ರಯಲ್ ರನ್ ಶುರುಮಾಡುವುದಾಗಿ ಬಿಎಂ ಆರ್ ಸಿಎಲ್ ಹೇಳಿತ್ತಾದರೂ ಕೆಲ ತಾಂತ್ರಿಕ ದೋಷದಿಂದಾಗಿ ಅದು ಸಾಧ್ಯವಾಗಿರಲಿಲ್ಲ.
ಸುರಂಗ ಮಾರ್ಗದಲ್ಲಿನ ತಾಂತ್ರಿಕ ದೋಷದಿಂದಾಗಿ ಈಗಾಗಲೇ ಈ ಭಾಗದಲ್ಲಿ ಮೆಟ್ರೋ ಸೇವೆ ವಿಳಂಬವಾಗಿದ್ದು, ಏಪ್ರಿಲ್ ಹೊತ್ತಿಗೆ ಮೆಟ್ರೋ ಓಡಾಟ ಆರಂಭವಾಗುವ ನಿರೀಕ್ಷೆ ಇದೆ. ಈ ಮೂಲಕ ನಮ್ಮ ಮೆಟ್ರೋ ಮೊದಲ ಹಂತ ಪೂರ್ಣಗೊಂಡಂತಾಗುತ್ತದೆ.[ಮೆಟ್ರೋ ಭದ್ರತಾ ಮುಖ್ಯಸ್ಥರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ?]

ಉತ್ತರ ಕಾರಿಡಾರ್ ನ ಸಂಪಿಗೆ ರಸ್ತೆಯಿಂದ ಮತ್ತು ದಕ್ಷಿಣ ಕಾರಿಡಾರ್ ನ ನ್ಯಾಶನಲ್ ಕಾಲೇಜಿನಿಂದ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸುವ ಗ್ರೀನ್ ಲೈನ್ ಸುರಂಗ ಮಾರ್ಗ ಇದಾಗಿದ್ದು, ಪರ್ಪಲ್ ಲೈನ್ ಮೆಟ್ರೋದ ಉಪಯೋಗ ಪಡೆಯುತ್ತಿರುವ ಜನರ ಮೂರು ಪಟ್ಟು ಹೆಚ್ಚು ಜನ ಗ್ರೀನ್ ಲೈನ್ ನ ಉಪಯೋಗ ಪಡೆಯಬಹುದೆಂದು ಅಂದಾಜಿಸಲಾಗಿದೆ.[ಮೆಟ್ರೋ ಪಾಲಿಟಿಕ್ಸ್: ಪಿಎಂ ಪೂಜೆ ನಡೆಸುವ ಮುನ್ನ ಕಾಂಗ್ರೆಸ್ ಪೂಜೆ]
ಕೇಂದ್ರ ರೈಲ್ವೆ ಸುರಕ್ಷತೆ ಆಯುಕ್ತರ ಬಳಿಯಿಂದ ಅನುಮತಿ ಪಡೆದ ನಂತರ ಬಿಎಂಆರ್ ಸಿಎಲ್ ಉದ್ದೇಶಿತ ನಾಗಸಂದ್ರದಿಂದ ಯಲಚೇನಹಳ್ಳಿಯವರೆಗೆ 24 ಕಿಲೋಮೀಟರ್ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ. ನ್ಯಾಷನಲ್ ಕಾಲೇಜು-ಯಲಚೇನಹಳ್ಳಿ ನಡುವಿನ 8 ಕಿಲೋಮೀಟರ್ ಸಂಚಾರಕ್ಕಾಗಿ ಪ್ರಯಾಣಿಕರು ಕಾದಿದ್ದಾರೆ. ಅದರಲ್ಲೂ ಮೆಜೆಸ್ಟಿಕ್, ಚಿಕ್ಕಪೇಟೆ ಹಾಗೂ ಕೆ.ಆರ್. ಮಾರ್ಕೆಟ್ ಸುರಂಗ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಮುಕ್ತಾಯ ಕಾಣಬೇಕಿದೆ.(ಒನ್ಇಂಡಿಯಾ ಸುದ್ದಿ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications