ದಕ್ಷಿಣ ಭಾರತದ ಮೊದಲ 'ಎಲಿವೇಟೆಡ್ ಸ್ಕೈವಾಕ್' ಜಯನಗರದಲ್ಲಿ ಉದ್ಘಾಟನೆ
ದಕ್ಷಿಣ ಭಾರತದ ಮೊತ್ತ ಮೊದಲ 'ಎಲಿವೇಟೆಡ್ ಸ್ಕೈವಾಕ್' ಜಯನಗರದ ಮೂರನೇ ಬಡಾವಣೆಯಲ್ಲಿ ಉದ್ಘಾಟನೆಯಾಗಿದೆ. ಇದರಲ್ಲಿ ಮೂರು ಲಿಫ್ಟ್ ಗಳಿವೆ.
ಬೆಂಗಳೂರು, ಜನವರಿ 31: ಜಯನಗರ ಮೂರನೇ ಬಡಾವಣೆಯಲ್ಲಿ ನಿರ್ಮಾಣವಾದ ಅತ್ಯಾಧುನಿಕ 'ದಾ.ರಾ.ಬೇಂದ್ರ ಗಗನ ಮಾರ್ಗ' ಮಂಗಳವಾರ ಉದ್ಘಾಟನೆಯಾಯಿತು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮತ್ತು ಮೇಯರ್ ಪದ್ಮಾವತಿ ಸ್ಕೈವಾಕ್ ಉದ್ಘಾಟನೆ ಮಾಡಿದರು.
ದಕ್ಷಿಣ ಭಾರತದ ಮೊದಲ 'ಎಲಿವೇಟೆಡ್ ಸ್ಕೈವಾಕ್' ಎಂಬ ಹೆಗ್ಗಳಿಕೆಗೆ ಈ ಗಗನಮಾರ್ಗ ಪಾತ್ರವಾಗಿದೆ. ಇಲ್ಲಿ ಮೂರು ಕಡೆಗಳಲ್ಲಿಯೂ ಹತ್ತಲು ಲಿಫ್ಟ್ ವ್ಯವಸ್ಥೆ ಇದೆ. ಜನರು ಮೆಟ್ಟಿಲು ಹತ್ತುವ ಬದಲು ಲಿಫ್ಟ್ ನಲ್ಲೇ ಹತ್ತಿ, ರಸ್ತೆ ದಾಟಿ ಮತ್ತೆ ಪುನಃ ಲಿಫ್ಟ್ ಮೂಲಕವೇ ಇಳಿಯಬಹುದಾಗಿದೆ.[ಈ ಟ್ರಾಫಿಕ್ ಪೊಲೀಸ್ ತೋರಿದ ಮಾನವೀಯತೆ ಎಂತದ್ದು ನೋಡಿ!]

ಬೆಂಗಳೂರಿನ ಹಲವು ಕಡೆಗಳಲ್ಲಿ ಸ್ಕೈವಾಕ್ ಗಳಿದ್ದು ಮೆಟ್ಟಿಲು ಹತ್ತಲು ಜನ ಹಿಂದೇಟು ಹಾಕುವುದರಿಂದ ಬಳಸದೇ ಹಾಗೇ ಪಾಳು ಬಿದ್ದಿವೆ. ಆದರೆ ಈ ಸ್ಕೈವಾಕ್ ನಲ್ಲಿ ಲಿಫ್ಟ್ ವ್ಯವಸ್ಥೆ ಇದ್ದು, ಹಿರಿಯರು ಮತ್ತು ವಿಶೇಷ ಚೇತನರಿಗೂ ಬಹಳ ಅನುಕೂಲವಾಗಿದೆ.
ಈ ಸ್ಕೈವಾಕ್ ನಿಂದ ಜಯನಗರದ ಜನತೆಗೆ ರಸ್ತೆ ದಾಟುವುದು ಸುಲಭವಾಗಿದ್ದು, 22ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ ಮತ್ತು ಆನೆಬಂಡೆ (ಎಲಿಫೆಂಟ್ ರಾಕ್)ರಸ್ತೆ ದಾಟಲು ಅನುಕೂಲವಾಗಲಿದೆ. ಮೂರು ರಸ್ತೆಗಳನ್ನು ದಾಟಬಹುದಾದ ಬೆಂಗಳೂರಿನ ಮೊದಲ ಸ್ಕೈವಾಕ್ ಇದಾಗಿದೆ ಎಂದು ಕಾರ್ಪೊರೇಟರ್ ಎನ್.ಆರ್.ರಮೇಶ್ ಹೇಳಿದ್ದಾರೆ.[ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆಯ ದುರಸ್ತಿ ಹೇಗೆ ನಡೆದಿದೆ?]

ಈ ಗಗನ ಮಾರ್ಗವನ್ನು ಪ್ರಕಾಶ್ ಆರ್ಟ್ಸ್ ಸಂಸ್ಥೆ ಬಿಬಿಎಂಪಿಯ ಬೂಟ್ (BOOT) ಯೋಜನೆಯಡಿಯಲ್ಲಿ ನಿರ್ಮಾಣ ಮಾಡಿದೆ. ಸ್ಕೈವಾಕ್ ನಿರ್ಮಾಣಕ್ಕೆ ಸುಮಾರು 2 ಕೋಟಿ ಖರ್ಚು ಮಾಡಲಾಗಿದ್ದು ವರಕವಿ ದಾ. ರಾ. ಬೇಂದ್ರೆಯವರ ಹೆಸರು ಇಡಲಾಗಿದೆ.
ದಾ.ರಾ ಬೇಂದ್ರೆಯವರ 121 ಜನ್ಮ ದಿನಾಚರಣೆಯಂದೇ ಗಗನಮಾರ್ಗ ಉದ್ಘಾಟನೆಯಾಗಿದ್ದು, ವರಕವಿ ಸ್ಮರಣಾರ್ಥ ಸ್ಥಳದಲ್ಲಿ ಕಂಚಿನ ಪುತ್ಥಳಿಯನ್ನೂ ಸ್ಥಾಪಿಸಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications