ದಕ್ಷಿಣ ಭಾರತದ ಮೊದಲ 'ಎಲಿವೇಟೆಡ್ ಸ್ಕೈವಾಕ್' ಜಯನಗರದಲ್ಲಿ ಉದ್ಘಾಟನೆ
ದಕ್ಷಿಣ ಭಾರತದ ಮೊತ್ತ ಮೊದಲ 'ಎಲಿವೇಟೆಡ್ ಸ್ಕೈವಾಕ್' ಜಯನಗರದ ಮೂರನೇ ಬಡಾವಣೆಯಲ್ಲಿ ಉದ್ಘಾಟನೆಯಾಗಿದೆ. ಇದರಲ್ಲಿ ಮೂರು ಲಿಫ್ಟ್ ಗಳಿವೆ.
ಬೆಂಗಳೂರು, ಜನವರಿ 31: ಜಯನಗರ ಮೂರನೇ ಬಡಾವಣೆಯಲ್ಲಿ ನಿರ್ಮಾಣವಾದ ಅತ್ಯಾಧುನಿಕ 'ದಾ.ರಾ.ಬೇಂದ್ರ ಗಗನ ಮಾರ್ಗ' ಮಂಗಳವಾರ ಉದ್ಘಾಟನೆಯಾಯಿತು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮತ್ತು ಮೇಯರ್ ಪದ್ಮಾವತಿ ಸ್ಕೈವಾಕ್ ಉದ್ಘಾಟನೆ ಮಾಡಿದರು.
ದಕ್ಷಿಣ ಭಾರತದ ಮೊದಲ 'ಎಲಿವೇಟೆಡ್ ಸ್ಕೈವಾಕ್' ಎಂಬ ಹೆಗ್ಗಳಿಕೆಗೆ ಈ ಗಗನಮಾರ್ಗ ಪಾತ್ರವಾಗಿದೆ. ಇಲ್ಲಿ ಮೂರು ಕಡೆಗಳಲ್ಲಿಯೂ ಹತ್ತಲು ಲಿಫ್ಟ್ ವ್ಯವಸ್ಥೆ ಇದೆ. ಜನರು ಮೆಟ್ಟಿಲು ಹತ್ತುವ ಬದಲು ಲಿಫ್ಟ್ ನಲ್ಲೇ ಹತ್ತಿ, ರಸ್ತೆ ದಾಟಿ ಮತ್ತೆ ಪುನಃ ಲಿಫ್ಟ್ ಮೂಲಕವೇ ಇಳಿಯಬಹುದಾಗಿದೆ.[ಈ ಟ್ರಾಫಿಕ್ ಪೊಲೀಸ್ ತೋರಿದ ಮಾನವೀಯತೆ ಎಂತದ್ದು ನೋಡಿ!]

ಬೆಂಗಳೂರಿನ ಹಲವು ಕಡೆಗಳಲ್ಲಿ ಸ್ಕೈವಾಕ್ ಗಳಿದ್ದು ಮೆಟ್ಟಿಲು ಹತ್ತಲು ಜನ ಹಿಂದೇಟು ಹಾಕುವುದರಿಂದ ಬಳಸದೇ ಹಾಗೇ ಪಾಳು ಬಿದ್ದಿವೆ. ಆದರೆ ಈ ಸ್ಕೈವಾಕ್ ನಲ್ಲಿ ಲಿಫ್ಟ್ ವ್ಯವಸ್ಥೆ ಇದ್ದು, ಹಿರಿಯರು ಮತ್ತು ವಿಶೇಷ ಚೇತನರಿಗೂ ಬಹಳ ಅನುಕೂಲವಾಗಿದೆ.
ಈ ಸ್ಕೈವಾಕ್ ನಿಂದ ಜಯನಗರದ ಜನತೆಗೆ ರಸ್ತೆ ದಾಟುವುದು ಸುಲಭವಾಗಿದ್ದು, 22ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ ಮತ್ತು ಆನೆಬಂಡೆ (ಎಲಿಫೆಂಟ್ ರಾಕ್)ರಸ್ತೆ ದಾಟಲು ಅನುಕೂಲವಾಗಲಿದೆ. ಮೂರು ರಸ್ತೆಗಳನ್ನು ದಾಟಬಹುದಾದ ಬೆಂಗಳೂರಿನ ಮೊದಲ ಸ್ಕೈವಾಕ್ ಇದಾಗಿದೆ ಎಂದು ಕಾರ್ಪೊರೇಟರ್ ಎನ್.ಆರ್.ರಮೇಶ್ ಹೇಳಿದ್ದಾರೆ.[ನ್ಯಾಷನಲ್ ಕಾಲೇಜು ಬಳಿಯ ಮೇಲ್ಸೇತುವೆಯ ದುರಸ್ತಿ ಹೇಗೆ ನಡೆದಿದೆ?]

ಈ ಗಗನ ಮಾರ್ಗವನ್ನು ಪ್ರಕಾಶ್ ಆರ್ಟ್ಸ್ ಸಂಸ್ಥೆ ಬಿಬಿಎಂಪಿಯ ಬೂಟ್ (BOOT) ಯೋಜನೆಯಡಿಯಲ್ಲಿ ನಿರ್ಮಾಣ ಮಾಡಿದೆ. ಸ್ಕೈವಾಕ್ ನಿರ್ಮಾಣಕ್ಕೆ ಸುಮಾರು 2 ಕೋಟಿ ಖರ್ಚು ಮಾಡಲಾಗಿದ್ದು ವರಕವಿ ದಾ. ರಾ. ಬೇಂದ್ರೆಯವರ ಹೆಸರು ಇಡಲಾಗಿದೆ.
ದಾ.ರಾ ಬೇಂದ್ರೆಯವರ 121 ಜನ್ಮ ದಿನಾಚರಣೆಯಂದೇ ಗಗನಮಾರ್ಗ ಉದ್ಘಾಟನೆಯಾಗಿದ್ದು, ವರಕವಿ ಸ್ಮರಣಾರ್ಥ ಸ್ಥಳದಲ್ಲಿ ಕಂಚಿನ ಪುತ್ಥಳಿಯನ್ನೂ ಸ್ಥಾಪಿಸಲಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications