ಬೆಂಗಳೂರು ನಗರದ 2 ರೈಲ್ವೆ ಯೋಜನೆಗೆ ಇಲಾಖೆಯ ಒಪ್ಪಿಗೆ
ಬೆಂಗಳೂರು, ನವೆಂಬರ್ 22 : ಬೆಂಗಳೂರು ನಗರದ ಎರಡು ರೈಲ್ವೇ ಯೋಜನೆಗಳಿಗೆ ಇಲಾಖೆ ಒಪ್ಪಿಗೆ ನೀಡಿದೆ. ಈ ಯೋಜನೆಗಳಿಂದ ಉಪ ನಗರ ರೈಲು ಸಂಪರ್ಕ ವ್ಯವಸ್ಥೆಗೆ ಮತ್ತಷ್ಟು ಬಲ ಸಿಗಲಿದೆ. ಯೋಜನೆಯ ಟೆಂಡರ್ ಪ್ರಕ್ರಿಯೆ ಸಹ ಪೂರ್ಣಗೊಂಡಿದೆ.
ನೈಋತ್ಯ ರೈಲ್ವೆಯ ಮುಖ್ಯ ಆಡಳಿತಾಧಿಕಾರಿ ಕೆ.ಸಿ.ಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಕಂಟೋನ್ಮೆಂಟ್-ವೈಟ್ಫೀಲ್ಡ್ ಮಾರ್ಗವನ್ನು 4 ಹಳಿಗಳಿಗೆ, ಯಶವಂತಪುರ-ಚನ್ನಸಂದ್ರ ಮಾರ್ಗವನ್ನು ಜೋಡಿಹಳಿಗಳನ್ನಾಗಿ ಪರಿವರ್ತಿಸುವ ಯೋಜನೆಗೆ ಒಪ್ಪಿಗೆ ಸಿಕ್ಕಿದೆ.
ಸೊಲ್ಲಾಪುರ-ಯಶವಂತಪುರ ರೈಲು ಹಾಸನದ ತನಕ ವಿಸ್ತರಣೆ
ನೈಋತ್ಯ ರೈಲ್ವೆಯು ಈ ಯೋಜನೆಗೆ ಸಂಬಂಧಿಸಿದ ಟೆಂಡರ್ ದಾಖಲಾತಿಗಳನ್ನು ಅಂತಿಮಗೊಳಿಸಿದೆ. ಯಶವಂತಪುರ-ಚನ್ನಸಂದ್ರ ಮಾರ್ಗದ ಕಾಮಗಾರಿ 2021ರಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಯೋಜನೆಯಿಂದ ಉಪನಗರ ರೈಲು ಸಂಪರ್ಕ ವ್ಯವಸ್ಥೆಗೆ ಇನ್ನಷ್ಟು ಬಲ ಸಿಗಲಿದೆ.
ದೇಶಕ್ಕೆ ಮಾದರಿಯಾದ ಧಾರವಾಡದ ಮುಗದ ರೈಲು ನಿಲ್ದಾಣ
ಈ ಯೋಜನೆ ಪೂರ್ಣಗೊಂಡ ಬಳಿಕ ಕಂಟೋನ್ಮೆಂಟ್-ವೈಟ್ಫೀಲ್ಡ್ ಮಾರ್ಗಗಳು ಸ್ವಯಂ ಚಾಲಿತ ಸಿಗ್ನಲಿಂಗ್ ವ್ಯವಸ್ಥೆಗೆ ಬದಲಾವಣೆಯಾಗಲಿವೆ. ಈ ಎರಡೂ ಯೋಜನೆ ಪೂರ್ಣಗೊಂಡ ಬಳಿಕ ನಗರದ ರೈಲು ಸಂಚಾರದಲ್ಲಿ ಹಲವು ಬದಲಾಣೆಯಾಗುವ ನಿರೀಕ್ಷೆ ಇದೆ. ಯೋಜನೆಯ ವಿವರಗಳು ಇಲ್ಲಿವೆ....
ಬೆಂಗಳೂರು-ಮೈಸೂರು ನಡುವೆ ರಾತ್ರಿ ರೈಲು ಸಂಚಾರಕ್ಕೆ ಬೇಡಿಕೆ
ಕಂಟೋನ್ಮೆಂಟ್-ವೈಟ್ಫೀಲ್ಡ್ ಮಾರ್ಗ
ಕಂಟೋನ್ಮೆಂಟ್-ವೈಟ್ಫೀಲ್ಡ್ ಮಾರ್ಗವನ್ನು 4 ಹಳಿಗಳನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಯನ್ನು 493 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತದೆ. ಈ ಯೋಜನೆ ಪೂರ್ಣಗೊಂಡ ಬಳಿಕ ಕಂಟೋನ್ಮೆಂಟ್-ವೈಟ್ಫೀಲ್ಡ್ ಮಾರ್ಗಗಳು ಸ್ವಯಂ ಚಾಲಿತ ಸಿಗ್ನಲಿಂಗ್ ವ್ಯವಸ್ಥೆಗೆ ಬದಲಾವಣೆಯಾಗಲಿವೆ. ಇದರಿಂದಾಗಿ ಕಂಟೋನ್ಮೆಂಟ್ ಮತ್ತು ಬೈಯಪ್ಪನಹಳ್ಳಿ ಪ್ರದೇಶದಲ್ಲಿ ದಟ್ಟಣೆಯ ಅವಧಿಯಲ್ಲಿ ಉಂಟಾಗುವ ಸಂಚಾರ ಸಮಸ್ಯೆಯನ್ನು ನಿಭಾಯಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ.
314 ಕೋಟಿ ವೆಚ್ಚದ ಯೋಜನೆ
314 ಕೋಟಿ ವೆಚ್ಚದಲ್ಲಿ ಯಶವಂತಪುರ-ಚನ್ನಸಂದ್ರ ಮಾರ್ಗವನ್ನು ಜೋಡಿಹಳಿಯಾಗಿ ಪರಿವರ್ತನೆ ಮಾಡಲಾಗುತ್ತದೆ. ಜೋಡಿಹಳಿ ನಿರ್ಮಿಸುವ ಕಾಮಗಾರಿಯು ಹೊಸೂರು ಮತ್ತು ಬೈಯಪ್ಪನಹಳ್ಳಿ ಮಾರ್ಗಕ್ಕೆ ಪೂರಕವಾಗಿರಲಿದೆ. ಇದರಿಂದ ವೈಟ್ಫೀಲ್ಡ್ ಮಾರ್ಗದಲ್ಲಿಯೂ ಹೆಚ್ಚಿನ ಉಪ ನಗರ ರೈಲುಗಳನ್ನು ಓಡಿಸಲು ಅನುಕೂಲವಾಗಲಿದೆ.
2021ರಲ್ಲಿ ಯೋಜನೆ ಪೂರ್ಣ
ಯಶವಂತಪುರ-ಚನ್ನಸಂದ್ರ ಮಾರ್ಗದ ಕಾಮಗಾರಿ 2021ರಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಕಂಟೋನ್ಮೆಂಟ್-ವೈಟ್ಫೀಲ್ಡ್ ಮಾರ್ಗದ ಕಾಮಗಾರಿಗೆ ಇನ್ನೂ ಗಡುವನ್ನು ನಿಗದಿ ಮಾಡಿಲ್ಲ. ಈ ಯೋಜನೆಗೆ ಹಲವು ಸವಾಲುಗಳಿದ್ದು, ಬೈಯಪ್ಪನಹಳ್ಳಿ ರೈಲ್ವೇ ಗೇಟ್ ಬಳಿ ಫ್ಲೈ ಓವರ್ ನಿರ್ಮಾಣ ಮಾಡಲು ರಕ್ಷಣಾ ಇಲಾಖೆ ಭೂಮಿಯನ್ನು ಹಸ್ತಾಂತರ ಮಾಡಬೇಕಿದೆ.
ಪ್ರಧಾನ ಕೇಂದ್ರವಾಗಿ ನಿರ್ಮಾಣ
ಕಂಟೋನ್ಮೆಂಟ್-ವೈಟ್ಫೀಲ್ಡ್ ಮಾರ್ಗದ ಕಾಮಗಾರಿಗೆ ಮೂರು ತಿಂಗಳಿನಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇಲಾಖೆಯ ಭವಿಷ್ಯದ ದೃಷ್ಟಿಯಿಂದ ಈ ಯೋಜನೆ ಕೈಗೊಂಡಿದ್ದು, ಕೋಚ್ ಟರ್ಮಿನಲ್ ಬೈಯಪ್ಪನಹಳ್ಳಿ ನಿಲ್ದಾಣವನ್ನು ಪ್ರಧಾನ ಕೇಂದ್ರವಾಗಿ ರೂಪಿಸುವ ಉದ್ದೇಶವನ್ನು ಇಲಾಖೆ ಹೊಂದಿದೆ.