ಹಲವು ರೈಲುಗಳ ಸಂಚಾರ ರದ್ದುಗೊಳಿಸಿದ ನೈಋತ್ಯ ರೈಲ್ವೆ

ಬೆಂಗಳೂರು, ಮೇ 03 : ನೈಋತ್ಯ ರೈಲ್ವೆ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. ಮೇ 4 ರಿಂದ 31ರ ತನಕ ಹಲವು ರೈಲುಗಳ ಸಂಚಾರ ರದ್ದುಗೊಂಡಿದೆ. ಕೆಲವು ರೈಲುಗಳ ಸಂಚಾರ ಭಾಗಶಃ ರದ್ದಾಗಿದೆ.

ಬೈಯಪ್ಪನಹಳ್ಳಿಯಲ್ಲಿ ಯಾರ್ಡ್ ನವೀಕರಣ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ, ನೈಋತ್ಯ ರೈಲ್ವೆಯ ಬೆಂಗಳೂರು ಡಿವಿಜನ್ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

South Western Railway cancelled various train service

ಮೇ 4 ರಿಂದ 31ರ ತನಕ ಬೆಂಗಳೂರು ಕಂಟೋನ್ಮೆಂಟ್-ವಿಜಯವಾಡ (56503/56504) ಪ್ಯಾಸೆಂಜರ್ ರೈಲು, ಬಾಣಸವಾಡಿ-ಹೊಸೂರು (06571/06572) ಪ್ಯಾಸೆಂಜರ್ ರೈಲು ಸೇವೆಯನ್ನು ರದ್ದು ಪಡಿಸಲಾಗಿದೆ.

ಭಾಗಶಃ ರದ್ದುಗೊಂಡಿರುವ ರೈಲುಗಳು : ಮೇ 4ರ ನಂತರ ಬೆಂಗಳೂರು ನಗರ -ಆರಕ್ಕೋಣಂ (56262) ಪ್ಯಾಸೆಂಜರ್ ರೈಲು ಸೇವೆಯನ್ನು ಜೋಲಾರಪಟ್ಟೈ ಹಾಗೂ ಆರಕ್ಕೋಣಂ ನಡುವೆ ಭಾಗಶಃ ರದ್ದುಪಡಿಸಲಾಗಿದೆ. ರೈಲು ಬೆಂಗಳೂರಿನಿಂದ ಜೋಲಾರಪಟ್ಟೈ ತನಕ ಮಾತ್ರ ಸಂಚಾರ ನಡೆಸಲಿದೆ.

ಮೇ 5 ರ ನಂತರ ಆರಕ್ಕೋಣಂ-ಬೆಂಗಳೂರು ನಗರ (56261) ಪ್ಯಾಸೆಂಜರ್‌ ರೈಲು ಸಂಚಾರವನ್ನು ಆರಕ್ಕೋಣಂ ಹಾಗೂ ಜೋಲಾರಪಟ್ಟೈ ಮಧ್ಯೆ ಭಾಗಶಃ ರದ್ದು ಮಾಡಲಾಗಿದೆ.

ಮೇ 8, 15, 22 ಹಾಗೂ 29ರಂದು ಸಂಬಲ್ಬುರ-ಬಾಣಸವಾಡಿ (08301) ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಕೃಷ್ಣರಾಜಪುರಂ-ಬಾಣಸವಾಡಿ ಮಧ್ಯೆ ರದ್ದು ಪಡಿಸಲಾಗಿದೆ. ಆದ್ದರಿಂದ, ರೈಲು ಕೃಷ್ಣರಾಜಪುರಂ ವರೆಗೆ ಮಾತ್ರ ಸಂಚಾರ ನಡೆಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+