ನಿರುದ್ಯೋಗ ಮುಕ್ತ ಜಯನಗರಕ್ಕೆ ಸೌಮ್ಯ ರೆಡ್ಡಿ ಸಂಕಲ್ಪ
ಬೆಂಗಳೂರು, ಏಪ್ರಿಲ್ 21: ಜಯನಗರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರು 'ನಿರುದ್ಯೋಗ ಮುಕ್ತ ಜಯನಗರ' ಎಂಬ ಅಭಿಯಾನದಡಿ ಯುವಕ ಯುವತಿಯರಿಗಾಗಿ ನೆರವು ನೀಡುತ್ತಿರುವ, ಉದ್ಯೋಗ ಯೋಜನೆ ಕುರಿತಂತೆ ಸಾಕ್ಷ್ಯಚಿತ್ರದ ಮೂಲಕ ಭರದಿಂದ ಪ್ರಚಾರ ನಡೆಸಿದ್ದಾರೆ.
ಮೂರು ನಿಮಿಷ 40 ಸೆಕೆಂಡುಗಳ ಸಾಕ್ಷ್ಯಚಿತ್ರದಲ್ಲಿ ಎಲಿವೇಟ್ ಲೈಫ್ ಎನ್ನುವ ಸಂಸ್ಥೆ ನಿರುದ್ಯೋಗಿ ಯುವಕರಿಗಾಗಿ ರೂಪಿಸಿರುವ ಹಲವಾರು ತರಬೇತಿ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಪ್ರದೇಶದಿಂದ ಬಂದು ಬೆಂಗಳೂರಲ್ಲಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿರುವ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಎಲೆವೇಟ್ ಲೈಫ್ ಸಂಸ್ಥೆ ಪ್ರಯತ್ನಿಸುತ್ತಿದೆ.
ಆ ಸಂಸ್ಥೆಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರು ನೆರವು ನೀಡಿ ಮತ್ತಷ್ಟು ವಿಸ್ತೃತವಾಗಿ ಯುವಕರಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಈ ಸಂಸ್ಥೆಯ ಮೂಲಕ ನೀಡಲಾಗುತ್ತಿದೆ. ಎಲಿವೇಟ್ ಲೈಫ್ ಎನ್ನುವ ಖಾಸಗಿ ಸಂಸ್ಥೆ ಈ ಬಾರಿ ಚುನಾವಣೆಯಲ್ಲಿ ತನ್ನ ಬೆಂಬಲವನ್ನು ಸೌಮ್ಯ ರೆಡ್ಡಿಯವರಿಗೆ ನೀಡಿದ್ದು, ಯಾವ ಕಾರಣಗಳಿಗಾಗಿ ಸೌಮ್ಯ ರೆಡ್ಡಿಯವರನ್ನು ಬೆಂಬಲಿಸುತ್ತಿದೆ ಎಂಬುದನ್ನು ಸಾಕ್ಷ್ಯಚಿತ್ರ ಬಿಂಬಿಸುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳ್ಳಿಯಿಂದ ಬಂದ ಯುವಕನೊಬ್ಬ ಬೆಂಗಳೂರಿನಲ್ಲಿ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿರುವಾಗ ಎಲಿವೇಟ್ ಲೈಫ್ ಸಂಸ್ಥೆಯ ಸಿಬ್ಬಂದಿ ಆತನನ್ನು ಕರೆತಂದು ತರಬೇತಿ ನೀಡಿ ಆತನನ್ನು ಎಂಜಿನಿಯರ್ ಆಗಿ ಪರಿವರ್ತಿಸುತ್ತಾರೆ. ಆ ಯುವಕನ ಯಶೋಗಾಥೆಯನ್ನು ಮುಂದಿಟ್ಟುಕೊಂಡು ಈ ಸಾಕ್ಷ್ಯಚಿತ್ರವನ್ನು ನಿರ್ಮಿಸಲಾಗಿದ್ದು ಸೌಮ್ಯ ರೆಡ್ಡಿಯವರನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ಜಯನಗರ ಸಂಪೂರ್ಣ ನಿರುದ್ಯೋಗಮುಕ್ತವಾಗುತ್ತದೆ ಎಂಬ ಸಂದೇಶವನ್ನು ಸಾರುತ್ತದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications