ಕಸದ ಸಮಸ್ಯೆ, ನಿರುದ್ಯೋಗಕ್ಕೆ ಪರಿಹಾರವೇ ನನ್ನ ಗುರಿ: ಸೌಮ್ಯಾ ರೆಡ್ಡಿ
Recommended Video

ಬೆಂಗಳೂರು, ಮೇ 09: ನಗರದಲ್ಲಿರುವ ಕಸದ ಸಮಸ್ಯೆ, ಟ್ರಾಫಿಕ್, ಮತ್ತು ಉದ್ಯೋಗದ ಸಮಸ್ಯೆಯನ್ನು ಸರಿಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ.ನಾನು ಇದೆಲ್ಲವನ್ನೂ ಸರಿಪಡಿಸುವ ವಿಶ್ವಾಸದಿಂದ ರಾಜಕೀಯಕ್ಕೆ ಕಾಲಿಟ್ಟಿದ್ದೇನೆ ಎಂದು ಜಯನಗರ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆ ಕುರಿತು ಒನ್ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಜಯನಗರದ ಸಮಸ್ಯೆಗಳ ಕುರಿತು ವಿವರಿಸಿದ ಅವರು, ಜಯನಗರ ಕಳೆದ 15 ವರ್ಷಗಳ ಹಿಂದೆ ಎಷ್ಟು ಹಸಿರಾಗಿತ್ತು ಆದರೆ ಕಾಲ ಕ್ರಮೇಣ ಬರಡಾಗುತ್ತಿದೆ. ಕಸದ ಸಮಸ್ಯೆ ವಿಪರೀತವಾಗಿದೆ ಹಾಗಾಗಿ ಒಣತ್ಯಾಜ್ಯ ಸಂಸ್ಕರಣ ಘಟಕವನ್ನು ಸ್ಥಾಪಿಸುವ ಅಗತ್ಯವಿದೆ ಎಂದರು.
ಸಿದ್ದರಾಮಯ್ಯ ಸರ್ಕಾರ ಜನರಿಗಾಗಿ ಒಳಿತನ್ನೇ ಮಾಡಿದೆ, ಕ್ಷೀರ ಭಾಗ್ಯ, ಅನ್ನಭಾಗ್ಯ ಹೀಗೆ ವಿಶಿಷ್ಟ ಯೋಜನೆಯನ್ನು ಹೊರತಂದಿತ್ತು. ಜನರು ಕಾಂಗ್ರೆಸ್ಗೆ ಮತ ಹಾಕುತ್ತಾರೆ ಎನ್ನುವ ನಂಬಿಕೆ ನನಗಿದೆ. ಇನ್ನು ನಿರುದ್ಯೋಗ ಸಮಸ್ಯೆಯೂ ಅತಿಯಾಗಿದೆ. ಕೌಶಲ್ಯ ಕರ್ನಾಟಕ ಯೋಜನೆ ಮೂಲಕ ಏಳೂವರೆ ಲಕ್ಷ ಮಂದಿ ತರಬೇತಿ ಪಡೆದಿದ್ದಾರೆ. ಹಾಗೆಯೇ ನಿರುದ್ಯೋಗ ಮುಕ್ತ ಜಯನಗರವನ್ನು ನಿರ್ಮಿಸಲು ಪಣತೊಟ್ಟಿದ್ದೇನೆ ಎಂದು ಹೇಳಿದರು.

ಜಯನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ, ಜತೆಗೆ ಸಾಕಷ್ಟು ಮಂದಿ ಬಾಡಿಗೆ ಮನೆಯಲ್ಲಿದ್ದಾರೆ ಅವರಿಗೆ ಮನೆಗಳನ್ನು ಕಟ್ಟಿಸಿಕೊಡುವ ಕೆಲಸ ಮಾಡಬೇಕಿದೆ. ಒಟ್ಟು 224 ಕ್ಷೇತ್ರಗಳ ಪೈಕಿ ಆರರಿಂದ ಎಂಟು ಕ್ಷೇತ್ರಗಳಲ್ಲಿ ಮಾತ್ರ ಮಹಿಳೆಯರಿದ್ದಾರೆ. ಆದರೆ ಪ್ರತಿ ಕ್ಷೇತ್ರದಲ್ಲೂ ಮಹಿಳೆಯರೇ ಮುಂದಿದ್ದಾರೆ. ಮಹಿಳೆಯರನ್ನು ಮುನ್ನೆಲೆಗೆ ತರುವ ಅಗತ್ಯವಿದೆ ಎಂದರು.
2018ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಪುತ್ರಿಯನ್ನು ಜಯನಗರದಿಂದ ಅಖಾಡಕ್ಕಿಳಿಸಲು ತಯಾರಿ ನಡೆಸಿದ್ದಾರೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆಯಾಗಿರುವ ಸೌಮ್ಯ ರೆಡ್ಡಿ ಅವರು ಈಗಾಗಲೇ ಜಯನಗರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಸಾಕಷ್ಟು ಮಾಹಿತಿಗಳನ್ನ ಸೌಮ್ಯ ರೆಡ್ಡಿಯವರು ತಮ್ಮ ಸಂದರ್ಶನದಲ್ಲಿ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications