ಸೈಕಲ್ ಪಂಕ್ಚರ್ ಮಾಡಿ 'ಕೈ' ಹಿಡಿದ ಯೋಗೀಶ್ವರ್
ಬೆಂಗಳೂರು, ಮಾ.18: ಸಮಾಜವಾದಿ ಪಕ್ಷದ ಏಕೈಕ ಶಾಸಕ ಸಿ..ಪಿ ಯೋಗೀಶ್ವರ್ ಅವರು ಮತ್ತೊಮ್ಮೆ ಪಕ್ಷಾಂತರ ಮಾಡಿದ್ದಾರೆ. ಮಂಗಳವಾರದಂದು ಕೆಪಿಸಿಸಿ ಕಚೇರಿಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಶಾಸಕ ಸಿ.ಪಿ ಯೋಗೀಶ್ವರ್ ಅವರು ಸಮಾಜವಾದಿ ಪಕ್ಷ ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವ ಡಿ.ಕೆ ಶಿವಕುಮಾರ್, ಮುಂತಾದ ನಾಯಕರು ಉಪಸ್ಥಿತರಿದ್ದರು.

ಕಳೆದ ಆಗಸ್ಟಿನಲ್ಲಿ ಚನ್ನಪಟ್ಟಣದಲ್ಲಿ ನಡೆದಿದ್ದ ಸಮಾಜವಾದಿ ಪಕ್ಷದ ಬೆಂಬಲಿಗರ ಸಭೆಯಲ್ಲಿ ದಿಢೀರನೆ ಪ್ರತ್ಯಕ್ಷರಾಗಿದ್ದ ಡಿಕೆಶಿ, ಯೋಗಿ ಕೊರಳಿಗೆ ಗಂಧದ ಹಾರ ಹಾಕಿ ತಾವಿಬ್ಬರೂ ಕೊರಳ ಗೆಳೆಯರು ಎಂದು ಘೋಷಿಸಿದ್ದರು. ಅಂದಿನಿಂದಲೂ ಇಬ್ಬರ ದೋಸ್ತಿ ಜಾರಿಯಲ್ಲಿತ್ತು. ಇದೀಗ ಲೋಕಸಭಾ ಚುನಾವಣೆ ನಿರ್ಣಾಯಕ ಹಂತದಲ್ಲಿ ಯೋಗೀಶ್ವರ್ ನಿಷ್ಠೆ ಸಂಪೂರ್ಣವಾಗಿ ತಮ್ಮ ಮಾತೃಪಕ್ಷ ಕಾಂಗ್ರೆಸ್ ಪರ ಬದಲಾಗಿದೆ. (ಕುದುರಿದ ದೋಸ್ತಿ: ಡಿಕೆಶಿ- ಯೋಗೀಶ್ವರ್ 'ಹಸ್ತ'ಲಾಘವ)
ಕಾಂಗ್ರೆಸ್ಸಿಗೆ ಮಾತ್ರ ಎಲ್ಲಾ ವರ್ಗದವರನ್ನು ಒಟ್ಟಿಗೆ ಕೊಂಡೊಯ್ಯುವ ಶಕ್ತಿ ಹೊಂದಿದೆ. ಬಿಜೆಪಿ ಕೋಮುವಾದಿ ಪಕ್ಷ, ನರೇಂದ್ರಮೋದಿ ಯಂಥವರು ಅಧಿಕಾರಕ್ಕೆ ಬಂದರೆ ಜನರು ಶಾಂತಿ ನೆಮ್ಮದಿಯಿಂದಿರಲು ಸಾಧ್ಯವೇ ಇಲ್ಲ.ಜೆಡಿಎಸ್ ಕೋಮುವಾದಿ ಪಕ್ಷವಲ್ಲದಿದ್ದರೂ ಕುಟುಂಬ ರಾಜಕಾರಣ ಅನುಸರಿಸುತ್ತದೆ. ಅವರಿಗೆ ಪಕ್ಷ ಸಿದ್ಧಾಂತವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು. [ಡಿಕೇಶಿ ಯೋಗೇಶಿ ರಾಮನಗರದಲ್ಲಿ ಡಿಶುಂಡಿಶುಂ]
ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಗೆಲ್ಲಲಿದೆ. ಹಾಸನ ಕ್ಷೇತ್ರದಲ್ಲಿ ಗೆದ್ದರೂ ಅಚ್ಚರಿಪಡಬೇಕಾಗಿಲ್ಲ. ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಹಳೆ ಮೈಸೂರು ಪ್ರಾಂತ್ಯಗಳಲ್ಲಿ ಈ ಬಾರಿ ಕಾಂಗ್ರೆಸ್ ಅಚ್ಚರಿ ಗೆಲುವು ಸಾಧಿಸಲಿದೆ. ಸಿಪಿ ಯೋಗೀಶ್ವರ್ ಸೇರ್ಪಡೆಯಿಂದ ಬೆಂಗಳೂರು ಗ್ರಾಮಾಂತರ, ಚನ್ನಪಟ್ಟಣಗಳಲ್ಲಿ ಕಾಂಗ್ರೆಸ್ ಬಲ ಇನ್ನಷ್ಟು ಹೆಚ್ಚಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications