ಕನ್ನಡ ನಿನ್ನ ಮನೇಲಿ ಮಾತನಾಡ್ಕೋ, ಇಲ್ಲೆಲ್ಲ ನಡೆಯಲ್ಲ: ಕನ್ನಡ ವಿದ್ಯಾರ್ಥಿಗೆ ಹಿಂದಿ ವಾರ್ಡನ್ ಧಮ್ಕಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಹಾಗೂ ಕನ್ನಡಿಗರಿಗೆ ದಿನೇ ದಿನೇ ಗೌರವ ತಗ್ಗುತ್ತಿದೆ. ಬೇರೆ ರಾಜ್ಯಗಳಿಂದ ಬಂದು ಬದುಕು ಕಟ್ಟಿಕೊಂಡಿರುವ ಬಹುತೇಕ ಪರಭಾಷಿಕರಿಗೆ ಈ ನೆಲದ ಬಗ್ಗೆ ಗೌರವ ಇಲ್ಲ ಎನ್ನುವುದು ಹೊಸ ವಿಚಾರವೇನಲ್ಲ. ಇದಕ್ಕೆ ಈಗಾಗಲೇ ಹಲವು ನಿದರ್ಶನಗಳೂ ಇವೆ. ಆದರೆ ಇಲ್ಲಿವರೆಗೆ ಕನ್ನಡ ಗೊತ್ತಿಲ್ಲ ಎನ್ನುತ್ತಿದ್ದವರು, ಇದೀಗ ಕನ್ನಡಿಗರಿಗೇ ಕನ್ನಡ ಮಾತನಾಡಬೇಡ, ನೀವು ಕನ್ನಡ ಮಾತನಾಡಬೇಕೋ, ಹಿಂದಿ ಮಾತನಾಡಬೇಕೋ ಎಂದು ನಾನು ನಿರ್ಧಾರ ಮಾಡ್ತೀವಿ ಎಂದು ಎಚ್ಚರಿಕೆ ಕೊಟ್ಟಿರುವ ಘಟನೆ ಬೆಂಗಳೂರಿನ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, 'ಕನ್ನಡ ನಿನ್ನ ಮನೇಲಿ ಮಾತನಾಡ್ಕೋ, ಇಲ್ಲಿ ಬೇಕಾಗಿಲ್ಲ' ಎಂದು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಾರ್ಡನ್ ಕನ್ನಡ ವಿದ್ಯಾರ್ಥಿಗೆ ಧಮ್ಕಿ ಹಾಕಿದ್ದಾನೆ. ವೈರಲ್ ಆಗಿರುವ ವಿಡಿಯೋ ಬೆಂಗಳೂರಿನ ಎಎಂಸಿ ಕಾಲೇಜಿನ ಹಾಸ್ಟೆಲ್ನದ್ದು ಎಂದು ಉಲ್ಲೇಖಿಸಲಾಗಿದೆ. ಅಲ್ಲಿರುವ ಕನ್ನಡದ ವಿದ್ಯಾರ್ಥಿಗಳು ಕನ್ನಡದಲ್ಲೇ ಮಾತನಾಡಲು ಮುಂದಾದಾಗ ವಾರ್ಡನ್ ಹಿಂದಿಯಲ್ಲೇ ಹರಿಹಾಯ್ದಿದ್ದಾನೆ.

'ಕನ್ನಡ-ಹಿಂದಿ ನಾನು ನಿರ್ಧಾರ ಮಾಡ್ತೀನಿ'
'ನಿಮ್ಮ ಮನೆಯಲ್ಲಿ ಕನ್ನಡ ಮಾತನಾಡಿಕೋ, ಇದು ಕಾಲೇಜು, ಇಲ್ಲೆಲ್ಲ ಬೇಡ ಎಂದಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಕನ್ನಡ ಮಾತನಾಡಲೇಬಾರದಾ? ಎಂದು ಕೇಳಿದ್ದಾರೆ. ಇಲ್ಲಿ ಕನ್ನಡ ಕಡ್ಡಾಯವಲ್ಲ, ಅಷ್ಟೇ. ನೀನು ಕನ್ನಡದಲ್ಲಿ ಮಾತನಾಡಬೇಕೋ, ಹಿಂದಿಯಲ್ಲಿ ಮಾತನಾಡಬೇಕೋ ಡಿಸೈಡ್ ಮಾಡುವುದು ನಾನು. ಕನ್ನಡ ಮಾತನಾಡುವುದಾದರೆ ನಿನ್ನ ಮನೆಯಲ್ಲೇ ಇರು, ಇಲ್ಲೆಲ್ಲ ನಡೆಯಲ್ಲ. ಇದು ನಿನ್ನ ಮನೆಯಲ್ಲ, ಇದು ಕಾಲೇಜು' ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಇದೇ ವಿಚಾರವಾಗಿ ವಿದ್ಯಾರ್ಥಿ ಹಾಗೂ ವಾರ್ಡನ್ ನಡುವೆ ವಾಗ್ವಾದ ನಡೆದಿದೆ. ವಾರ್ಡನ್ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಹಲವರು ಈ ವಿಡಿಯೋ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ಕನ್ನಡ ಮಾತನಾಡಬೇಕಾ, ಬೇಡವಾ? ಎಂಬುದನ್ನು ಬೇರೆಯವರು ನಿರ್ಧರಿಸುವ ದುಸ್ಥಿತಿಗೆ ನಾವೆಲ್ಲ ತಲುಪಿದ್ದೀವಾ? ಎಂದು ಕಳವಳಗೊಂಡಿದ್ದಾರೆ.
ದುರಹಂಕಾರದ ಪರಮಾವಧಿ
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) January 4, 2026
ಕನ್ನಡದ ಮೇಲೆ ಅನ್ಯಭಾಷಿಕರ ದಬ್ಬಾಳಿಕೆ
ಕಾಲೇಜಿನಲ್ಲಿ ಕನ್ನಡ ಮಾತನಾಡಬಾರದಂತೆ.
ಇವನಿಗೆ ಈ ಆದೇಶ ಮಾಡೋಕೆ ಈ ಅಧಿಕಾರ ಕೊಟ್ಟೋರು ಯಾರು.
ಕಾಲೇಜು ಕನ್ನಡ ವಿದ್ಯಾರ್ಥಿಗಳ ಮೇಲೆ ಈ ದೌರ್ಜನ್ಯ ಸಹಿಸೋಲ್ಲ.
Amc ಕಾಲೇಜು,ಬನ್ನೇರುಘಟ್ಟ ರಸ್ತೆ.
ಕಾಲೇಜುಗಳಲ್ಲಿ ಉದ್ಯೋಗ ಕನ್ನಡಿಗರಿಗೆ ಆದ್ಯತೆ ಇಲ್ಲ.
ಇವನು ಅವನ ಊರಿಗೆ ಹೋರಡಲಿ. pic.twitter.com/Qs0mhvfSle
ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. 'ಇದು ದುರಹಂಕಾರದ ಪರಮಾವಧಿ, ಕನ್ನಡದ ಮೇಲೆ ಅನ್ಯಭಾಷಿಕರ ದಬ್ಬಾಳಿಕೆ, ಕಾಲೇಜಿನಲ್ಲಿ ಕನ್ನಡ ಮಾತನಾಡಬಾರದಂತೆ. ಇವನಿಗೆ ಈ ಆದೇಶ ಮಾಡೋಕೆ ಈ ಅಧಿಕಾರ ಕೊಟ್ಟೋರು ಯಾರು? ಕಾಲೇಜು ಕನ್ನಡ ವಿದ್ಯಾರ್ಥಿಗಳ ಮೇಲೆ ಈ ದೌರ್ಜನ್ಯ ಸಹಿಸೋಲ್ಲ. ಕಾಲೇಜುಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇಲ್ಲ. ಇವನು ಅವನ ಊರಿಗೆ ಹೊರಡಲಿ' ಎಂದು ಎಚ್ಚರಿಕೆ ಕೊಟ್ಟಿದ್ದಾರೆ.ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಕನ್ನಡ ಮಾತನಾಡಬಾರದು ಅನ್ನೋ ನಾಡ ದ್ರೋಹಿಗಳಿಗೆ ಕರ್ನಾಟಕದಲ್ಲಿ ನೆಲೆ ಸಿಗಬಾರದು. ಕೂಡಲೇ ಈತನನ್ನು ವಜಾ ಮಾಡಿ, ಅವನ ಊರಿಗೆ ಕಳಿಸಬೇಕು. ರಾಜ್ಯದ ಪ್ರತಿ ಶಾಲೆ-ಕಾಲೇಜಿಗೂ ಈ ಘಟನೆ ಎಚ್ಚರಿಕೆಯಾಗಿರಲಿ ಎಂದು ಆ ಕಾಲೇಜಿನ ಆಡಳಿತ ಮಂಡಳಿಗೆ ಟ್ಯಾಗ್ ಮಾಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಕ್ಕೆ ಬೆಲೆ ಕೊಡದ ಇಂತವರನ್ನು ಗಡಿಪಾರು ಮಾಡಬೇಕು. ಇಂತವರಿಗೆ ಬುದ್ಧಿ ಕಲಿಸಲು ಸರ್ಕಾರವೇ ಒಂದು ಕಾನೂನು ತರಬೇಕು. ಇಲ್ಲದಿದ್ದರೆ ಪರಭಾಷಿಕರ ದರ್ಪಕ್ಕೆ ಕನ್ನಡ ಪದೇ ಪದೇ ಅವಮಾನಕ್ಕೆ ಒಳಗಾಗುತ್ತಲೇ ಇರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಾರ್ಡನ್ಗೆ ವಿದ್ಯಾರ್ಥಿಗಳಿಂದ ಮುತ್ತಿಗೆ
ವಿಡಿಯೋ ವೈರಲ್ ಆಗುತ್ತಿದಂತೆ ಕನ್ನಡ ಮಾತಾಡಬಾರದು ಎಂದು ಹೇಳಿದ ಎಎಂಸಿ ಕಾಲೇಜ್ ಹಾಸ್ಟಲ್ ವಾರ್ಡನ್ಗೆ ವಿದ್ಯಾರ್ಥಿಗೆ ಮುತ್ತಿಗೆ ಹಾಕಿದ್ದಾರೆ. ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಕನ್ನಡಿಗ ವಿದ್ಯಾರ್ಥಿಗಳ ಆಕ್ರೋಶದಿಂದ ವಾರ್ಡನ್ ಕಕ್ಕಾಬಿಕ್ಕಿಯಾಗಿದ್ದಾನೆ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ವಿದ್ಯಾರ್ಥಿಗಳು ಪಾಠ ಕಲಿಸಿದ್ದಾರೆ.
-
ತಾಯಿ ಮಂಗನ ಮೌನ ರೋದನೆ: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕರುಣಾಜನಕ ದೃಶ್ಯ..Video Viral -
Toxic: ಟಾಕ್ಸಿಕ್ ನೀವೆಲ್ಲ ಅಂದುಕೊಂಡಂತೆ ಗ್ಯಾಂಗ್ಸ್ಟರ್ ಸಿನಿಮಾ ಅಲ್ಲ: ಕೊನೆಗೂ ಸೀಕ್ರೇಟ್ ರಿವೀಲ್ ಮಾಡಿದ ನಟ ಯಶ್ -
Pizza 4P's ಬೆಂಗಳೂರಲ್ಲಿ ಶಾಂತಿಗಾಗಿ ಪಿಜ್ಜಾ ಎಂದಾಯ್ತು: ಜಪಾನ್ ಪಿಜ್ಜಾ ಸಂಸ್ಥೆ ಹೇಳಿದ್ದೇನು - ಕನ್ನಡಿಗರು ಏನಂದ್ರು -
Virat Kohli: ವಿರಾಟ್ ಕೊಹ್ಲಿಗೆ ಕನ್ನಡ ಬರಲ್ಲ - ನಾರ್ಥಿಗಳು ಯಾಕೆ ಕಲಿಯಬೇಕು: ತುಳು ಬೆಂಬಲಿತರ ಪ್ರಶ್ನೆ, ಕನ್ನಡಿಗರ ಆಕ್ರೋಶ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
ಆಶಾ ಭೋಸ್ಲೆ ಮೊಮ್ಮಗಳು ಜನೈಗೆ ಸಾಂತ್ವನ ಹೇಳಿದ ಕ್ರಿಕೆಟಿಗ ಮೊಹಮ್ಮದ್ ಸಿರಾಜ್; ವಿಡಿಯೋ ವೈರಲ್ -
Yuzvendra Chahal: ಯುಜ್ವೇಂದ್ರ ಚಹಾಲ್ 'ಕ್ಯೂಟ್' ಕಾಮೆಂಟ್, ತಾನಿಯಾ ಚಟರ್ಜಿ ವಿಡಿಯೋ ವೈರಲ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು











Click it and Unblock the Notifications