ವಿಧಾನಸೌಧದಲ್ಲಿಯೇ ಮಳೆಗಾಲದ ಅಧಿವೇಶನ: ಮಾಧುಸ್ವಾಮಿ
ಬೆಂಗಳೂರು, ಆ. 24: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಧಾನ ಮಂಡಳ ಅಧಿವೇಶನ ಎಲ್ಲಿ ನಡೆಸಬೇಕು ಎಂಬ ಗೊಂದಲಕ್ಕೆ ತೆರೆಬಿದ್ದಿದೆ. ವಿಧಾನಸೌಧದಲ್ಲೇ ಮಳೆಗಾಲದ ಅಧಿವೇಶನ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಕೆ.ಎಂ. ವಿಶಾಲಕ್ಷಿ ಸದನವನ್ನು ವೀಕ್ಷಣೆ ಮಾಡಿದ್ದಾರೆ. ಜೊತೆಗೆ ವಿಧಾನಸೌಧದಲ್ಲೇ ಸದನ ನಡೆಸಲು ಸ್ಪೀಕರ್ ತೀರ್ಮಾನ ಮಾಡಿದ್ದಾರೆ ಎಂದರು.
Recommended Video
ಸ್ಪೀಕರ್ ಕಾಗೇರಿ ಅವರ ತೀರ್ಮಾನಕ್ಕೆ ನಾವು ಸಮ್ಮತಿ ನೀಡಿದ್ದೇವೆ. ವಿಧಾನಸಭೆ ಕಲಾಪ ನಡೆಯುವ ಸಭಾಂಗಣದಲ್ಲಿ ಸದಸ್ಯರು ಕೂಡುವ ಎರಡು ಆಸನಗಳ ಮಧ್ಯೆ ಗಾಜಿನ ಪರದೆ ಹಾಕಲಾಗುತ್ತದೆ. ಈ ಬಾರಿ ಅಧಿವೇಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಅಧಿವೇಶನ ಪ್ರವೇಶಕ್ಕೆ ಸಾರ್ವಜನಿಕರಿಗೆ ಪಾಸ್ ನೀಡುವುದಿಲ್ಲ. ಪತ್ರಕರ್ತರಿಗೂ ಎರಡು ಗ್ಯಾಲರಿ ಮಾಡಲು ತೀರ್ಮಾನ ಮಾಡಲಾಗಿದೆ.

ಎಲ್ಲ ಸದಸ್ಯರಿಗೆ ಫೇಸ್ ಶೀಲ್ಡ್, ಮಾಸ್ಕ್ ಕೊಡಲಾಗುವುದು. ಉನ್ನತ ಅಧಿಕಾರಿಗಳಿಗೆ, ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಪ್ರವೇಶ ಕೊಡಲಾಗುವುದು. ಒಂದು ಇಲಾಖೆಗೆ ಒಬ್ಬ ಅಧಿಕಾರಿ ಮಾತ್ರ ಬರಬೇಕು. ಸಚಿವರ ಜೊತೆ ಅವರ ಆಪ್ತ ಕಾರ್ಯದರ್ಶಿಗೆ ಮಾತ್ರ ಅವಕಾಶ. 70 ವರ್ಷ ಮೇಲ್ಪಟ್ಟ ಸದಸ್ಯರಿಗೆ ವಿನಾಯಿತಿ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications