ವಿಧಾನಸೌಧದಲ್ಲಿಯೇ ಮಳೆಗಾಲದ ಅಧಿವೇಶನ: ಮಾಧುಸ್ವಾಮಿ
ಬೆಂಗಳೂರು, ಆ. 24: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಧಾನ ಮಂಡಳ ಅಧಿವೇಶನ ಎಲ್ಲಿ ನಡೆಸಬೇಕು ಎಂಬ ಗೊಂದಲಕ್ಕೆ ತೆರೆಬಿದ್ದಿದೆ. ವಿಧಾನಸೌಧದಲ್ಲೇ ಮಳೆಗಾಲದ ಅಧಿವೇಶನ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಕೆ.ಎಂ. ವಿಶಾಲಕ್ಷಿ ಸದನವನ್ನು ವೀಕ್ಷಣೆ ಮಾಡಿದ್ದಾರೆ. ಜೊತೆಗೆ ವಿಧಾನಸೌಧದಲ್ಲೇ ಸದನ ನಡೆಸಲು ಸ್ಪೀಕರ್ ತೀರ್ಮಾನ ಮಾಡಿದ್ದಾರೆ ಎಂದರು.
Recommended Video
ಸ್ಪೀಕರ್ ಕಾಗೇರಿ ಅವರ ತೀರ್ಮಾನಕ್ಕೆ ನಾವು ಸಮ್ಮತಿ ನೀಡಿದ್ದೇವೆ. ವಿಧಾನಸಭೆ ಕಲಾಪ ನಡೆಯುವ ಸಭಾಂಗಣದಲ್ಲಿ ಸದಸ್ಯರು ಕೂಡುವ ಎರಡು ಆಸನಗಳ ಮಧ್ಯೆ ಗಾಜಿನ ಪರದೆ ಹಾಕಲಾಗುತ್ತದೆ. ಈ ಬಾರಿ ಅಧಿವೇಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಅಧಿವೇಶನ ಪ್ರವೇಶಕ್ಕೆ ಸಾರ್ವಜನಿಕರಿಗೆ ಪಾಸ್ ನೀಡುವುದಿಲ್ಲ. ಪತ್ರಕರ್ತರಿಗೂ ಎರಡು ಗ್ಯಾಲರಿ ಮಾಡಲು ತೀರ್ಮಾನ ಮಾಡಲಾಗಿದೆ.

ಎಲ್ಲ ಸದಸ್ಯರಿಗೆ ಫೇಸ್ ಶೀಲ್ಡ್, ಮಾಸ್ಕ್ ಕೊಡಲಾಗುವುದು. ಉನ್ನತ ಅಧಿಕಾರಿಗಳಿಗೆ, ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಪ್ರವೇಶ ಕೊಡಲಾಗುವುದು. ಒಂದು ಇಲಾಖೆಗೆ ಒಬ್ಬ ಅಧಿಕಾರಿ ಮಾತ್ರ ಬರಬೇಕು. ಸಚಿವರ ಜೊತೆ ಅವರ ಆಪ್ತ ಕಾರ್ಯದರ್ಶಿಗೆ ಮಾತ್ರ ಅವಕಾಶ. 70 ವರ್ಷ ಮೇಲ್ಪಟ್ಟ ಸದಸ್ಯರಿಗೆ ವಿನಾಯಿತಿ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications