Get Updates
Get notified of breaking news, exclusive insights, and must-see stories!

ವಿಧಾನಸೌಧದಲ್ಲಿಯೇ ಮಳೆಗಾಲದ ಅಧಿವೇಶನ: ಮಾಧುಸ್ವಾಮಿ

ಬೆಂಗಳೂರು, ಆ. 24: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಧಾನ ಮಂಡಳ ಅಧಿವೇಶನ ಎಲ್ಲಿ ನಡೆಸಬೇಕು ಎಂಬ ಗೊಂದಲಕ್ಕೆ ತೆರೆಬಿದ್ದಿದೆ. ವಿಧಾನಸೌಧದಲ್ಲೇ ಮಳೆಗಾಲದ ಅಧಿವೇಶನ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಕೆ.ಎಂ. ವಿಶಾಲಕ್ಷಿ ಸದನವನ್ನು ವೀಕ್ಷಣೆ ಮಾಡಿದ್ದಾರೆ. ಜೊತೆಗೆ ವಿಧಾನಸೌಧದಲ್ಲೇ ಸದನ ನಡೆಸಲು ಸ್ಪೀಕರ್ ತೀರ್ಮಾನ ಮಾಡಿದ್ದಾರೆ ಎಂದರು.

Recommended Video

      Unlock 4.0 : ಚಿತ್ರಮಂದಿರ , ಮೆಟ್ರೋ , ಶಾಲಾ ಕಾಲೇಜು ಸೆಪ್ಟೆಂಬರ್‌ನಿಂದ ಪುನರಾರಂಭ ಸಾಧ್ಯತೆ | Oneindia Kannada

      ಸ್ಪೀಕರ್ ಕಾಗೇರಿ ಅವರ ತೀರ್ಮಾನಕ್ಕೆ ನಾವು ಸಮ್ಮತಿ ನೀಡಿದ್ದೇವೆ. ವಿಧಾನಸಭೆ ಕಲಾಪ ನಡೆಯುವ ಸಭಾಂಗಣದಲ್ಲಿ ಸದಸ್ಯರು ಕೂಡುವ ಎರಡು ಆಸನಗಳ ಮಧ್ಯೆ ಗಾಜಿನ ಪರದೆ ಹಾಕಲಾಗುತ್ತದೆ. ಈ ಬಾರಿ ಅಧಿವೇಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಅಧಿವೇಶನ ಪ್ರವೇಶಕ್ಕೆ ಸಾರ್ವಜನಿಕರಿಗೆ ಪಾಸ್ ನೀಡುವುದಿಲ್ಲ. ಪತ್ರಕರ್ತರಿಗೂ ಎರಡು ಗ್ಯಾಲರಿ ಮಾಡಲು ತೀರ್ಮಾನ ಮಾಡಲಾಗಿದೆ.

      Speaker Kageri has decided to conduct the assembly in the vidhanasoudha

      ಎಲ್ಲ ಸದಸ್ಯರಿಗೆ ಫೇಸ್ ಶೀಲ್ಡ್, ಮಾಸ್ಕ್ ಕೊಡಲಾಗುವುದು. ಉನ್ನತ ಅಧಿಕಾರಿಗಳಿಗೆ, ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಪ್ರವೇಶ ಕೊಡಲಾಗುವುದು. ಒಂದು ಇಲಾಖೆಗೆ ಒಬ್ಬ ಅಧಿಕಾರಿ ಮಾತ್ರ ಬರಬೇಕು. ಸಚಿವರ ಜೊತೆ ಅವರ ಆಪ್ತ ಕಾರ್ಯದರ್ಶಿಗೆ ಮಾತ್ರ ಅವಕಾಶ. 70 ವರ್ಷ ಮೇಲ್ಪಟ್ಟ ಸದಸ್ಯರಿಗೆ ವಿನಾಯಿತಿ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+