ಸಿದ್ದರಾಮಯ್ಯಗೆ ಕಾರು, ಸಿಬ್ಬಂದಿ ನೀಡದಿರಲು ಈ ಹೇಳಿಕೆಯೇ ಕಾರಣವಾಯ್ತಾ?
Recommended Video
ಬೆಂಗಳೂರು, ನವೆಂಬರ್ 14: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾರು ಹಾಗೂ ಸಿಬ್ಬಂದಿಯನ್ನು ನೀಡಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿ ತಿಂಗಳಾಗುತ್ತಾ ಬಂದರೂ ಅವರಿಗೆ ನೀಡಬೇಕಿದ್ದ ಕಾರು ಹಾಗೂ ಸಿಬ್ಬಂದಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿವೆ.

ಕಾನೂನುಬದ್ಧವಾಗಿ ಕೆಲವು ಸೌಲಭ್ಯ ನೀಡಲೇಬೇಕು
ಸ್ಪೀಕರ್ ಅವರು ಸಿದ್ದರಾಮಯ್ಯ ಅವರಿಗೆ ಕಾನೂನು ಬದ್ಧವಾಗಿ ದೊರೆಯಬೇಕಾದ ಸೌಲಭ್ಯ ಮಂಜೂರು ಮಾಡುವುದನ್ನು ನಿಧಾನಗೊಳಿಸುತ್ತಿರುವುದಾದರೂ ಏಕೆ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಆಪ್ತರಿಂದ ಕುತೂಹಲಕಾರಿ ವಿವರಣೆ ದೊರೆಯುತ್ತಿದೆ.

ಸ್ಪೀಕರ್ಗೆ ಏನೂ ಗೊತ್ತಾಗುವುದಿಲ್ಲ ಎಂದಿದ್ದ ಸಿದ್ದರಾಮಯ್ಯ
ಈ ಹಿಂದೆ ಸಿದ್ದರಾಮಯ್ಯ ಸ್ಪೀಕರ್ ಅವರನ್ನು ಟೀಕೆ ಮಾಡುವ ಸಂದರ್ಭದಲ್ಲಿ ಕಾಗೇರಿಗೆ ಏನೂ ಗೊತ್ತಾಗುವುದಿಲ್ಲ ಎಂದು ವ್ಯಾಖ್ಯಾನಿಸಲಾಗಿತ್ತು. ಇದನ್ನು ಮರೆಯದ ಕಾಗೇರಿ , ಪ್ರತಿಪಕ್ಷ ನಾಯಕರಿಗೆ ಸೌಲಭ್ಯ ಒದಗಿಸುವುದಕ್ಕೆ ಸಂಬಂಧಿಸಿದ ಕಡತ ಏನಾಯಿತು ಎಂದು ಸಿದ್ದರಾಮಯ್ಯ ಕಚೇರಿಯ ಸಿಬ್ಬಂದಿ ಕೇಳಿದರೆ ಕಡತದ ಬಗ್ಗೆ ಏನು ಮಾಡಬೇಕು ಎಂದು ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ಹುದ್ದೆಗೆ ಸಮಾನಾದ ಹುದ್ದೆ ಪ್ರತಿಪಕ್ಷ ಸ್ಥಾನ
ಮುಖ್ಯಮಂತ್ರಿ ಹುದ್ದೆಗೆ ಸಮಾನಾಂತರ ಹುದ್ದೆಯಾದ ಪ್ರತಿಪಕ್ಷ ನಾಯಕರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ಲಭ್ಯವಿದೆ. ಸರ್ಕಾರಿ ಬಂಗಲೆ ಮಾತ್ರವಲ್ಲದೆ ಕಾರು, ಇಬ್ಬರು ಕಾರು ಚಾಲಕರು , ಇಬ್ಬರು ಆಪ್ತ ಸಹಾಯಕರು ನಾಲ್ಕು ಸಹಾಯಕ ಸಿಬ್ಬಂದಿ ಒದಗಿಸಬೇಕು.

ಪ್ರತಿಪಕ್ಷ ನಾಯಕರಾದ ಕೂಡಲೇ ಮನವಿ ಸಲ್ಲಿಕೆಯಾಗಿತ್ತು
ಈ ಕುರಿತು ಮನವಿಯನ್ನು ಸಿದ್ದರಾಮಯ್ಯ ಅವರು ಪ್ರತಿಪಕ್ಷ ನಾಯಕರಾದ ಕೂಡಲೇ ಸ್ಪೀಕರ್ ಕಚೇರಿಗೆ ಸಲ್ಲಿಸಲಾಗಿತ್ತು. ಆದರೆ ಈ ಕಡತಕ್ಕೆ ಮಂಜೂರಾತಿ ನೀಡುವ ಮನಸ್ಸನ್ನು ಸ್ಪೀಕರ್ ಕಾಗೇರಿ ಮಾಡುತ್ತಿಲ್ಲ ಎನ್ನಲಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಅವರ ಆಪ್ತ ಸಿಬ್ಬಂದಿ ಸ್ಪೀಕರ್ ಅವರನ್ನು ಪ್ರಶ್ನಿಸಿದರೆ , ಕಡತದ ಬಗ್ಗೆ ಏನು ಮಾಡಬೇಕು ಎಂಬುದೇ ನನಗೆ ಗೊತ್ತಾಗುತ್ತಿಲ್ಲ ಎಂದಷ್ಟೇ ಹೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications