ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜೀನಾಮೆ
Recommended Video
ಬೆಂಗಳೂರು, ಜುಲೈ 29: ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಕೆಆರ್ ರಮೇಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.
ಇಂದು ನಡೆದ ವಿಧಾನಸಭಾ ಕಲಾಪದಲ್ಲಿ ಬಿಎಸ್ವೈ ವಿಶ್ವಾಸಮತ ಹಾಗೂ ಹಣಕಾಸು ವಿಧೇಯಕ, ಪೂರಕ ಬಿಜೆಟ್ ಅಂಗೀಕಾರ ಮಾಡಿದ ಬಳಿಕ ವಿಧಾಯದ ಭಾಷಣ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
14 ತಿಂಗಳ ಕಾಲ ಸರ್ವಾನುಮತದಿಂದ ಆಯ್ಕ ಯಾಗಿ ಪ್ರಾಮಾಣಿಕತೆ ಯಿಂದ ಕೆಲಸ ಮಾಡಿದ್ದೇನೆ, ಜವಾಬ್ದಾರಿ ಯಿಂದ ಕರ್ತವ್ಯ ನಿರ್ವಹಿಸಿದ್ದೇನೆ.

ಸೋನಿಯಾಗಾಂಧಿ..ರಾಹುಲ್ ಗಾಂಧಿ ಸೂಚನೆಯಂತೆ ಸ್ಪೀಕರ್ ಸ್ಥಾನ ಅಲಂಕರಿಸಿದ್ದೆ, ಇಡೀ ಸದನ ಸರ್ವಾನುಮತದಿಂದ ಆರಿಸಿತ್ತು. 14 ತಿಂಗಳಲ್ಲಿ ಸಿಬ್ಬಂದಿ.. ಅಧಿಕಾರಿಗಳು ಸಹಕರಿಸಿದ್ದಾರೆ, ಕೋಪದಿಂದ ಮಾತನಾಡಿದ್ರೆ ತಪ್ಪು ತಿಳಿಯಬೇಡಿ ಎಂದು ಭಾವುಕ ನುಡಿಗಳನ್ನಾಡಿದರು.
ಈ ದೇಶದ ಭ್ರಷ್ಟಾಚಾರದ ಮೂಲ ಚುನಾವಣೆ ವ್ಯವಸ್ಥೆ, ಅದನ್ನು ಸರಿ ಮಾಡದೆ ಭ್ರಷ್ಟಾಚಾರದ ಮಾತನಾಡಿದರೆ ಅದು ಕಾಟಾಚಾರವಾಗುತ್ತದೆ, ಬದ್ಧತೆಯ ಮಾತು ಆಗುವುದಿಲ್ಲ, ಶ್ರೀಸಾಮಾನ್ಯ ಚುನಾವಣೆಯಲ್ಲಿ ಭಾಗವಹಿಸುವಂತಾಗಬೇಕು ಅದಕ್ಕಾಗಿ ಎಲೆಕ್ಟ್ರೋರಲ್ ರಿಫಾರ್ಮ್ಸ್ ಆಗಬೇಕು ಎಂದು ಕಿವಿಮಾತು ಹೇಳಿದರು.
ಈಗ ನನ್ನ ಬಳಿ 380 ಕೋಟಿ ರೂ ಆಸ್ತಿ ಇದೆ ಎಂದರೆ ಅದು ಹೇಗೆ ಬಂತು ಎಂದು ಪ್ರಶ್ನೆ ಮಾಡಬೇಕು, ಮುಂದಿನ ವರ್ಷ ಅದು 900 ಕೋಟಿಗೂ ಅಧಿಕ ತಲುಪಬಹುದು, ಓ ಅವರ ಆಸ್ತಿ ಅಷ್ಟಿದೆಯೇ ಎಂದು ಕೇಳುವ ಬದಲು ತನಿಖೆ ನಡೆಸಬೇಕು. ಯಾರ ಬಳಿ ಎಷ್ಟು ಆಸ್ತಿ ಇದೆ ಎನ್ನುವ ತಣಿಕೆ ತಕ್ಷಣವೇ ನಡೆಸಬೇಕು. ಕೆಲಸಕ್ಕೆ ಬಾರದಂತಹ ಪ್ರಾವಿಡೆಂಟ್ಸ್ ಇಡಬಾರದು, ತಕ್ಷಣ ತನಿಖೆ ನಡೆಸಬೇಕು. ಸಾರ್ವಜನಿಕರಿಗೆ ನೆಮ್ಮದಿ ಸಿಗುತ್ತದೆ ಎಂದು ಅವರು ಹೇಳಿದರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಅಂದಿನ ವಿಪಕ್ಷಗಳು, ಎಲ್ಲರಿಗೂ ಧನ್ಯವಾದ ಅರ್ಪಿಸಿದರು.ಪಕ್ಷಗಳು ವೈಯಕ್ತಿಕ, ಕೌಟುಂಬಿಕ ಒಡೆತನಕ್ಕೆ ಬಿದ್ದು ಪಕ್ಷಗಳ ಸಾಂಸ್ಥಿಕತೆಗೆ ಧಕ್ಕೆ ತರುವಂತಹ ಕೆಲಸ ಮಾಡಬಾರದು, 10 ನೇ ಪರಿಚ್ಛೇದವನ್ನು ರೀ ಲುಕ್ ಮಾಡುವ ಕುರಿತು ನಾವು ಒತ್ತಡ ಹೇರಬೇಕಿದೆ ಎಂದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಸೋಮವಾರದ ಸದನದಲ್ಲಿ ನಿಮಗೆ ಅಚ್ಚರಿ ಕಾದಿದೆ , ಏನೋ ಹೇಳಬೇಕು ಎಂದುಕೊಂಡಿದ್ದೇನೆ ಎಂಬುದನ್ನು ಸದನದಲ್ಲೇ ಹೇಳುತ್ತೇನೆ, ನನ್ನ ನಾಲ್ಕು ದಶಕದ ರಾಜಕೀಯ ಜೀವನದ ಅಂತಿಮ ಘಟ್ಟಕ್ಕೆ ಬಂದಿದ್ದೇನೆ ಸದನವನ್ನು ಯಾರೂ ತಪ್ಪಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.
ಕಳೆದ ಗುರುವಾರದ ಸುದ್ದಿಗೋಷ್ಠಿಯಲ್ಲೂ ಸ್ಪೀಕರ್ ಸ್ಥಾನದಿಂದ ನಿರ್ಗಮಿಸುವ ಬಗ್ಗೆ ಪರೋಕ್ಷವಾಗಿ ಮುನ್ಸೂಚನೆ ನೀಡಿದ್ದ ಅವರು , ಹೊಸ ಸರ್ಕಾರ ರಚನೆಯಾದ ಬಳಿಕವೂ ನನ್ನ ಮೇಲೆ ಅವರಿಗೆ ವಿಶ್ವಾಸ ಇಲ್ಲದಿದ್ದರೆ ಸ್ಪೀಕರ್ ಬದಲಾವಣೆಗೆ ಅವಿಶ್ವಾಸಕ್ಕೆ ಅವಕಾಶ ಮಾಡಿಕೊಡಬೇಕಾಗುತ್ತದೆ. ಆದರೆ ಗೌರವದಿಂದ ಬದುಕುವ ನಾನು ಅಲ್ಲಿಯವರೆಗೂ ಕಾಯುವುದಿಲ್ಲ ಎಂದು ಹೇಳಿಕೆ ನೀಡಿದ್ದರು ಈಗ ಅವರ ರಾಜೀನಾಮೆ ಊಹಾಪೋಹಕ್ಕೆ ತೆರೆ ಬಿದ್ದಂತಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications