ಕೊನೆಗೂ ವಿಶ್ವಾಸಮತಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಯಾರಾದರೇ?
Recommended Video
ಬೆಂಗಳೂರು, ಜುಲೈ 22: ಇಂದು ವಿಶ್ವಾಸ ಮತ ಯಾಚನೆ ಆಗುತ್ತೋ ಇಲ್ಲವೋ ಎಂಬ ಗೊಂದಲಕ್ಕೆ ಸ್ಪೀಕರ್ ರಮೇಶ್ ಕುಮಾರ್ ತೆರೆ ಎಳೆದಿದ್ದಾರೆ.
ಸೋಮವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಏನೇ ಆಗಲಿವಿಶ್ವಾಸಮತಕ್ಕೆ ತೆರೆ ಎಳೆಯುವುದಾಗಿ ತಿಳಿಸಿದ್ದಾರೆ. ಇಂದೇ ವಿಶ್ವಾಸಮತ ಸಾಬೀತು ಪಕ್ಕಾ ಎಂದಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪೀನಲ್ಲಿ ಅತೃಪ್ತ ಶಾಸಕರು ಯಾರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಅವರನ್ನು ಸದನಕ್ಕೆ ಬರುವಂತೆ ಒತ್ತಾಯ ಮಾಡುವಂತಿಲ್ಲ ಎಂದಿದ್ದಾರೆ. ಆದರೆ ಇನ್ನೊಂದೆಡೆ ಕಲಾಪಕ್ಕೆ ಶಾಸಕರನ್ನು ಬರುವಂತೆ ತಿಳಿಸಬೇಕು ಎನ್ನುವ ಒತ್ತಡವೂ ನನ್ನ ಮೇಲಿದೆ.

ಆದರೆ ಯಾರಿಗೂ ಅರ್ಜೆಂಟ್ ಇದೆ ಎಂದು ಕಾನೂನಿನ ವಿರುದ್ಧವಾಗಿ ಹೋಗಲು ಸಾಧ್ಯವಿಲ್ಲ. ಗುರುವಾರ ಸದನ ನಡೆದಿದೆ, ಎರಡು ದಿನ ಕಾಲಾವಕಾಶ ಪಡೆದಿದ್ದೆ. ಇಂದು ಎಲ್ಲಾ ಅನುಮಾನಗಳೂ ಅಂತ್ಯ ಕಾಣಲಿದೆ.
ಗುರುವಾರ ಪೂರ್ತಿಯಾಗಿ ಪಾಯಿಂಟ್ ಆಫ್ ಆರ್ಡರ್ ಚರ್ಚೆಯಲ್ಲೇ ಕಳೆದು ಹೋಯಿತು. ಹಾಗಾಗಿ ಅಡ್ವೊಕೇಟ್ ಜನರಲ್ ಬಳಿ ಮಾತನಾಡಿ ನಿರ್ಧಾರಕ್ಕೆ ಬಂದಿದ್ದೇನೆ.
ಇಂದು ಕಲಾಪದಲ್ಲಿ ಎಲ್ಲವೂ ಪ್ರಸ್ತಾಪಿಸಲಾಗುತ್ತದೆ ಎಂದರು.ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವುದಾಗಿ ಘೋಷಿಸಿದ ದಿನದಿಂದಲೂ ಒಂದು ಕಡೆ ಕುಮಾರಸ್ವಾಮಿ ಇನ್ನೊಂದು ಕಡೆ ಬಿಎಸ್ ಯಡಿಯೂರಪ್ಪ ಟೆಂಪಲ್ ರನ್ ಮಾಡುತ್ತಲೇ ಇದ್ದಾರೆ.
ಇಂದು ಕೂಡ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿ ಬಸವನಗುಡಿಯಲ್ಲಿರುವ ವ್ಯಾಸರಾಜರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರೆ, ಇನ್ನೊಂದೆಡೆ ಬಿಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿ ಬಳಿಕ ಯಲಹಂಕದ ಅಭಯ ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಬಿಜೆಪಿ ಸರ್ಕಾರ ಅಂದುಕೊಂಡಂತೆ ಅಥವಾ ಸಮ್ಮಿಶ್ರ ಸರ್ಕಾರ ಅಂದುಕೊಂಡಂತೆಯೇ ನಡೆಯುತ್ತದೆ ಎನ್ನುವ ಹಾಗಿಲ್ಲ, ಶಾಸಕರನ್ನು ಹಿಡಿದಿಟ್ಟುಕೊಂಡಿದ್ದೇವೆ ಎನ್ನುವ ಖುಷಿಯಲ್ಲಿ ಬಿಜೆಪಿಯವರಿದ್ದರೆ, ಶಾಸಕರನ್ನು ಸದನಕ್ಕೆ ಕರೆದುಕೊಂಡು ಬಂದೇ ಬರುತ್ತೇವೆ ಎನ್ನುವ ವಿಶ್ವಾಸದಲ್ಲಿ ಮೈತ್ರಿ ಸರ್ಕಾರ ಕೂಡ ಇದೆ.
ಸಧ್ಯಕ್ಕೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಗೈರಾಗುವ ಸಾಧ್ಯತೆ ಇದೆ.
ಇನ್ನು ಶಾಸಕ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿದ್ದು, ಮತ್ತೆ ಮೈತ್ರಿ ಪರ ನಿಂತಿದ್ದಾರೆ. ಇನ್ನೇನು ಯಾರ್ಯಾರ ಉಪಾಯ ತಲೆಕೆಳಗಾಗುವುದು ಎಂದು ಕಾದು ನೋಡಬೇಕಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications