SWR: ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ವಿಶೇಷ ರೈಲುಗಳ ಸಂಚಾರ: ನಿಲುಗಡೆ, ವೇಳಾಪಟ್ಟಿ
ಬೆಂಗಳೂರು, ಅಕ್ಟೋಬರ್ 13: ಮುಂದಿನ ವಾರವೇ ದೀಪಾವಳಿ ಹಬ್ಬದ ಆಚರಣೆ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಊರುಗಳಿಗೆ ತೆರಳುವ ಜನರ ಸಂಖ್ಯೆ ಹೆಚ್ಚಿರುತ್ತದೆ. ಈ ಹಬ್ಬದ ಜನ ದಟ್ಟಣೆ ನಿವಾರಣೆಗೆ ಹಾಗೈ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ (SWR) ಯು ರಾಜಧಾನಿ ಬೆಂಗಳೂರಿನಿಂದ ಕೊಲ್ಲಂ ಹಾಗೂ ಕೊಳ್ಳಂನಿಂದ ಬೆಂಗಳೂರಿಗೆ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸುತ್ತಿದೆ. ಈ ರೈಲಿನ ನಿಲುಗಡೆ, ಸಮಯ, ವೇಳಾಪಟ್ಟಿ ವಿವರ ಇಲ್ಲಿದೆ.
ಎಸ್ಎಂವಿಟಿ ಬೆಂಗಳೂರು - ಕೊಲ್ಲಂ ಎಕ್ಸ್ಪ್ರೆಸ್ ವಿಶೇಷ ರೈಲು ಸಂಖ್ಯೆ (06567) 2025 ಅಕ್ಟೋಬರ್ 21ರಿಂದ ಸಂಚರಿಸುತ್ತದೆ. ಅಂದು ಮಂಗಳವಾರ ರಾತ್ರಿ 11.00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ಹೊರಡುತ್ತದೆ. ಮರುದಿನ ಅಕ್ಟೋಬರ್ 22ರಂದು ಮಧ್ಯಾಹ್ನ 12.55ಕ್ಕೆ ಕೊಲ್ಲಂ ತಲುಪಲಿದೆ. ಈ ರೈಲು ಒಂದು ಬಾರಿ ಮಾತ್ರ ಸಂಚರಿಸುತ್ತದೆ.

ಕೊಲ್ಲಂ - ಬೆಂಗಳೂರು ಕ್ಯಾಂಟೋನ್ಮೆಂಟ್ ಎಕ್ಸ್ಪ್ರೆಸ್ ಸ್ಪೆಷಲ್ ರೈಲು (ಸಂಖ್ಯೆ 06568) 2025 ಅಕ್ಟೋಬರ್ 22ರಂದು ಬುಧವಾರ ಸಂಜೆ 5 ಗಂಟೆಗೆ ಕೊಲ್ಲಂ ನಿಲ್ದಾಣದಿಂದ ಹೊರಡುತ್ತದೆ. ಮರುದಿನ ಅಕ್ಟೋಬರ್ 23ರಂದು ಬೆಳಗ್ಗೆ 9.45ಕ್ಕೆ ಬೆಂಗಳೂರು ಕ್ಯಾಂಟೋನ್ಮೆಂಟ್ ನಿಲ್ದಾಣಕ್ಕೆ ಬಂದು ಸೇರಲಿದೆ.
ರೈಲು ನಿಲುಗಡೆ ನಿಲ್ದಾಣಗಳು & ಸಮಯ
ಎಸ್ಎಂವಿಟಿ ಬೆಂಗಳೂರು - ಕೊಲ್ಲಂ ರೈಲು (ಸಂಖ್ಯೆ 06567) ಕೆ.ಆರ್ ಪುರಂ (23.10 ಗಂಟೆಗೆ ಆಗಮಿಸಿ/23.12ಕ್ಕೆ ನಿಗಮಿಸುತ್ತದೆ), ಅದೇ ರೀತಿ ಬಂಗಾರಪೇಟೆ ನಿಲ್ದಾಣ (00.03/00.05), ಸೇಲಂ (03.07/03.10), ಈರೋಡ್ (04.05/04.10), ತಿರುಪ್ಪೂರು (04.53/04.55), ಪೊಡನೂರ್ (05.48/05.50), ಪಾಳಕ್ಕಾಡ್ (06.45/06.50), ತ್ರಿಶೂರ್ (07.42/07.45), ಅಲುವಾ (08.40/08.42), ಏರ್ನಾಕುಲಂ ಟೌನ್ (09.15/09.20), ಕೋಟಾಯಂ (10.25/10.28), ಚಂಗಾನಸೇರಿ (10.45/10.46), ತಿರುವಲ್ಲ (10.55/10.56), ಚೆಂಗಣ್ಣೂರು (11.05/11.07), ಮಾವೆಲಿಕ್ಕರ (11.19/11.20), ಕಯಂಕುಳಂ (11.28/11.30) ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಈ ರೈಲು ಎಲ್ಲ ವಿಧದ ಬೋಗಿಗಳನ್ನು ಹೊಂದಿದೆ. 2 ಎಸಿ ಟೂ ಟೈರ್ ಬೋಗಿಗಳು, 3 ಎಸಿ ತ್ರಿ ಟೈಯರ್ ಬೋಗಿಗಳು, 11 ಸ್ಲೀಪರ್ ಬೋಗಿಗಳು, 4 ಸಾಮಾನ್ಯ ದ್ವಿತೀಯ ವರ್ಗ ಬೋಗಿಗಳು ಹಾಗೂ 2 ದಿವ್ಯಾಂಗ ಸ್ನೇಹಿ ಬೋಗಿಗಳು ಇರಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ರೈಲು ಸೇವೆಗಳು ದಕ್ಷಿಣ ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ತಮಿಳುನಾಡು ಹಾಗೂ ಕೇರಳದ ನಡುವಿನ ಪ್ರಯಾಣಿಕರಿಗೆ ಅನುಕೂಲ ಒದಗಿಸಲಿವೆ. ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ರೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications