ಎಚ್.ಎಸ್.ದೊರೆಸ್ವಾಮಿ ಧರಣಿಗೆ ಮಣಿದ ಸರ್ಕಾರ

ಮಂಗಳವಾರ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಎ.ಟಿ.ರಾಮಸ್ವಾಮಿ ಮತ್ತು ಯಲ್ಲಪ್ಪ ರೆಡ್ಡಿ ಮುಂತಾದವರು, ವಿಧಾನಸೌಧದದಲ್ಲಿರುವ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿಬಿ ಜಯಚಂದ್ರ ಅವರ 327ನೇ ಕೊಠಡಿ ಮುಂದೆ ಪ್ರತಿಭಟನೆ ನಡೆಸಿದರು. ಭೂ ಮಾಫಿಕಾ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. [ವಿಧಾನಸೌದದಲ್ಲಿ ಧರಣಿ ಕೂತ ದೊರೆಸ್ವಾಮಿ]
ಕರ್ನಾಟಕ ಭೂ ಒತ್ತುವರಿ ನಿಷೇಧ ಮಸೂದೆ ಜಾರಿ ಹಾಗೂ ಎ.ಟಿ.ರಾಮಸ್ವಾಮಿ ಮತ್ತು ವಿ.ಬಾಲಸುಬ್ರಮಣಿಯನ್ ನೀಡಿದ ಸರ್ಕಾರಿ ಭೂ ಒತ್ತುವರಿ ವರದಿಯನ್ನು ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವ ಮೂಲಕ ಸರ್ಕಾರಿ ಭೂಮಿ ಒತ್ತುವರಿ ಮಾಡುವವರ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಧರಣಿ ಸ್ಥಳಕ್ಕೆ ಆಗಮಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿಬಿ ಜಯಚಂದ್ರ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ದೊರೆಸ್ವಾಮಿ ಅವರಿಗೆ ಭರವಸೆ ನೀಡಿದರು. ನಂತರ ಸಂಜೆ ವಿಧಾನಸೌಧದದಲ್ಲಿ ಸಚಿವ ಜಯಚಂದ್ರ ಹಾಗೂ ಕಂದಾಯ ಸಚಿವ ಶ್ರೀನಿವಾಸ ಪ್ರಸಾದ್ ಅವರು ದೊರೆಸ್ವಾಮಿ ಹಾಗೂ ಇತರರೊಂದಿಗೆ ಸಭೆ ನಡೆಸಿದರು.
ಭೂ ಮಾಫಿಯಾಕ್ಕೆ ಕಡಿವಾಣ ಹಾಕಲು ಸರ್ಕಾರ ಸಿದ್ಧವಿದೆ ಎಂದು ದೊರೆಸ್ವಾಮಿ ಅವರಿಗೆ ಸಚಿವರು ಭರವಸೆ ನೀಡಿದರು. ಸರ್ಕಾರಿ ಭೂಮಿ ಒತ್ತುವರಿ ಕುರಿತು ಚರ್ಚೆ ನಡೆಸಿದ ಸಚಿವರು, 2011ರ ಭೂ ಒತ್ತುವರಿ ನಿಷೇಧ ವಿಧೇಯಕಕ್ಕೆ ಶೀಘ್ರ ಒಪ್ಪಿಗೆ ಪಡೆದು ಕಾಯ್ದೆ ರೂಪಿಸುವ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಟಿಬಿ ಜಯಚಂದ್ರ ಹೇಳಿದರು.
2011ರ ಭೂ ಒತ್ತುವರಿ ನಿಷೇಧ ವಿಧೇಯಕಕ್ಕೆ ಅನುಮೋದನೆ ದೊರೆತ ಬಳಿಕ, ಸರ್ಕಾರಿ ಭೂಮಿ ಒತ್ತುವರಿ ಕುರಿತು ತನಿಖೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಜಯಚಂದ್ರ ಹೇಳಿದರು. ಸರ್ಕಾರ ಭರವಸೆ ನೀಡಿದ ಹಿನ್ನಲೆಯಲ್ಲಿ ಎಚ್.ಎಸ್.ದೊರೆಸ್ವಾಮಿ ತಮ್ಮ ಧರಣಿಯನ್ನು ಹಿಂಪಡೆದಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications