ಜೆಪಿ ನಗರ ದೇಗುಲದಲ್ಲಿ 1 ಲಕ್ಷ ಆಟದ ಸಾಮಗ್ರಿ ಬಳಸಿ ವಿಶೇಷ ಆಲಂಕಾರ
ಬೆಂಗಳೂರು ಜುಲೈ 10: ಪ್ರತಿವರ್ಷವೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸುವ ಜೆಪಿ ನಗರದ ಶ್ರೀಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ ಈ ಬಾರಿ 1 ಲಕ್ಷ ಆಟದ ಸಾಮಗ್ರಿಗಳನ್ನು ಬಳಸಿ ವಿಶೇಷ ಆಲಂಕಾರ ವನ್ನು ಮಾಡಲಾಗಿದೆ. ಶಿರಡಿ ಸಾಯಿ ಬಾಬಾ ಅವರ ಸನ್ನಿಧಾನ ಹೊರತುಪಡಿಸಿದರೆ ಬೆಂಗಳೂರು ನಗರದಲ್ಲೇ ಅತ್ಯಂತ ವಿಭಿನ್ನ ಹಾಗೂ ವಿಶೇಷವಾದ ಅಲಂಕಾರವನ್ನು ಈ ದೇವಸ್ಥಾನದಲ್ಲಿ ಮಾಡಲಾಗುತ್ತದೆ.
''ಕ್ರೀಡೆಗಳು ಅದರಲ್ಲೂ ಸಾಂಪ್ರದಾಯಿಕ ಕ್ರೀಡೆಗಳು ನಮ್ಮ ಬದುಕಿನಲ್ಲಿ ಬಹಳ ಮಹತ್ವದ ಪಾತ್ರವಹಿಸುತ್ತವೆ. ಪ್ರತಿನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ವಿಕಸತೆ ಹೆಚ್ಚಾಗುತ್ತದೆ. ಹಾಗೆಯೇ ಆರೋಗ್ಯವೂ ಚೆನ್ನಾಗಿರುತ್ತದೆ'' ಎಂದು ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದ ಟ್ರಸ್ಟಿ ರಾಮ್ಮೋಹನರಾಜ್ ತಿಳಿಸಿದರು.
ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಖೇಲೋ ಇಂಡಿಯಾ ಘೋಷಣೆಯ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದ್ದರು. ಈ ಥೀಮನ್ನು ಅಳವಡಿಸಿಕೊಂಡು ಈ ಬಾರಿ ವಿಶೇಷವಾದ ಆಲಂಕಾರವನ್ನು ಮಾಡಲಾಗಿದೆ'' ಎಂದು ಟ್ರಸ್ಟಿ ರಾಮ್ಮೋಹನರಾಜ್ ಹೇಳಿದರು.

ಕಳೆದ ಬಾರಿ ಕೋವಿಡ್ ಇದ್ದಿದ್ದರಿಂದ ಮೂರು ಲಕ್ಷ ಮಾತ್ರೆಗಳನ್ನು ಬಳಸಿ ಆಲಂಕಾರ ಮಾಡಲಾಗಿತ್ತು. ಅದನ್ನ 1 ಲಕ್ಷ ಕುಟುಂಬಗಳಿಗೆ ಹಂಚಲಾಗಿತ್ತು. ಈ ಬಾರಿ ಮಕ್ಕಳು ಆಟ ಆಡುವಂತಹ ಸಾಮಗ್ರಿಗಳಾದ 50 ವಿವಿಧ ಸಾಮಗ್ರಿಗಳನ್ನು ಬಳಸಿ ವಿಶೇಷ ಆಲಂಕಾರವನ್ನು ಮಾಡಲಾಗುತ್ತಿದೆ. ಜುಲೈ 13 ರಿಂದ ಒಂದು ವಾರಗಳ ಕಾಲ ಈ ವಿಶೇಷ ಅಲಂಕಾರವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದಾಗಿದೆ.

''ಗೋಲಿ, ಬುಗರಿ, ಗಿಲ್ಲಿದಾಂಡು, ಕ್ಯಾಟರ್ ಪಿಲ್ಲರ್ ನಂತಹ ಸಾಂಪ್ರದಾಯಿಕ ಆಟದ ಸಾಮಗ್ರಿಗಳು, ಅಲ್ಲದೇ, ಕ್ರಿಕೆಟ್, ಟೆನ್ನೀಸ್, ಹಾಕಿ ಬ್ಯಾಟುಗಳು ಸೇರಿದಂತೆ ಹಲವಾರು ವಿಧಧ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿ ಬಳಸಲಾಗುತ್ತಿದೆ. ಗುರುಪೂರ್ಣಿಮೆ ಮುಗಿದ ನಂತರ ಈ ಸಾಮಗ್ರಿಗಳನ್ನು ಅಗತ್ಯವಿರುವಂತವರಿಗೆ ಉಚಿತವಾಗಿ ನೀಡಲಾಗುವುದು. ಕ್ರೀಡಾ ಸಾಮಗ್ರಿಗಳ ಅಗತ್ಯವಿರುವಂತಹ ಖಾಸಗಿ ಹಾಗೂ ಸರಕಾರಿ ಶಾಲೆಗಳು, ವಸತಿ ಸಮುಚ್ಚಯದ ಸಂಘಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬೇಡಿಕೆಯನ್ನು ನೋಡಿಕೊಂಡು ದೇವಸ್ಥಾನ ಮಂಡಳಿಯವರು ಉಚಿತವಾಗಿ ಆಟದ ಸಾಮಗ್ರಿಗಳನ್ನು ವಿತರಿಸಲಿದ್ದಾರೆ'' ಎಂದು ರಾಮ್ಮೋಹನ ರಾಜ್ ತಿಳಿಸಿದರು.
ಪ್ರತಿಬಾರಿಯೂ ವಿಶೇಷ ಅಲಂಕಾರ:
ಪ್ರತಿಬಾರಿಯೂ ಭಕ್ತರಿಗೆ ಹೊಸದನ್ನು ನೀಡಬೇಕು ಎನ್ನುವ ಉದ್ದೇಶ ಹೊಂದಿರುವ ಜೆಪಿ ನಗರದ ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್, ಅದಕ್ಕೂ ಮುನ್ನ ಕಬ್ಬನ್ನು ಬಳಸಿ ಗಣಪನ ಮೂರ್ತಿಯನ್ನು ನಿರ್ಮಿಸಲಾಗಿತ್ತು ಹಾಗೂ ಅದಕ್ಕೂ ಹಿಂದಿನ ವರ್ಷ 400 ಕೆಜಿ ಹತ್ತಿ ಬಳಸಿ ಬೃಹತ್ ಗಣಪನ ಮೂರ್ತಿಯನ್ನು ನಿರ್ಮಿಸಲಾಗಿತ್ತು. ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ 30 ಅಡಿ ಎತ್ತರದ ಕಬ್ಬಿನಲ್ಲಿಯೇ ನಿರ್ಮಿಸಲಾಗಿರುವ ಗಣೇಶ ಮೂರ್ತಿ ನಿರ್ಮಿಸಲಾಗಿತ್ತು. 50 ಟನ್ ಕಬ್ಬನ್ನು ಬಳಸಲಾಗಿದ್ದು, 50 ಕ್ಕೂ ಹೆಚ್ಚು ಕಾರ್ಮಿಕರು ಈ ಗಣಪತಿಯನ್ನು ನಿರ್ಮಿಸಲು ಹಗಲಿರುಳು ಶ್ರಮಿಸಿದ್ದರು.
Recommended Video

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್, ಪ್ಯಾರಾಸಿಟಮಾಲ್, ವಿಟಮಿನ್ ಸಿ, ಆಲ್ಕಾಫ್, ಬಿ ಕಾಂಫ್ಲೆಕ್ಸ್ ನಂತಹ ಮಾತ್ರೆಗಳನ್ನೇ ಬಳಸಿಕೊಂಡು ಬೇರೆ ಯಾರೂ ಮಾಡದಂತಹ ವಿಶಿಷ್ಟವಾದ ಆಲಂಕಾರವನ್ನು ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ಮಾಡಲಾಗಿತ್ತು.
ಈ ಆಲಂಕಾರದಲ್ಲಿ ಬಳಸಿಕೊಂಡಿರುವ ಎಲ್ಲಾ ಔಷಧ ಹಾಗೂ ರೇಷನ್ ಕಿಟ್ನ ಪದಾರ್ಥಗಳನ್ನು ಮಾನವರು, ಹಸುಗಳು ಹಾಗೂ ನಾಯಿಗಳಿಗೆ ದಾನದ ರೂಪದಲ್ಲಿ ನೀಡಲಾಗಿತ್ತು. ರೇಷನ್ ಕಿಟ್ ವಸ್ತುಗಳಾದ ಅಕ್ಕಿ, ಬೇಳೆ ಗೋಧಿ ಹಿಟ್ಟು, ಮೈದಾ ಹಿಟ್ಟು, ಸಕ್ಕರೆ, ಉಪ್ಪು, ರವೆ, ಎಣ್ಣೆ, ಈರುಳ್ಳಿ, ಮೆಕ್ಕೆ ಜೋಳ, ಬಿಸ್ಕತ್, ತೆಂಗಿನಕಾಯಿ ಎಲ್ಲವನ್ನು ದಾನವಾಗಿ ನೀಡಲಾಗಿತ್ತು
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications