'ಕ್ಷೌರಿಕರ ಕುರಿತ ನಿಂದನಾತ್ಮಕ ಪದ' ಬಳಕೆಗೆ ಶಿವರಾಜ್ ತಂಗಡಗಿ ಆಕ್ಷೇಪ, ವಿಶೇಷ ಕಾನೂನು ತರಲು ಚಿಂತನೆ
ಬೆಂಗಳೂರು: ಮನುಷ್ಯನ ಹುಟ್ಟಿನಿಂದ ಜಾತಿ ಬಂದಿಲ್ಲ, ವೃತ್ತಿಯಿಂದ ಜಾತಿ ಬಂದಿದೆ. ಸವಿತಾ ಸಮಾಜದವರನ್ನು ಕೀಳು ಭಾವನೆಯಿಂದ ನೋಡುವ ಪರಿಸ್ಥಿತಿಯನ್ನು, ಅವರ ಕುರಿತು ನಿಂದನಾತ್ಮಕ ಪದ (ಹಜಾಮ) ಬಳಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೌರಿಕ ವೃತ್ತಿ ಮಾಡುವ ಸವಿತಾ ಸಮಾಜದ ಬಂಧುಗಳನ್ನು ಕೆಲವೆಡೆ 'ಹಜಾಮ' ಎಂಬ ಕೀಳುಮಟ್ಟದ ಪದ ಬಳಸುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಪದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವಿಶೇಷ ಕಾನೂನು ತರುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಲಾಗುವುದು. ಅಗತ್ಯ ಬಿದ್ದರೆ ನಿಮ್ಮ ಸಮಾಜದ ಮುಖಂಡರ ನಿಯೋಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕರೆದೊಯ್ಯಲಾಗುವುದು ಎಂದು ತಿಳಿಸಿದರು.

ಸಾಮಾಜಿಕ ಸಮಾನತೆ ಸಾರಬೇಕಿದೆ
ಸಮಾಜದಲ್ಲಿರುವ ಕೀಳು ಭಾವನೆಯನ್ನು ತೊಡೆದು ಹಾಕಿ, ಸಾಮಾಜಿಕ ಸಮಾನತೆಯನ್ನು ಸಾರುವ ಅಗತ್ಯವಿದೆ. ಹುಟ್ಟುವಾಗ ಯಾರು ಕೂಡ ಜಾತಿಯ ಸೀಲ್ ಹಾಕಿಕೊಂಡು ಹುಟ್ಟಿಲ್ಲ. ನಾನು ಕೂಡ ಸಣ್ಣ ಸಮುದಾಯದಿಂದಲೇ ಬಂದಿರುವುದು. ಕೀಳು ಮಟ್ಟದಿಂದ ಕರೆಯುವವರಿಗೆ ತಕ್ಕ ಪಾಠ ಕಲಿಸುವ ಅಗತ್ಯವಿದೆ ಎಂದು ಅವರು ಕರೆ ನೀಡಿದರು.
ಸವಿತಾ ಸಮುದಾಯದವರು ಒಗ್ಗಟ್ಟಿನಿಂದ ಮುನ್ನಡೆಯ ಬೇಕು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಅಗತ್ಯವಿದೆ ಎಂದು ಹೇಳಿರುವುದು ಛಲವಾದಿ ಸಮುದಾಯಕ್ಕೆ ಮಾತ್ರವಲ್ಲ. ಪ್ರತಿಯೊಂದು ಶೋಷಿತ ಸಮುದಾಯದವರು ಎಚ್ಚರಗೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಆ ನಿಟ್ಟಿನಲ್ಲಿ ಸವಿತಾ ಸಮುದಾಯದವರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಸಲಹೆ ಕೊಟ್ಟರು.
ಸವಿತಾ ಸಮಾಜದ ಕೊಡುಗೆ ಅಪಾರ
ಸಮಾಜ ತಮ್ಮನ್ನು ಎಷ್ಟೇ ಕಡೆಗಣಿಸಿದರೂ ಅವೆಲ್ಲವನ್ನೂ ಸಕಾರಾತ್ಮಕವಾಗಿ ತೆಗೆದುಕೊಂಡು, ಸಂಗೀತದ ಮೂಲಕ ತಮ್ಮೆಲ್ಲ ನೋವುಗಳನ್ನು ಮರೆಯುತ್ತದೆ ಈ ಸಮುದಾಯ. ಇಂದಿಗೂ ಮಂಗಳವಾದ್ಯವಿಲ್ಲದೆ, ಚೌಲಕರ್ಮವಿಲ್ಲದೆ ಯಾವ ಶುಭ ಕಾರ್ಯಗಳು ಪ್ರಾರಂಭವಾಗುವುದೇ ಇಲ್ಲ. ಜೀವನದ ಪ್ರತಿಯೊಂದು ಹಂತದಲ್ಲೂ ಸವಿತಾ ಜನಾಂಗದವರ ಕೊಡುಗೆ ಅಪಾರ. ಇಂತಹ ತ್ಯಾಗಜೀವಿಗಳ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಶ್ರೀ ಸವಿತಾ ಮಹರ್ಷಿಯವರನ್ನು ಗೌರವಿಸುವ ಈ ಸಂದರ್ಭ ಅವಿಸ್ಮರಣೀಯ ಎಂದು ತಿಳಿಸಿದರು.
ಸವಿತಾ ಮಹರ್ಷಿಗಳು ತಮ್ಮ ಕಾಯಕವನ್ನು ಮಾಡುತ್ತಲೇ ಅಧ್ಯಯನವನ್ನು ಮುಂದುವರೆಸಿ, ಮಹಾ ಜ್ಞಾನಿಗಳಾದರು. ಅವರ ಈ ನಡೆ ನಮಗೆಲ್ಲ ಮಾದರಿಯಾಗಬೇಕು ಎಂದರು.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications